Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...