Homeಕರೋನಾ ತಲ್ಲಣಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

- Advertisement -
- Advertisement -

ಕಣ್ವ ಸಾಮ್ರಾಜ್ಯ ಕುಸಿಯತೊಡಗಿದೆ. ಕೆಲವೇ ವರ್ಷಗಳಲ್ಲಿ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬಂದ ಈ ಕಂಪನಿ ಅಷ್ಟೆ ವೇಗದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಅವನತಿಯ ಹಾದಿ ಹಿಡಿಯತೊಡಗಿದೆ.

ಹತ್ತು ಹಲವು ಕ್ಷೇತ್ರದಲ್ಲಿ ಹೂಡಿಕೆ ಮಾಡಿ ಪ್ರಸಿದ್ದಿಗೆ ಬಂದಿದ್ದ ಈ ಸಂಸ್ಥೆ ಈಗ ಅವ್ಯವಹಾರದ ಹಿನ್ನೆಲೆಯಲ್ಲಿ ಪತನದತ್ತ ಸಾಗಿದೆ. ಕಣ್ವ ಸಾಮ್ರಾಜ್ಯ ಸಂಸ್ಥೆಗಳ ಸಂಸ್ಥಾಪಕರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಬಂಧಿಸಿ ವಾರ ಕಳೆದಿದ್ದು, ಸಂಸ್ಥೆ ನೌಕರರು ಮತ್ತು ಕಾರ್ಮಿಕರು ವೇತನ ಸಿಗದೆ ತೊಂದರೆ ಅನುಭವಿಸಬೇಕಾಗಿ ಬಂದಿದೆ ಮತ್ತು ಉದ್ಯೋಗದ ಭದ್ರತೆ ಇಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ.

ಕೊರಟಗೆರೆ ತಾಲೂಕಿನ ಬಡ ರೈತ ಕುಟುಂಬದಿಂದ ಬಂದ ನಂಜುಂಡಪ್ಪ ಕಣ್ಣ ಸಂಸ್ಥೆ ಹುಟ್ಟುಹಾಕಿದರು. ಕಣ್ಣ ಸಂಸ್ಥೆಯ ಹೆಸರಿನಲ್ಲಿ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಕಣ್ವ ಮಾರ್ಟ್, ಬಟ್ಟೆ ಅಂಗಡಿಗಳು, ಹಣಕಾಸು ಸಂಸ್ಥೆಗಳು, ಗಾರ್ಮೆಂಟ್ಸ್ ಗಳು – ಹೀಗೆ ಎಲ್ಲಾ ಕ್ಷೇತ್ರದಲ್ಲೂ ಹಣ ಹೂಡಿದರು. ಮಳಿಗೆಗಳನ್ನು ತೆರೆದರು. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದರು. ತುಮಕೂರು, ನೆಲಮಂಗಲ ಮತ್ತು ಬೆಂಗಳೂರನ್ನು ಕೇಂದ್ರ ಸ್ಥಾನ ಮಾಡಿಕೊಂಡು ಸಂಸ್ಥೆಗಳನ್ನು ತೆರೆದು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದರು.

ಬೆಂಗಳೂರು, ನೆಲಮಂಗಲ, ತುಮಕೂರು ನಗರದಲ್ಲಿ ಕಣ್ವ ಪಬ್ಲಿಕ್ ಸ್ಕೂಲ್ ಗಳು, ರಾಜಾಜಿನಗರದ 4ನೇ ಹಂತದಲ್ಲಿ ಕಣ್ವ ಡೈಯಾಗ್ನೋಸ್ಟಿಕ್ ಸರ್ವೀಸ್ ಸೆಂಟರ್ ಪ್ರೈ.ಲಿ., ಕಣ್ವ ಶ್ರೀ ಸಾಯಿ ಆಸ್ಪತ್ರೆ ಔಷಧಿ ಮಳಿಗೆ, ಕಣ್ವ ಜವಳಿ ಮಳಿಗೆ, ಕಣ್ವ ಮಾರ್ಟ್ ಚಿಕ್ಕಬಾಣಾವರ, ಕಣ್ವ ಬಜಾರ್ ರೆಡಿಮೇಡ್ ಗಾರ್ಮೆಂಟ್ಸ್ ವ್ಯಾಪಾರಿ ಮಳಿಗೆ, ಕಣ್ವ ಫ್ಯಾಷನ್ ಲಿಮಿಟೆಡ್, ಕೊರಟಗೆರೆಯಲ್ಲಿ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ನೂರಾರು ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರಿಗೆ ಕೆಲಸ ನೀಡಿ ಅವರ ಕುಟುಂಬಗಳಿಗೆ ಆಸರೆಯಾದರು.

ಇದನ್ನೂ ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ನೆಲಮಂಗಲದಲ್ಲಿದ್ದ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಅನ್ನು ಕೊರಟಗೆರೆ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಸ್ಥಳಾಂತರಿಸಿದರು.  ಈ ಗಾರ್ಮೆಂಟ್ಸ್ ಒಂದರಲ್ಲೇ 1200ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದರು. ಈಗ ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿರುವುದು ಲಕ್ಷಾಂತರ ಕಾರ್ಮಿಕರಿಗೆ ಉದ್ಯೋಗ ಕಳೆದು ಕೊಳ್ಳುವ ಅಭದ್ರತೆ ಕಾಡತೊಡಗಿದೆ. ಗಾರ್ಮೆಂಟ್ಸ್ ಕಾರ್ಮಿಕರು ವೇತನಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದು, ನಂಜುಂಡಪ್ಪ ಅವರು ವೇತನ ನೀಡುವ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಣ್ವ ಮಾರ್ಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸಾರ್ವಜನಿಕರು ಹಣ ತೊಡಗಿಸಿದ್ದಾರೆ. ಕೋಟ್ಯಂತರ ರೂಪಾಯಿ ಶೇರುಗಳನ್ನು ಹಾಕಿದ್ದಾರೆ. ಇದೀಗ ಸಂಸ್ಥೆಯಲ್ಲಿ ಅವ್ಯವಹಾರ, ವಂಚನೆ ಆರೋಪಗಳು ಕೇಳಿ ಬಂದಿರುವುದು ಹಣ ತೊಡಗಿಸಿದವರಲ್ಲೂ ಅತಂಕ ಶುರುವಾಗಿದೆ.

ಸಫಾರಿ ಮತ್ತು ಸ್ಕೂಲ್ ಯೂನಿಫಾರಂ ಖರೀದಿಸುವಂತೆ ಸಾವಿರಾರು ಏಜೆಂಟರು ಜನರಿಂದ ಹಣ ಸಂಗ್ರಹ ಮಾಡುತ್ತಿದ್ದರು. 25 ಸಾವಿರ ರೂಗಳಿಂದ 10 ಲಕ್ಷದವರೆಗೆ ಹಣ ತೊಡಗಿಸಿದವರೂ ಇದ್ದಾರೆ. ಈಗ ಕಣ್ವ ಗ್ರೂಪ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾವಿರಾರು ಏಜೆಂಟರು ಕೂಡ ತಾವು ತೊಡಗಿಸಿರುವ ಮತ್ತು ಗ್ರಾಹಕರಿಂದ ಕೊಡಿಸಿರುವ ಹಣ ಕೈಗೆ ಬರುವುದೇ ಎಂಬ ಆತಂಕದಲ್ಲಿದ್ದಾರೆ.

ಕಳೆದ ಒಂದು ವಾರದ ಹಿಂದೆಯೇ ಜಾರಿ ನಿರ್ದೇಶನಾಲಯ ಕಣ್ವ ಗ್ರೂಪ್  ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಈ ಸುದ್ದಿಗೆ ಮಹತ್ವ ನೀಡಿಲ್ಲ.

ಲಕ್ಷಾಂತರ ಮಂದಿ ಹಣ ತೊಡಗಿಸಿರುವುದು, ಸಾವಿರಾರು ಮಂದಿ ಕಾರ್ಮಿಕರು ಕೆಲಸವಿಲ್ಲದೆ ವೇತನವಿಲ್ಲದೆ ಕೊರೊನಾ ಕಾಲದಲ್ಲಿ ತೊಂದರೆ ಅನುಭವಿಸುತ್ತಿದ್ದರೂ ಕಾರ್ಮಿಕರ ಗೋಳನ್ನು ಕೇಳುವವರೇ ಇಲ್ಲವಾಗಿದೆ.

ಕಣ್ವ ಗ್ರೂಪ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲರ ಕೆಲಸಗಳಿಗೆ ಕುತ್ತು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...