Homeಕರೋನಾ ತಲ್ಲಣಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

- Advertisement -
- Advertisement -

ಕಣ್ವ ಸಾಮ್ರಾಜ್ಯ ಕುಸಿಯತೊಡಗಿದೆ. ಕೆಲವೇ ವರ್ಷಗಳಲ್ಲಿ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬಂದ ಈ ಕಂಪನಿ ಅಷ್ಟೆ ವೇಗದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಅವನತಿಯ ಹಾದಿ ಹಿಡಿಯತೊಡಗಿದೆ.

ಹತ್ತು ಹಲವು ಕ್ಷೇತ್ರದಲ್ಲಿ ಹೂಡಿಕೆ ಮಾಡಿ ಪ್ರಸಿದ್ದಿಗೆ ಬಂದಿದ್ದ ಈ ಸಂಸ್ಥೆ ಈಗ ಅವ್ಯವಹಾರದ ಹಿನ್ನೆಲೆಯಲ್ಲಿ ಪತನದತ್ತ ಸಾಗಿದೆ. ಕಣ್ವ ಸಾಮ್ರಾಜ್ಯ ಸಂಸ್ಥೆಗಳ ಸಂಸ್ಥಾಪಕರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಬಂಧಿಸಿ ವಾರ ಕಳೆದಿದ್ದು, ಸಂಸ್ಥೆ ನೌಕರರು ಮತ್ತು ಕಾರ್ಮಿಕರು ವೇತನ ಸಿಗದೆ ತೊಂದರೆ ಅನುಭವಿಸಬೇಕಾಗಿ ಬಂದಿದೆ ಮತ್ತು ಉದ್ಯೋಗದ ಭದ್ರತೆ ಇಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ.

ಕೊರಟಗೆರೆ ತಾಲೂಕಿನ ಬಡ ರೈತ ಕುಟುಂಬದಿಂದ ಬಂದ ನಂಜುಂಡಪ್ಪ ಕಣ್ಣ ಸಂಸ್ಥೆ ಹುಟ್ಟುಹಾಕಿದರು. ಕಣ್ಣ ಸಂಸ್ಥೆಯ ಹೆಸರಿನಲ್ಲಿ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಕಣ್ವ ಮಾರ್ಟ್, ಬಟ್ಟೆ ಅಂಗಡಿಗಳು, ಹಣಕಾಸು ಸಂಸ್ಥೆಗಳು, ಗಾರ್ಮೆಂಟ್ಸ್ ಗಳು – ಹೀಗೆ ಎಲ್ಲಾ ಕ್ಷೇತ್ರದಲ್ಲೂ ಹಣ ಹೂಡಿದರು. ಮಳಿಗೆಗಳನ್ನು ತೆರೆದರು. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದರು. ತುಮಕೂರು, ನೆಲಮಂಗಲ ಮತ್ತು ಬೆಂಗಳೂರನ್ನು ಕೇಂದ್ರ ಸ್ಥಾನ ಮಾಡಿಕೊಂಡು ಸಂಸ್ಥೆಗಳನ್ನು ತೆರೆದು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದರು.

ಬೆಂಗಳೂರು, ನೆಲಮಂಗಲ, ತುಮಕೂರು ನಗರದಲ್ಲಿ ಕಣ್ವ ಪಬ್ಲಿಕ್ ಸ್ಕೂಲ್ ಗಳು, ರಾಜಾಜಿನಗರದ 4ನೇ ಹಂತದಲ್ಲಿ ಕಣ್ವ ಡೈಯಾಗ್ನೋಸ್ಟಿಕ್ ಸರ್ವೀಸ್ ಸೆಂಟರ್ ಪ್ರೈ.ಲಿ., ಕಣ್ವ ಶ್ರೀ ಸಾಯಿ ಆಸ್ಪತ್ರೆ ಔಷಧಿ ಮಳಿಗೆ, ಕಣ್ವ ಜವಳಿ ಮಳಿಗೆ, ಕಣ್ವ ಮಾರ್ಟ್ ಚಿಕ್ಕಬಾಣಾವರ, ಕಣ್ವ ಬಜಾರ್ ರೆಡಿಮೇಡ್ ಗಾರ್ಮೆಂಟ್ಸ್ ವ್ಯಾಪಾರಿ ಮಳಿಗೆ, ಕಣ್ವ ಫ್ಯಾಷನ್ ಲಿಮಿಟೆಡ್, ಕೊರಟಗೆರೆಯಲ್ಲಿ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ನೂರಾರು ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರಿಗೆ ಕೆಲಸ ನೀಡಿ ಅವರ ಕುಟುಂಬಗಳಿಗೆ ಆಸರೆಯಾದರು.

ಇದನ್ನೂ ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ನೆಲಮಂಗಲದಲ್ಲಿದ್ದ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಅನ್ನು ಕೊರಟಗೆರೆ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಸ್ಥಳಾಂತರಿಸಿದರು.  ಈ ಗಾರ್ಮೆಂಟ್ಸ್ ಒಂದರಲ್ಲೇ 1200ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದರು. ಈಗ ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿರುವುದು ಲಕ್ಷಾಂತರ ಕಾರ್ಮಿಕರಿಗೆ ಉದ್ಯೋಗ ಕಳೆದು ಕೊಳ್ಳುವ ಅಭದ್ರತೆ ಕಾಡತೊಡಗಿದೆ. ಗಾರ್ಮೆಂಟ್ಸ್ ಕಾರ್ಮಿಕರು ವೇತನಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದು, ನಂಜುಂಡಪ್ಪ ಅವರು ವೇತನ ನೀಡುವ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಣ್ವ ಮಾರ್ಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸಾರ್ವಜನಿಕರು ಹಣ ತೊಡಗಿಸಿದ್ದಾರೆ. ಕೋಟ್ಯಂತರ ರೂಪಾಯಿ ಶೇರುಗಳನ್ನು ಹಾಕಿದ್ದಾರೆ. ಇದೀಗ ಸಂಸ್ಥೆಯಲ್ಲಿ ಅವ್ಯವಹಾರ, ವಂಚನೆ ಆರೋಪಗಳು ಕೇಳಿ ಬಂದಿರುವುದು ಹಣ ತೊಡಗಿಸಿದವರಲ್ಲೂ ಅತಂಕ ಶುರುವಾಗಿದೆ.

ಸಫಾರಿ ಮತ್ತು ಸ್ಕೂಲ್ ಯೂನಿಫಾರಂ ಖರೀದಿಸುವಂತೆ ಸಾವಿರಾರು ಏಜೆಂಟರು ಜನರಿಂದ ಹಣ ಸಂಗ್ರಹ ಮಾಡುತ್ತಿದ್ದರು. 25 ಸಾವಿರ ರೂಗಳಿಂದ 10 ಲಕ್ಷದವರೆಗೆ ಹಣ ತೊಡಗಿಸಿದವರೂ ಇದ್ದಾರೆ. ಈಗ ಕಣ್ವ ಗ್ರೂಪ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾವಿರಾರು ಏಜೆಂಟರು ಕೂಡ ತಾವು ತೊಡಗಿಸಿರುವ ಮತ್ತು ಗ್ರಾಹಕರಿಂದ ಕೊಡಿಸಿರುವ ಹಣ ಕೈಗೆ ಬರುವುದೇ ಎಂಬ ಆತಂಕದಲ್ಲಿದ್ದಾರೆ.

ಕಳೆದ ಒಂದು ವಾರದ ಹಿಂದೆಯೇ ಜಾರಿ ನಿರ್ದೇಶನಾಲಯ ಕಣ್ವ ಗ್ರೂಪ್  ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಈ ಸುದ್ದಿಗೆ ಮಹತ್ವ ನೀಡಿಲ್ಲ.

ಲಕ್ಷಾಂತರ ಮಂದಿ ಹಣ ತೊಡಗಿಸಿರುವುದು, ಸಾವಿರಾರು ಮಂದಿ ಕಾರ್ಮಿಕರು ಕೆಲಸವಿಲ್ಲದೆ ವೇತನವಿಲ್ಲದೆ ಕೊರೊನಾ ಕಾಲದಲ್ಲಿ ತೊಂದರೆ ಅನುಭವಿಸುತ್ತಿದ್ದರೂ ಕಾರ್ಮಿಕರ ಗೋಳನ್ನು ಕೇಳುವವರೇ ಇಲ್ಲವಾಗಿದೆ.

ಕಣ್ವ ಗ್ರೂಪ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲರ ಕೆಲಸಗಳಿಗೆ ಕುತ್ತು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...