Homeಮುಖಪುಟ#StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

#StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ. ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿಯೇ, 37,000 ಜನ ಇಷ್ಟಪಟ್ಟರೆ 70,000 ಜನ ತಿರಸ್ಕರಿಸಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಸ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

#StudentsDislikePMModi ಎಂದು ಟ್ವಿಟರ್ ನಲ್ಲಿ ಆರಂಭವಾಗಿರುವ ಅಭಿಯಾನ ಟ್ರೆಂಡಿಂಗ್ ನಲ್ಲಿ 3ನೇ ಸ್ಥಾನದಲ್ಲಿದೆ. ಸುಮಾರು 6,60,000 ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಜೆ ಎನ್ ಯು ವಿದ್ಯಾರ್ಥಿಗಳ ಸಂಘದ ಮಾಜಿ ಅಧ್ಯಕ್ಷರಾದ ಸುಚೇತ ಡಿ, “ಹಲವು ವಿದ್ಯಾರ್ಥಿಗಳು ಪ್ರವೇಶಾತಿ ಪತ್ರವನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರ ಅರ್ಥ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕು ಎಂಬುದಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಈಗ ಲಕ್ಷಾಂತರ ವಿದ್ಯಾರ್ಥಿಗಳು #StudentsDislikePMModi ಎಂದು ಹೇಳುತ್ತಿದ್ದಾರೆ. ಇದರ ಅರ್ಥ ಮೋದಿಯವರು ರಾಜಿನಾಮೆ ಕೊಡಬೇಕು ಎಂಬುದಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಮೊನಿಸ್ ಖಾನ್ ಎನ್ನುವವರು “ಇದು ಯುವಪಡೆಯ ಶಕ್ತಿ. ಯುವಜನರು ನಿಮ್ಮಂಥವರನ್ನು ಎಂದಿಗೂ ಇಷ್ಟಪಡುವುದಿಲ್ಲ” ಎಂದು ಬರೆದು, ಜಗತ್ತಿನ ಅತಿ ಹೆಚ್ಚು ಡಿಸ್ ಲೈಕ್ ಪಡೆದ ಪ್ರಧಾನಿ ವೀಡಿಯೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 71,000 ಜನರು ಲೈಕ್ ಒತ್ತಿದರೆ, 4,85,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 37,000 ಜನ ಇಷ್ಟಪಟ್ಟರೆ 70,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ಡಿಸ್ಲೈಕ್ ನೊಂದಿಗೆ, “ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ” ಎಂಬಂತ ಕಾಮೆಂಟ್‌ಗಳು ಬರತೊಡಗಿದವು.

ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ. ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ.


ಇದನ್ನೂ ಓದಿ: ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...