Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ; ಸುಪ್ರೀಂನಿಂದ ಇಂದು ಶಿಕ್ಷೆ ಪ್ರಕಟ: ತೀರ್ಪು ಮರುಪರಿಶೀಲಿಸುವಂತೆ 122 ಕಾನೂನು ವಿದ್ಯಾರ್ಥಿಗಳಿಂದ...

ಪ್ರಶಾಂತ್ ಭೂಷಣ್ ಪ್ರಕರಣ; ಸುಪ್ರೀಂನಿಂದ ಇಂದು ಶಿಕ್ಷೆ ಪ್ರಕಟ: ತೀರ್ಪು ಮರುಪರಿಶೀಲಿಸುವಂತೆ 122 ಕಾನೂನು ವಿದ್ಯಾರ್ಥಿಗಳಿಂದ ಒತ್ತಾಯ

"ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಾಂಗವು ತನ್ನ ಪ್ರಕರಣವನ್ನು ಬದಲಾಯಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಕ್ಕಾಗಿ ನ್ಯಾಯಾಲಯವು ತಿರಸ್ಕಾರಕ್ಕೆ ಗುರಿಯಾಗಬಾರದು" ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಶಿಕ್ಷೆ ಪ್ರಕಟಗೊಳಿಸಲಿದೆ. ದೇಶದಾದ್ಯಂತ ಸುಮಾರು 122 ಜನ ಕಾನೂನು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟಿನ ತೀರ್ಪನ್ನು ಮರುಪರಿಶೀಲಿಸುವಂತೆ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯ ನ್ಯಾಯಾಧೀಶರಾದ ಬೊಬಡೆ ಮತ್ತು ಸುಪ್ರೀಂ ಕೋರ್ಟನ್ನು ಟೀಕಿಸಿದ್ದಾರೆ ಎಂದು ಪ್ರಶಾಂತ್ ಭೂಷಣ್ ಮೇಲೆ ಸುಪ್ರೀಂ ಸ್ವಯಂ ಪ್ರಕರಣ ದಾಖಲಿಸಿಕೊಂಡಿತ್ತು. ಭೂಷಣ್ ತಪ್ಪಿತಸ್ಥ ಎಂದು ಹೇಳಿದ ಸುಪ್ರೀಂ, ಕ್ಷಮೆ ಕೇಳಲು ಅವಕಾಶ ನೀಡಿತ್ತು. ಆದರೆ ಪ್ರಶಾಂತ್ ಭೂಷಣ್, “ನಾನು ಸಂವಿಧಾನದ ಅಡಿಯಲ್ಲಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಕ್ಷಮೆಯಾಚಿಸುವುದು “ನನ್ನ ಆತ್ಮಸಾಕ್ಷಿಯ ತಿರಸ್ಕಾರ” ಎಂದು ಭೂಷಣ್ ಆಗಸ್ಟ್ 24 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು. “ಹಾಗಾಗಿ ಕ್ಷಮೆ ಕೇಳುವ ಪ್ರಮೇಯವಿಲ್ಲ” ಎಂದು ಅಫಿಡವಿಟ್ ಸಲ್ಲಿಸಿದ್ದರು.

ಇದು ಸುಪ್ರೀಂ ಅನ್ನು ಮತ್ತಷ್ಟು ಅವಹೇಳನ ಮಾಡಿದೆ ಎಂದು ಸುಪ್ರೀಂ ಹೇಳಿತ್ತು. “ಭೂಷಣ್ ಅವರಂತಹ 30 ವರ್ಷಗಳ ಅನುಭವದ ಹಿರಿಯ ವಕೀಲರು ವರ್ತಿಸಬೇಕಾದ ರೀತಿ ಇದಲ್ಲ” ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅಭಿಪ್ರಾಯಪಟ್ಟಿದ್ದರು.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು.

ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.

ಇಂದು ಶಿಕ್ಷೆ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕಾನೂನು ವಿದ್ಯಾರ್ಥಿಗಳು ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಮತ್ತು ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ‘ತೀರ್ಪನ್ನು ಮರುಪರಿಶೀಲಿಸುವಂತೆ’ ಒತ್ತಾಯಿಸಿ ಪತ್ರ ಬರೆದಿದ್ದಾರೆ ಎಂದು ಎನ್ ಡಿ ಟಿ ವಿ ವರದಿ ಮಾಡಿದ್ದಾಗಿ ಸ್ಕ್ರಾಲ್.ಇನ್ ತಿಳಿಸಿದೆ.

ಇದನ್ನೂ ಓದಿ: ಪ್ರಶಾಂತ್ ಭೂಷಣ್ ಮೇಲಿನ ಸುಪ್ರೀಂಕೋರ್ಟ್ ಕ್ರಮ ಅಸಂವಿಧಾನಿಕ: ನ್ಯಾಯಮೂರ್ತಿ ಕರ್ಣನ್‌

ವಿದ್ಯಾರ್ಥಿಗಳು ಪತ್ರದಲ್ಲಿ ನ್ಯಾಯಾಧೀಶರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಾಂಗವು ತನ್ನ ಪ್ರಕರಣವನ್ನು ಬದಲಾಯಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಕ್ಕಾಗಿ ನ್ಯಾಯಾಲಯವು ತಿರಸ್ಕಾರಕ್ಕೆ ಗುರಿಯಾಗಬಾರದು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಾರದರ್ಶಕತೆ, ಹೊಣೆಗಾರಿಕೆ, ಪರಿಸರ ಸಂರಕ್ಷಣೆ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಭೂಷಣ್ ವರ್ಷಗಳಿಂದ ನ್ಯಾಯಾಲಯಗಳಲ್ಲಿ ಹೋರಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕಾನೂನು ಭ್ರಾತೃತ್ವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಭೂಷಣ್ ಅವರ ಕೊಡುಗೆಯನ್ನು ಎಲ್ಲರೂ ಮೆಚ್ಚಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಭೂಷಣ್ ಅವರ ಎರಡು ಟ್ವೀಟ್‌ಗಳು ನ್ಯಾಯಾಲಯದ ಪಾವಿತ್ರ್ಯವನ್ನು ನೋಯಿಸುತ್ತವೆ ಎಂದು ಒಪ್ಪಲು ಸಾಧ್ಯವಿಲ್ಲ. ಬದಲಾಗಿ, ಅವರು ಅಂಚಿನಲ್ಲಿರುವ ಮತ್ತು ಧ್ವನಿರಹಿತ ಸಮುದಾಯದ ಧ್ವನಿಯನ್ನು ಪ್ರತಿನಿಧಿಸುತ್ತದೆ ಎಂದು ವಿದ್ಯಾರ್ತಿಗಳು ಪತ್ರದಲ್ಲಿ ಬರೆದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ವಿ.ಕೆ.ಅಯ್ಯರ್ ಅವರ ತೀರ್ಪನ್ನು ಉಲ್ಲೇಖಿಸಿ “ನ್ಯಾಯಾಂಗವನ್ನು ನ್ಯಾಯಯುತವಾಗಿ ಟೀಕಿಸುವುದು ಅಪರಾಧವಲ್ಲ. ಇದು ಪ್ರಜಾಪ್ರಭುತ್ವದಲ್ಲಿ ಅಗತ್ಯವಾದ ಹಕ್ಕು” ಎಂದು ಕಾನೂನು ವಿದ್ಯಾರ್ಥಿಗಳು ಹೇಳಿದರು.

ಆಗಸ್ಟ್ 14 ರ ತೀರ್ಪಿನ ನಂತರ, ಮಾಜಿ ನ್ಯಾಯಾಧೀಶರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು ಮತ್ತು ವಕೀಲರು ಸೇರಿದಂತೆ ನಾಗರಿಕ ಸಮಾಜದ 3,000 ಕ್ಕೂ ಹೆಚ್ಚು ಸದಸ್ಯರು ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿದ್ದರು.

ಪ್ರತಿಪಕ್ಷದ ನಾಯಕರು, ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳಲ್ಲದೆ ವಕೀಲರ ಸಂಘದ 1,800 ಕ್ಕೂ ಹೆಚ್ಚು ಸದಸ್ಯರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಟೀಕಿಸಿದ್ದರು.

2009ರ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸೆಪ್ಟಂಬರ್ 10ಕ್ಕೆ ಮುಂದೂಡಿದ ನ್ಯಾಯಾಲಯವು ಇತ್ತೀಚಿನ ಪ್ರಕರಣದ ಕುರಿತು ಇಂದು ಶಿಕ್ಷೆ ಪ್ರಕಟಿಸಲಿದೆ. ಎಚ್ಚರಿಕೆ ನೀಡಿ ಬಿಡಲಾಗುವುದು ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...