Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...