Homeಅಂತರಾಷ್ಟ್ರೀಯಬೆಂಗಳೂರು ಮಾದರಿ ಗಲಭೆ: ಸ್ವೀಡನ್‌ನ ಮಾಲ್ಮೊ ನಗರ ಹೊತ್ತಿ ಉರಿಯಲು ಕಾರಣವೇನು?

ಬೆಂಗಳೂರು ಮಾದರಿ ಗಲಭೆ: ಸ್ವೀಡನ್‌ನ ಮಾಲ್ಮೊ ನಗರ ಹೊತ್ತಿ ಉರಿಯಲು ಕಾರಣವೇನು?

ಅಲ್ಲಿನ ಈ ಗಲಭೆಯನ್ನು ಮಾಧ್ಯಮಗಳು ವರದಿ ಮಾಡಿದ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಅವರು ಅದನ್ನು ವಿಜೃಂಭಿಸಲಿಲ್ಲ, ದಿನದ 24 ಗಂಟೆ ಅದನ್ನೇ ತೋರಿಸಿ ಪ್ರಚೋದಿಸಲಿಲ್ಲ. ಬದಲಿಗೆ ಕೊನೆ ಪುಟದ ಒಂದು ಸುದ್ದಿಯಾಗಿ ಅಷ್ಟೇ ಪ್ರಸಾರ ಮಾಡಿತು.

- Advertisement -
- Advertisement -

ಸ್ವೀಡನ್‌ನ ಮೂರನೇ ಅತಿ ದೊಡ್ಡ ನಗರ ಮಾಲ್ಮೊದಲ್ಲಿ ಬೆಂಗಳೂರು ಮಾದರಿ ಗಲಭೆ ನಡೆದಿದ್ದು, ನಗರ ಹೊತ್ತಿ ಉರಿದಿದೆ. ಅಲ್ಲಿನ ರೋಸನ್ ಗಾರ್ಡ್‌ ಪ್ರದೇಶದಲ್ಲಿ ನೆರೆದಿದ್ದ 300ಕ್ಕೂ ಹೆಚ್ಚು ಜನರಿದ್ದ ಗುಂಪು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿದೆ. ಅವರೆಲ್ಲರೂ ಇಸ್ಲಾಂ ವಿರುದ್ಧದ ಚಟುವಟಿಕೆಗಳನ್ನು ವಿರೋಧಿಸಿ, ಇಸ್ಲಾಮೋಫೋಬಿಯಾದ ವಿರುದ್ಧ ಪ್ರತಿಭಟಿಸಲು ಸೇರಿದ್ದರು ಎನ್ನಲಾಗಿದೆ.

ಸ್ವೀಡನ್‌ನ ಮಾಲ್ಮೊದಲ್ಲಿ ಬಲಪಂಥೀಯ ಸ್ಟ್ರಾಮ್ ಕುರ್ಸ್ ಪಕ್ಷದ ಸದಸ್ಯರು ಕುರಾನ್ ಪ್ರತಿಯನ್ನು ಸುಟ್ಟು ಹಾಕಿದ ನಂತರ ಗಲಭೆ ಆರಂಭವಾಗಿದೆ. ಅದಕ್ಕೂ ಹಿಂದಿನ ದಿನ ಪಕ್ಷದ ನಾಯಕ ರಾಸ್ಮಸ್ ಪಲುಡಾನ್ ಅವರಿಗೆ “ನಾರ್ಡಿಕ್ ದೇಶಗಳಲ್ಲಿ ಇಸ್ಲಾಮೀಕರಣ” ವಿಷಯದ ಕುರಿತು ಮಾಲ್ಮೋದಲ್ಲಿ ಸಭೆ ನಡೆಸಲು ಅನುಮತಿ ನಿರಾಕರಿಸಲಾದ್ದರಿಂದ ರೊಚ್ಚಿಗೆದ್ದ ಬಲಪಂಥೀಯ ಕಾರ್ಯಕರ್ತರು ಕುರಾನ್ ಸುಟ್ಟಿದ್ದಾರೆ ಎಂದು ಸ್ವೀಡಿಸ್ ಪ್ರತಿಕೆ ಅಫ್ಟನ್ಬ್ಲಾಡೆಟ್ ವರದಿ ಮಾಡಿದೆ. ಈ ಹಿಂದೆ ಜನಾಂಗೀಯ ಗುಂಪುಗಳ ವಿರುದ್ಧ ಪ್ರಚೋದನೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದ ಸ್ವೀಡಿಷ್ ಕಲಾವಿದ ಡಾನ್ ಪಾರ್ಕ್ ರಾಸ್ಮಸ್ ಪಲುಡಾನ್ ಅವರನ್ನು ಆಹ್ವಾನಿಸಿದ್ದರು.

ರಾಸ್ಮಸ್ ಪಲುಡಾನ್ ಯಾರು?

ಡೆನ್ಮಾರ್ಕ್‌ನ ವಕೀಲ ರಾಸ್ಮಸ್ ಪಲುಡಾನ್ 2017ರಲ್ಲಿ ತೀವ್ರ ಬಲಪಂಥೀಯ ಸ್ಟ್ರಾಮ್ ಕುರ್ಸ್ ಪಕ್ಷದ ಸ್ಥಾಪಕ. ಈತನ ಪಕ್ಷ ಮುಸ್ಲಿಂ ವಿರೋಧಿ ಮನೋಭಾವವನ್ನು ಹೊಂದಿದೆ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಸದಾ ಮುಸ್ಲಿಂ ವಿರೋದಿ ಅಂಶಗಳನ್ನು ಪ್ರಸಾರ ಮಾಡುವ, ಕುರಾನ್ ಸುಟ್ಟು ಹಾಕುವ ವಿಡಿಯೋಗಳನ್ನು ಈತ ಅಪ್‌ಲೋಡ್‌ ಮಾಡಿದ್ದಾನೆ. ಆ ರೀತಿಯ ಮುಸ್ಲಿಂ ಜನಾಂಗೀಯ ಅವಹೇಳನದ ವಿಡಿಯೋ ಪೋಸ್ಟ್ ಮಾಡಿದ್ದಕ್ಕಾಗಿ ಜೂನ್‌ನಲ್ಲಿ ಆತನಿಗೆ ಮೂರು ತಿಂಗಳು ಜೈಲುವಾಸ ಮತ್ತು ವಕೀಲ ವೃತ್ತಿ ಮಾಡದಂತೆ ನಿಷೇಧ ಹೇರಿತ್ತು. 2019ರಲ್ಲಿಯೂ ಸಹ ಜನಾಂಗೀಯ ಅವಹೇಳನದ ಭಾಷಣ ಮಾಡಿದ್ದಕ್ಕಾಗಿ ಆತನಿಗೆ 14 ದಿನಗಳ ಬಂಧನ ಶಿಕ್ಷೆ ವಿಧಿಸಲಾಗಿತ್ತು. ಜನಾಂಗೀಯ ನಿಂದನೆ, ದ್ವೇ‍ಷ ಭಾಷಣ, ಮಾನಹಾನಿ, ಯದ್ವಾತದ್ವಾ ವಾಹನ ಚಾಲನೆ ಸೇರಿದಂತೆ ಇದುವರೆಗೂ ಸುಮಾರು 14 ಪ್ರಕರಣಗಳಲ್ಲಿ ಈತ ತಪ್ಪಿತಸ್ಥನೆಂದು ನ್ಯಾಯಾಲಯ ತೀರ್ಪು ನೀಡಿದೆ.

ರಾಸ್ಮಸ್ ಪಲುಡಾನ್. Photo Courtesy: DR

3 ಲಕ್ಷ ಮುಸ್ಲಿಮರನ್ನು ಡೆನ್ಮಾರ್ಕ್‌ನಿಂದ ಹೊರಹಾಕುವ ಮತ್ತು ಇಸ್ಲಾಂ ಧರ್ಮವನ್ನು ನಿಷೇಧಿಸುವುದಾಗಿ ಘೋಷಿಸಿ ಈತ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಾನೆ. ಈ ಶುಕ್ರವಾರ ಸ್ವೀಡನೆ ಆತನನ್ನು 2 ವರ್ಷಗಳ ಕಾಲ ಸ್ವೀಡನ್‌ಗೆ ಕಾಲಿಡದಂತೆ ನಿಷೇಧ ಹೇರಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸ್ವೀಡನ್‌ನಲ್ಲಿನ ವಲಸಿಗರ ಸ್ಥಿತಿಗತಿ

ಸ್ವೀಡನ್ ಐತಿಹಾಸಿಕವಾಗಿ ನಿರಾಶ್ರಿತರ ಸ್ವರ್ಗ ಎಂದು ಹೆಸರು ಗಳಿಸಿದೆ. ಕೆನಡಾ ಮತ್ತು ಆಸ್ಟ್ರೇಲಿಯಾ ನಂತರ ಅತಿ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಿದ ದೇಶ ಇದಾಗಿದೆ. 2013-2014ರ ಸಮಯದಲ್ಲಿ ಸಿರಿಯಾದಿಂದ ವಲಸೆ ಬಂದ ಹಲವಾರು ಜನರಿಗೆ ಇದು ಖಾಯಂ ವಾಸಿಸಲು ಅನುಮತಿ ನೀಡಿದೆ. ಸಿರಿಯಾ ಯುದ್ದ ಆರಂಭವಾದಾಗಿನಿಂದ ಸುಮಾರು 70,000 ಸಿರಿಯನ್ನರು ಇಲ್ಲಿಗೆ ವಲಸೆ ಬಂದಿದ್ದಾರೆ.

2015 ರ ವರ್ಷವೊಂದರಲ್ಲೇ ಸ್ವೀಡನ್‌ ಆಶ್ರಯಕ್ಕಾಗಿ ದಾಖಲೆಯ 1,62,000 ಅರ್ಜಿಗಳನ್ನು ಸ್ವೀಕರಿಸಿದೆ. ಅದರಲ್ಲಿ ಮುಖ್ಯವಾಗಿ ಸಿರಿಯಾ, ಇರಾಕ್ ಮತ್ತು ಅಫ್ಘಾನಿಸ್ತಾನದ ಮುಸ್ಲಿಮರು ಮತ್ತು ಯುದ್ಧ ಪೀಡಿತ ದೇಶಗಳಿಂದ ಆಶ್ರಯ ಪಡೆಯುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಬಲಪಂಥೀಯರ ವಾದ

ಸ್ವೀಡಿಷ್ ಸಂಸತ್ತಿನ ಮೂರನೇ ಅತಿದೊಡ್ಡ ಪಕ್ಷವಾಗಿರುವ ಬಲಪಂಥೀಯ ಸ್ವೀಡನ್ ಡೆಮೋಕ್ರಾಟ್ ಇದನ್ನು ತೀವ್ರವಾಗಿ ವಿರೋಧಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಮುಖವಾಗಿ ಮುಸ್ಲಿಂ ವಲಸಿಗರ ಒಳಹರಿವು ಅಪರಾಧದ ಉಲ್ಬಣಕ್ಕೆ ಕಾರಣವಾಗಿದೆ ಎಂದು ಅದು ಆರೋಪಿಸಿದೆ. ಇದು ವಿಶ್ವದ ಅತ್ಯಂತ ಉದಾರವಾದ ಕಲ್ಯಾಣ ಕಾರ್ಯಕ್ರಮಗಳನ್ನು ಹೊಂದಿರುವ ದೇಶದಲ್ಲಿ ಸಾರ್ವಜನಿಕ ಹಣಕಾಸಿನ ಮೇಲೆ ಒತ್ತಡ ಹೇರುತ್ತಿದೆ ಎಂದು ಪಕ್ಷ ಆರೋಪಿಸಿದೆ.

ಹೆಚ್ಚಿನ ಸಂಖ್ಯೆಯ ವಲಸಿಗರಲ್ಲಿ ಕೌಶಲ್ಯ ಮತ್ತು ವಿದ್ಯಾರ್ಹತೆಯ ಸಮಸ್ಯೆಯಿದೆ. ಹಾಗಾಗಿ ಅವರೆಲ್ಲರೂ ಕೆಲಸ ಮಾಡುತ್ತಾರೆ ಎಂದು ಹೇಳಲಾಗುವುದಿಲ್ಲ. ಇದು ಇತರ ಹೆಚ್ಚು ತೆರಿಗೆ ಕಟ್ಟುವವರ ಮೇಲೆ ಪರಿಣಾಮ ಬೀರುತ್ತದೆ ಎಂಬ ಮಾತು ಅಲ್ಲಲ್ಲಿ ಕೇಳಿಬರುತ್ತಿದೆ. ಇದಕ್ಕೆ ಉದಾಹರಣೆಯೆಂಬಂತೆ 2018 ರಲ್ಲಿ ಸ್ವೀಡನ್‌ನಲ್ಲಿ ನಿರುದ್ಯೋಗ ದರವು ಶೇಕಡಾ 3.8 ರಷ್ಟಿದ್ದರೆ, ವಲಸಿಗ ಸ್ವೀಡಿಶ್ ಜನಸಂಖ್ಯೆಯಲ್ಲಿ ಇದು ಶೇ. 15ಕ್ಕೇರಿತ್ತು. ಇದನ್ನಿಟ್ಟುಕೊಂಡು ಅಲ್ಲಿನ ಬಲಪಂಥೀಯ ಪಕ್ಷಗಳು ವಲಸಿಗ ವಿರೋಧಿ ಭಾವನೆ, ಮುಸ್ಲಿಂ ವಿರೋಧಿ ಭಾವನೆ ಮೂಡಿಸಲು ನಿರತವಾಗಿವೆ ಎನ್ನಲಾಗುತ್ತಿದೆ.

ವಾಸ್ತವ ಮತ್ತು ಮಾಧ್ಯಮಗಳ ಜವಾಬ್ದಾರಿ

ಆದರೆ ಅಲ್ಲಿನ ಬಹುಸಂಖ್ಯಾತ ಜನರು ವಲಸೆಯನ್ನು ಬೆಂಬಲಿಸಿ ಆಶ್ರಯ ನೀಡುವ ಮನೋಭಾವ ಹೊಂದಿದ್ದಾರೆ ಎಂದು ಅಲ್ಲಿನ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ. ವಲಸೆಗೆ ಕಾರಣವೇನು? ನಿರಾಶ್ರಿತರ ಸಮಸ್ಯೆಗಳನ್ನು ಹೇಗೆ ಅರ್ಥೈಸಬೇಕು, ಮಾನವೀಯ ಆಧಾರದಲ್ಲಿ ಹೇಗೆ ಗ್ರಹಿಸಬೇಕು ಮತ್ತು ಎಲ್ಲರಿಗೂ ಉದ್ಯೋಗ ಸೃಷ್ಠಿ ಸಾಧ್ಯವೇ ಎಂಬಿತ್ಯಾದಿ ಪ್ರಶ್ನೆಗಳನ್ನು ಬಲಪಂಥೀಯರು ನಿರಾಕರಿಸುತ್ತಿದ್ದಾರೆ ಎಂಬುದು ಪ್ರಜಾಪ್ರಭುತ್ವವಾದಿಗಳ ವಾದವಾಗಿದೆ.

ಇನ್ನು ಅಲ್ಲಿನ ಈ ಗಲಭೆಯನ್ನು ಮಾಧ್ಯಮಗಳು ವರದಿ ಮಾಡಿದ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಅವರು ಅದನ್ನು ವಿಜೃಂಭಿಸಲಿಲ್ಲ, ದಿನದ 24 ಗಂಟೆ ಅದನ್ನೇ ತೋರಿಸಿ ಪ್ರಚೋದಿಸಲಿಲ್ಲ. ಬದಲಿಗೆ ಕೊನೆ ಪುಟದ ಒಂದು ಸುದ್ದಿಯಾಗಿ ಅಷ್ಟೇ ಪ್ರಸಾರ ಮಾಡಿತು. ಇದೀಗ ಅಲ್ಲಿನ ಪತ್ರಿಕೆಗಳನ್ನು ಹುಡುಕಿದರೆ ಗಲಭೆಯ ಸುದ್ದಿಯೇ ತಿಳಿಯುವುದಿಲ್ಲ. ಭಾರತದ ಮಾಧ್ಯಮಗಳು ಇದನ್ನು ಅನುಸರಿಸುವ ಅಗತ್ಯವಿದೆ ಎನಿಸುತ್ತದೆ.

ಸ್ವೀಡನ್ ನಗರ: Photo Courtesy: Forbes

ಸ್ವೀಡನ್ ಹಲವು ಬಹುವೈವಿಧ್ಯತೆಗಳನ್ನು ಒಳಗೊಂಡಿರುವ ದೇಶ. ಆದರೆ ಅಲ್ಲಿ ಈಗ ಇಸ್ಲೋಮೊಫೋಬಿಯ ಹರಡಲು ಬಲಪಂಥೀಯರು ಸ್ವೀಡನ್‌ನ ವಲಸಿಗರನ್ನು ಆಯುಧವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ರಸ್ತೆ ಮತ್ತು ರೈಲು ಸಾರಿಗೆ ಮೂಲಕ ಸ್ವೀಡನ್‌ ಪ್ರವೇಶಿಸಬೇಕಾದರೆ ಮಾಲ್ಮೊ ನಗರದ ಮೂಲಕವೇ ಹಾದುಹೋಗಬೇಕು. ಹಾಗಾಗಿ ಹೆಚ್ಚಿನ ನಿರಾಶ್ರಿತರು ಅಲ್ಲಿ ನೆಲೆಸಿರುವುದು ಹೌದಾದರೂ ಅವರನ್ನು ಎರಡನೇ ದರ್ಜೆಯ ಪ್ರಜೆಯಾಗಿ ಕಾಣುವುದು, ಅವಹೇಳನ ಮಾಡುವುದು ಗಲಭೆಗೆ ಕಾರಣವಾಗುತ್ತವೆ. ಅದರ ಹೊರತು ಬಹಳಷ್ಟು ಜನರು ಅಲ್ಲಿ ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಗಲಭೆಯ ಕುರಿತು ಮಾತನಾಡಲು ಸ್ನೇಹಿತರಿಗೆ ಫೋನ್ ಮಾಡಿದರೆ ಅದು ಇಲ್ಲಿ ದೊಡ್ಡ ವಿಷಯವಲ್ಲ ಎನ್ನುತ್ತಾರೆ ಎಂದು ಹಲವು ವರ್ಷಗಳ ಕಾಲ ಅಲ್ಲಿ ನೆಲೆಸಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಭರತ್ ಹೆಬ್ಬಾಳ್ ಹೇಳುತ್ತಾರೆ.

ಸ್ಟಾಕ್‌ಹೋಮ್‌ ಪ್ರಧಾನವಾಗಿ ವಲಸೆ ಬಂದ ಪ್ರದೇಶಗಳಲ್ಲಿ ಒಂದಾಗಿದ್ದು ಅಲ್ಲಿ ಗಲಭೆಗಳು ಹೆಚ್ಚಾಗಿವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಲಸೆ ಸಮಸ್ಯೆಗಳ ಕುರಿತು ಮಾತನಾಡುವಾಗ ಉದಾಹರಣೆಯಾಗಿ ಸ್ವೀಡನ್‌ ಅನ್ನು ಉಲ್ಲೇಖಿಸಿದ್ದರು. ಆಗ ಸಹ ಗಲಭೆ ಭುಗಿಲೆದ್ದಿದ್ದು, ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ, ಮತ್ತು ಲೂಟಿ ನಡೆದಿತ್ತು.


ಇದನ್ನೂ ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...