Homeಮುಖಪುಟಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಇಂದಿನ ಮನ್-ಕಿ-ಬಾತ್ ಕಾರ್ಯಕ್ರಮದಲ್ಲಿ ಗೊಂಬೆಗಳ ಉದ್ಯಮದ ಬಗ್ಗೆ ಮಾತನಾಡಿದ್ದರು. 

- Advertisement -
- Advertisement -

ದೇಶದಾದ್ಯಂತ ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಕೂಗು ಕೇಳಿ ಬರುತ್ತಿದ್ದರೂ ಸಹ, ಅದರ ಕುರಿತು ಚರ್ಚಿಸುವುದನ್ನು ಬಿಟ್ಟು, ಪ್ರಧಾನಿ ಮೋದಿ ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ರಾಹುಲ್ ಗಾಂಧಿ ಅಣಕಿಸಿದ್ದಾರೆ.

ಕೊರೊನಾ ಮಧ್ಯೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ನಂತರ ಜೆಇಇ-ನೀಟ್ ಆಕಾಂಕ್ಷಿಗಳ ಕುಂದುಕೊರತೆಗಳನ್ನು ಪರಿಹರಿಸದ ಕಾರಣಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಇಂದಿನ ಮನ್-ಕಿ-ಬಾತ್ ಕಾರ್ಯಕ್ರಮದಲ್ಲಿ ಗೊಂಬೆಗಳ ಉದ್ಯಮದ ಬಗ್ಗೆ ಮಾತನಾಡಿದ್ದರು.

ಇದರ ಬಗ್ಗೆ ರಾಹುಲ್ ಗಾಂಧಿ, “ಜೆಇಇ-ನೀಟ್ ಆಕಾಂಕ್ಷಿಗಳು ಪ್ರಧಾನಮಂತ್ರಿ “ಪರಿಕ್ಷ ಪೆ ಚಾರ್ಚಾ” ಮಾಡಬೇಕೆಂದು ಬಯಸಿದ್ದರು ಆದರೆ ಪ್ರಧಾನಿ “ಖಿಲೋನ್ ಪೆ ಚಾರ್ಚಾ” ಮಾಡಿದರು” ಎಂದು ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಸೆಪ್ಟೆಂಬರ್ 30 ರೊಳಗೆ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗಕ್ಕೆ ಅನುಮತಿ ನೀಡಿತು.

ಸೆಪ್ಟೆಂಬರ್ 13 ರಂದು ನೀಟ್ ನಡೆಸಲಾಗುವುದು. ಜೆಇಇ ಅನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಜೆಇಇ ಮತ್ತು ನೀಟ್‌ಗೆ ಕ್ರಮವಾಗಿ ಸುಮಾರು 9.53 ಲಕ್ಷ ಮತ್ತು 15.97 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ.

ಕೊರೊನಾ ವೈರಸ್ ಪ್ರಕರಣಗಳು ದೇಶದಲ್ಲಿ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣಿಸದ ಕಾರಣ ಈ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧದ ದನಿಗಳು ಹೆಚ್ಚುತ್ತಿವೆ.

ಕಾಂಗ್ರೆಸ್ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿ, ನಿರ್ಧಾರದ ವಿರುದ್ಧ ಆನ್‌ಲೈನ್ ಅಭಿಯಾನ ನಡೆಸಿದ್ದು, ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವಂತೆ ಸೋನಿಯಾ ಗಾಂಧಿ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ, ವಿವಿಧ ವಿಶ್ವವಿದ್ಯಾಲಯಗಳ ಸುಮಾರು 150 ಶಿಕ್ಷಣ ತಜ್ಞರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, “ಯೋಜಿಸಿದಂತೆ ಪರೀಕ್ಷೆಗಳೊಂದಿಗೆ ಮುಂದುವರಿಯಿರಿ ಮತ್ತು ವಿರೋಧದ ದನಿಗಳಿಗೆ ಅವಕಾಶ ನೀಡಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...