Homeಮುಖಪುಟ#StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

#StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ. ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿಯೇ, 37,000 ಜನ ಇಷ್ಟಪಟ್ಟರೆ 70,000 ಜನ ತಿರಸ್ಕರಿಸಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಸ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

#StudentsDislikePMModi ಎಂದು ಟ್ವಿಟರ್ ನಲ್ಲಿ ಆರಂಭವಾಗಿರುವ ಅಭಿಯಾನ ಟ್ರೆಂಡಿಂಗ್ ನಲ್ಲಿ 3ನೇ ಸ್ಥಾನದಲ್ಲಿದೆ. ಸುಮಾರು 6,60,000 ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಜೆ ಎನ್ ಯು ವಿದ್ಯಾರ್ಥಿಗಳ ಸಂಘದ ಮಾಜಿ ಅಧ್ಯಕ್ಷರಾದ ಸುಚೇತ ಡಿ, “ಹಲವು ವಿದ್ಯಾರ್ಥಿಗಳು ಪ್ರವೇಶಾತಿ ಪತ್ರವನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರ ಅರ್ಥ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕು ಎಂಬುದಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಈಗ ಲಕ್ಷಾಂತರ ವಿದ್ಯಾರ್ಥಿಗಳು #StudentsDislikePMModi ಎಂದು ಹೇಳುತ್ತಿದ್ದಾರೆ. ಇದರ ಅರ್ಥ ಮೋದಿಯವರು ರಾಜಿನಾಮೆ ಕೊಡಬೇಕು ಎಂಬುದಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಮೊನಿಸ್ ಖಾನ್ ಎನ್ನುವವರು “ಇದು ಯುವಪಡೆಯ ಶಕ್ತಿ. ಯುವಜನರು ನಿಮ್ಮಂಥವರನ್ನು ಎಂದಿಗೂ ಇಷ್ಟಪಡುವುದಿಲ್ಲ” ಎಂದು ಬರೆದು, ಜಗತ್ತಿನ ಅತಿ ಹೆಚ್ಚು ಡಿಸ್ ಲೈಕ್ ಪಡೆದ ಪ್ರಧಾನಿ ವೀಡಿಯೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 71,000 ಜನರು ಲೈಕ್ ಒತ್ತಿದರೆ, 4,85,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 37,000 ಜನ ಇಷ್ಟಪಟ್ಟರೆ 70,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ಡಿಸ್ಲೈಕ್ ನೊಂದಿಗೆ, “ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ” ಎಂಬಂತ ಕಾಮೆಂಟ್‌ಗಳು ಬರತೊಡಗಿದವು.

ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ. ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ.


ಇದನ್ನೂ ಓದಿ: ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...