Homeಮುಖಪುಟಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

"ಅವರು ಇತಿಹಾಸದ ಪುಟಗಳಲ್ಲಿ, ದೇಶದಲ್ಲಿ ಯಾರೂ ಮುಟ್ಟಿಸಿಕೊಳ್ಳದ, ಊರ ಹೊರಗಿಟ್ಟ, ಬದುಕುವ ಎಲ್ಲ ಅವಕಾಶಗಳನ್ನೂ ನಿರಾಕರಿಸಿ ಅತ್ಯಂತ ಕೀಳು ದರ್ಜೆಗೆ ತಳ್ಳಲ್ಪಟ್ಟಂಥ ಜನಸಮುದಾಯಗಳು ಇದ್ದವು ಎಂದು ಓದಿಕೊಳ್ಳಬೇಕಾಗಿ ಬಂದಾಗ, ಆ ಸಮುದಾಯಗಳು ಯಾವವು ಎಂದರೆ ಏನು ಹೇಳುತ್ತೀರಿ?"

- Advertisement -
- Advertisement -

ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಶೂದ್ರ ಸಮೂದಾಯದ ಹಿರಿಯ ಮಿತ್ರರೊಬ್ಬರು ನನಗೆ ‘ನೀವು ತುಂಬ ತೀಕ್ಷ್ಣವಾಗಿ ಚಿಂತನೆ ಮಾಡುತ್ತಿರಿ(ಸುಳ್ಳು). ಆದರೆ ನೀವು ಹೆಚ್ಚು ಜಾತಿ ಬಗ್ಗೆಯೇ ಮಾತನಾಡುತ್ತ, ಬ್ರಾಹ್ಮಣರ ಬಗ್ಗೆಯೇ ಹೆಚ್ಚು ದ್ವೇಷ ಮಾಡುತ್ತಿರಿ. ಅದು ಸರಿಯೇ’? ಎಂದರು. ನಾನು ಗಾಬರಿಯಾದೆ. ನನಗೆ ಇದು ಹೊಸ ಆರೋಪವಾಗಿತ್ತು ಮತ್ತು ಅವರಿಗೆ ಉತ್ತರಿಸಲು ಸಾಕಷ್ಟು ಸಮಯದ ಅಗತ್ಯ ಇದ್ದುದರಿಂದ ನಾನು ಅವರ ಮುಖವನ್ನೊಮ್ಮೆ ದಿಟ್ಟಿಸಿ ನೋಡಿ ನಾನು ಈ ವಿಷಯದ ಕುರಿತು ನಂತರ ಮಾತನಾಡುತ್ತೇನೆ ಎಂದು ಹೇಳಿ ಅಲ್ಲಿಂದ ಬಂದು ಬಿಟ್ಟೆ.

ಆ ನನ್ನ ಮಿತ್ರರಿಗೆ ಉತ್ತರ ಇಷ್ಟೇ.

ಭಾರತದಲ್ಲಿ ಯಾವ ವಿಷಯಗಳೂ ಜಾತಿ ಪರೀದಿಯನ್ನು ದಾಟಿ ಬೆಳೆದಿಲ್ಲಿ. ಅದು ಸಾಮಾಜಿಕ ಇರಬಹುದು, ರಾಜಕೀಯ ಇರಬಹುದು , ಅರ್ಥ ವ್ಯವಸ್ಥೆ, ಶಿಕ್ಷಣ, ಸಂಸ್ಕೃತಿ ಯಾವುದನ್ನೇ ತೆಗೆದುಕೊಂಡರೂ ಅದು ಜಾತಿ ಪರಿಮಿತಿಯಲ್ಲೇ ಹರಡಿಕೊಂಡಿದೆ. ನಮ್ಮ ಸಾಮಾಜಿಕ ಸಂಬಂಧಗಳು, ಭೂ ಸಂಬಂಧಗಳು, ವೈವಾಹಿಕ ಸಂಬಂಧಗಳನ್ನು ತೆಗೆದುಕೊಂಡರೂ ಅವುಗಳ ಬೆಳವಣಿಗೆ ಜಾತಿ ಪರಿದಿಯ ಮಿತಿಯಲ್ಲೇ ಇರುತ್ತದೆ. ಶಾಲೆಯಲ್ಲಿ ಸರ್ವಜನಾಂಗದ ತೋಟದಂತೆ ಕಲೆತು ಬೆರೆತು ಕಲಿಯುವ ಮಕ್ಕಳು ಶಾಲೆ ಮುಗಿದ ತಕ್ಷಣ ಹೊರಡುವುದು ಎಲ್ಲಿಗೆ? ಜಾತಿ ಆಧಾರಿತವಾಗಿ ಪ್ರತೇಕವಾಗಿರುವ ತಮ್ಮ ಜಾತಿ ವಾಸಸ್ಥಾನಗಳಿಗೆ. ಅವು ಎಲ್ಲ ರೀತಿಯಲ್ಲೂ ಪ್ರತ್ಯೇಕ ಜಗತ್ತುಗಳೇ ಆಗಿವೆ. ಒಂದಕ್ಕೊಂದು ತೆರೆದುಕೊಳ್ಳಲು ಸಾಧ್ಯವಾಗದಷ್ಟು ಬಿಗಿಯಾಗಿವೆ. ಮಕ್ಕಳು ಬೆಳೆದಂತೆ ಜಾತಿ ಪ್ರಜ್ಞೆ ಕೂಡ ಬಲಿಯುತ್ತ ಹೋಗುತ್ತದೆ. ಜಾತಿ ಪರೀದಿ ದಾಟಿ ಏನು ಬೆಳೆದಿದೆ ಇಲ್ಲಿ?

ಜಾತಿ ಸಮಸ್ಯೆ ಅಂದಾಕ್ಷಣ ದಲಿತ ಮತ್ತು ಸವರ್ಣೀಯರ ಸಂಘರ್ಷ ಅಂತ ಭಾವಿಸಬೇಕಿಲ್ಲ. ಬ್ರಾಹ್ಮಣ ಒಳ ಪಂಗಡಗಳ ಒಳಗೇ ಮೇಲರಿಮೆಗಾಗಿ ಎಷ್ಟು ಸಂಘರ್ಷ ಇದೆ ಎಂಬುದನ್ನು ನಾವು ತಿಳಿಯಬೇಕು. ವೈಶ್ಯ, ಶೂದ್ರ ಸಮುದಾಯಗಳು ಒಳ ಪಂಗಡಗಳಲ್ಲಿ ತಮ್ಮ ತಮ್ಮ ಶ್ರೇಷ್ಠತೆಗಾಗಿ ನಡೆಸುವ ಕಚ್ಚಾಟಗಳನ್ನು ನಾವು ಗಮನಿಸಬೇಕು. ದಲಿತರ ಒಳ ಪಂಗಡಗಳಲ್ಲಿರುವ ಪ್ರತ್ಯೇಕತೆಗಳನ್ನು ನೋಡಬೇಕು. ಇವೆಲ್ಲವೂ ಭಾರತೀಯರನ್ನೂ ಪ್ರತಿ ವಿಷಯದಲ್ಲೂ ಸಾವಿರಾರು ಪ್ರತ್ಯೇಕ ಸಮುದಾಯಗಳನ್ನಾಗಿ ಬೇರ್ಪಡಿಸಿ ವಿಕಾಸಗೊಳಿಸಿವೆ. ಹೀಗಾಗಿ ಇಲ್ಲಿ ಭೀಕರವಾದ ಅಸಮಾನತೆ ಎಲ್ಲ ಹಂತದಲ್ಲೂ ತಾಂಡವಾಡುತ್ತಿರುವುದರಿಂದ ಇದಕ್ಕೆಲ ಜಾತಿ ವ್ಯವಸ್ಥೆಯೇ ಕಾರಣವಾಗಿರುವುರಿಂದ, ಎಲ್ಲವೂ ಜಾತಿ ಆಧಾರಿತವಾಗಿರುವುದರಿಂದ ನಾನು ವಿಷಯಾಧಾರಿತವಾಗಿ ಮಾತನಾಡುವಾಗ ಜಾತಿ ಬಿಟ್ಟು ಮಾತನಾಡಲು ಸಾಧ್ಯವಿಲ್ಲ.

ಇನ್ನೂ ಬ್ರಾಹ್ಮಣರನ್ನು ದ್ವೇಷ ಮಾಡುತ್ತಿರಿ ಎಂಬುದು. ನಾನು ಎಂದೂ ಜನರನ್ನು ದ್ವೇಷಿಸುವುದಿಲ್ಲ. ನಿಲುವುಗಳನ್ನು ಟೀಕಿಸುವುದು, ವಿರೋಧಿಸುವುದು ದ್ವೇಷವಾಗುವುದಿಲ್ಲ. ಆಗಬಾರದು. ಹಾಗೇ ನೋಡಿದರೆ ನಾನು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವಾಗ ಹೆಚ್ಚು ವರ್ತಮಾನದ ವಾಸ್ತವದ ಬಗ್ಗೆ ಮಾತನಾಡುತ್ತೇನೆ. ಅದರ ಬಗ್ಗೆ ಮಾತನಾಡುವಾಗ ನಾನು ಹೆಚ್ಚು ಟೀಕಿಸಿದ್ದು ಶೂದ್ರ ಸಮುದಾಯಗಳನ್ನು‌. ಜಾತಿ ಕ್ರೌರ್ಯ, ಮತ್ತು ಆಚರಣೆಯಲ್ಲಿ ಯಾರು ಮುಂದಿದ್ದಾರೆ ಎಂಬ ಕನಿಷ್ಠ ತಿಳುವಳಿಕೆ ನನಗಿದೆ. ದಲಿತರೊಂದಿಗೆ ನಡೆದಿರುವ, ನಡೆಯುತ್ತಿರುವ ಅಂತರ್ಜಾತಿ ಮದುವೆಗಳ ಸಂಬಂಧಗಳನ್ನು ಅತಿ ಹೆಚ್ಚು ಉಳಿಸಿಕೊಳ್ಳುತ್ತಿರುವುದು ಬ್ರಾಹ್ಮಣರೇ. ಅತಿ ಕ್ರೂರವಾಗಿ ಅಂತ್ಯಗೊಳ್ಳುತ್ತಿರುವ ಸಂಬಂಧಗಳು ಶೂದ್ರರೊಂದಿಗಿನ ಸಂಬಂಧಗಳೇ ಆಗಿವೆ. ಆದಾಗ್ಯೂ ಕೂಡ ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವಾಗ ಅದರ ಹುಟ್ಟು, ಬೆಳವಣಿಗೆ, ಆಚರಣೆ ಕುರಿತು ಮಾತನಾಡಲೇ ಬೇಕು. ಅಲ್ಲಿ ನಾವು ಬ್ರಾಹ್ಮಣರ ಕುರಿತು ಅಲ್ಲದಿದ್ದರೂ ಬ್ರಾಹ್ಮಣ್ಯದ ಕುರಿತು ಮಾತನಾಡಲೇ ಬೇಕಾಗುತ್ತದೆ. ಅದು ಆ ಸಮುದಾಯವೇ ಹುಟ್ಟು ಹಾಕಿದಂಥ ಒಂದು ಸಿದ್ದಾಂತ. ಅದರ ಹುಟ್ಟನ್ನು ಅವರಿಂದ ಬೇರ್ಪಡಿಸಿ ಮಾತನಾಡಲು ಸಾಧ್ಯವಿಲ್ಲ ಹಾಗಾಗಿ ಬ್ರಾಹ್ಮಣ್ಯದ ಹುಟ್ಟು ಬೆಳವಣಿಗೆ ಬಗ್ಗೆ ಆ ಸಮುದಾಯವನ್ನು ಬಿಟ್ಟು ಮಾತನಾಡಲು ಸಾಧ್ಯವಿಲ್ಲ. ಅದರ ಅರ್ಥ ಸಮುದಾಯವೊಂದು ಇತಿಹಾಸದ ಒಂದು ಕಾಲಘಟ್ಟದಲ್ಲಿ ನಿರ್ಮಿಸಿದ ವ್ಯವಸ್ಥೆಯೊಂದಕ್ಕೆ ಆ ಸಮುದಾಯದಿಂದ ಬಂದಿರುವ ಈಗಿನ ಜನರೆಲ್ಲರೂ ಪ್ರಾಯಶ್ಚಿತ ಪಡಬೇಕು ಅಥವಾ ಅದರ ಜವಾಬ್ದಾರಿ ಹೊರಬೇಕು ಎಂಬುದು ಅತ್ಯಂತ ತರ್ಕವಿಲ್ಲದ ಮಾತು. ಆದರೆ ಅದರ ಹುಟ್ಟನ್ನು ಕುರಿತು ಮಾತನಾಡುವಾಗ ಆ ಸಮುದಾಯವನ್ನು ಗುರುತಿಸಲೇ ಬೇಕಾಗುತ್ತದೆ. ಈಗಲೂ ಆ ಸಮುದಾಯದ ಜನ ತಮ್ಮ ಪೂರ್ವಜರು ಮಾಡಿದ್ದು ಸರಿಯಾದದ್ದು, ಅದರ ಫಲಾನುಭವ ತಮ್ಮ ಹಕ್ಕು ಎಂದು ಭಾವಿಸುವುದಾದರೆ ಖಂಡಿತ ಅಂತಹ ವ್ಯಕ್ತಿಗಳ ಮನಸ್ಥಿತಿಯನ್ನು ನಾನು ವಿರೋಧಿಸುತ್ತೇನೆ.


ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ


ಮಯನ್ಮಾರದ ಬೌದ್ಧರು ರೋಹಿಂಗ್ಯ ಮುಸಲ್ಮಾನರನ್ನು ನೆಡಸಿಕೊಂಡ ಅಮಾನವೀಯ ರೀತಿಯನ್ನು, ಶ್ರೀಲಂಕಾದ ಬೌದ್ಧರು ನಡೆಸಿದ ತಮಿಳರ ನರಹತ್ಯೆಯನ್ನೂ ನಾನು ಮನುಷ್ಯ ಸಮಾಜ ನಡೆಸಬಾರದ ಕೃತ್ಯಗಳೆಂದೆ ಖಂಡಿಸುತ್ತೇನೆ. ಹಾಗೇ ಬ್ರಾಹ್ಮಣ್ಯವನ್ನೂ, ಒಂದು ಕಾಲಘಟ್ಟದಲ್ಲಿ ಜಾತಿ ತಾರತಮ್ಯವನ್ನು ಹುಟ್ಟು ಹಾಕಿ ಜಾರಿಗೆ ತಂದ ಬ್ರಾಹ್ಮಣರ ಕೃತ್ಯವನ್ನೂ ಕೂಡ ವಿರೋಧಿಸುತ್ತೇನೆ. ನನ್ನ ಸಮುದಾಯದ ಮುಂದಿನ ತಲೆಮಾರಿನ ಜನರು ಒಂದು ವೇಳೆ ಮುಖ್ಯವಾಹಿನಿಯಲ್ಲಿ ಬೆರೆತು ಹೋಗಿದ್ದರೂ, ಜಾತಿ ಅಸ್ಥಿತ್ವ ಕಾಣೆಯಾದರೂ, ಅವರು ಇತಿಹಾಸದ ಪುಟಗಳಲ್ಲಿ, ದೇಶದಲ್ಲಿ ಯಾರೂ ಮುಟ್ಟಿಸಿಕೊಳ್ಳದ, ಊರ ಹೊರಗಿಟ್ಟ, ಬದುಕುವ ಎಲ್ಲ ಅವಕಾಶಗಳನ್ನೂ ನಿರಾಕರಿಸಿ ಅತ್ಯಂತ ಕೀಳು ದರ್ಜೆಗೆ ತಳ್ಳಲ್ಪಟ್ಟಂಥ ಜನಸಮುದಾಯಗಳು ಇದ್ದವು ಎಂದು ಓದಿಕೊಳ್ಳಬೇಕಾಗಿ ಬಂದಾಗ, ಆ ಸಮುದಾಯಗಳು ಯಾವವು ಎಂದರೆ ಏನು ಹೇಳುತ್ತೀರಿ? ಆಗ ದಲಿತ ಸಮುದಾಯಗಳನ್ನೇ ಗುರುತಿಸಬೇಕಲ್ಲವೇ? ಆಗ ನಮ್ಮ ಪೀಳಿಗೆ, ಒಂದು ವೇಳೆ ತಮ್ಮ ಸಮುದಾಯಗಳು ಹೀಗೆ ಬದುಕಿದ್ದವು ಎಂಬುದು ತಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂದು ವಿರೋಧಿಸಿದರೆ ಇತಿಹಾಸದ ವಾಸ್ತವವನ್ನು ಬದಲಿಸಿ ಬರೆಯಲು ಸಾಧ್ಯವೇ?.

ಮಹಾಲಿಂಗಪ್ಪ ಆಲಬಾಳ. (ಯುವ ಬರಹಗಾರರು, ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವು.)


ಇದನ್ನೂ ಓದಿ: ಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು…

Also Read: Mob of 200 People from Dominant Castes Attack Dalits in Ainlasari, Odisha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...