Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...