Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...