Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...