Homeಮುಖಪುಟಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

- Advertisement -
- Advertisement -

ಮಧ್ಯಪ್ರದೇಶದದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಿಸಲಾದ ಸೇತುವೆ ಸೇರಿದಂತೆ ಎರಡು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಅಷ್ಟೇ ಅಲ್ಲದೆ 14 ಜನರು ಸಾವನ್ನಪ್ಪಿದ್ದು, ರಾಜ್ಯದ 450 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಕೊಚ್ಚಿಕೊಂಡು ಹೋಗಿರುವ ಸೇತುವೆ ರಾಜ್ಯದ ಮಹಾಕೋಷಲ್ ಪ್ರದೇಶದ ಸಿಯೋನಿ ಜಿಲ್ಲೆಯ ವೈಂಗಂಗಾ ನದಿಯ ಮೇಲೆ ನಿರ್ಮಿಸಲಾಗಿತ್ತು.

ಒಂದು ದಶಕದ ಹಿಂದೆ ನಿರ್ಮಿಸಲಾದ ಒಂದು ಸೇತುವೆ ಛಾಪಾರಾ ಮತ್ತು ಭೀಮ್‌ಗಡ್‌ನ್ನು ಸಂಪರ್ಕಿಸಿದರೆ, ಸೋನ್ವಾರಾ ಮತ್ತು ಧನೋರಾವನ್ನು ಸಂಪರ್ಕಿಸುವ ಇನ್ನೊಂದು ಸೇತುವೆ ಕೇವಲ ಎರಡು ತಿಂಗಳ ಹಿಂದೆಯೇ ಪೂರ್ಣಗೊಂಡಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


ಎರಡು ಸೇತುವೆಗಳನ್ನು ತಲಾ 3 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎರಡನೇ ಸೇತುವೆಯನ್ನು ಪ್ರಧಾನ್ ಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ನಿರ್ಮಿಸಲಾಗಿದೆ.

ಇದರ ನಿರ್ಮಾಣವು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭವಾಗಿ, ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿತ್ತು. ಸೇತುವೆಯನ್ನು ಇನ್ನೂ ಅಧಿಕೃತವಾಗಿ ಉದ್ಘಾಟಿಸಲಿಲ್ಲವಾದರೂ, ಅದು ಈಗಾಗಲೇ ಬಳಕೆಯಲ್ಲಿತ್ತು. ಅದೀಗ ನೀರು ಪಾಲಾಗಿದೆ.

“ಸೇತುವೆ 150 ಮೀಟರ್ ಉದ್ದ ಮತ್ತು 9.28 ಮೀಟರ್ ಎತ್ತರವಿತ್ತು. ಇದರ ನಿರ್ಮಾಣವು ಜೂನ್ 2020 ರಲ್ಲಿ ಪೂರ್ಣಗೊಂಡಿತು. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ವೈಂಗಂಗಾ ನದಿ ಮತ್ತು ಅದರ ಉಪನದಿಯಲ್ಲಿ ಪ್ರವಾಹ ಉಂಟಾಯಿತು. ಭಾರೀ ಮಳೆ ಮತ್ತು ನದಿಯ ಪ್ರವಾಹದಿಂದಾಗಿ ಭೀಮ್‌ಗಡ್ ಅಣೆಕಟ್ಟು ಪೂರ್ಣ ಸಾಮರ್ಥ್ಯಕ್ಕೆ ತುಂಬಿತು. ಆಗಸ್ಟ್ 27-28 ರ ರಾತ್ರಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿತ್ತು, ಇದರಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ” ಎಂದು ಸಿಯೋನಿ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ (ಪಿಎಂಜಿಎಸ್ವೈ) ಜೆಪಿ ಮೆಹ್ರಾ ಹೇಳಿದ್ದಾರೆ.

ಸಿಯೋನಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರ್ ಪ್ರತೀಕ್ ಎರಡು ಸೇತುವೆಗಳ ಕುಸಿತ ಮತ್ತು ಜಿಲ್ಲೆಯಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅಪಘಾತಗಳಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಡಪಡಿಸಿದರು. ಸಿಯೋನಿ ಜಿಲ್ಲಾ ಆಡಳಿತವು ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ಪಿಡಬ್ಲ್ಯುಡಿ ಇಲಾಖೆಯಿಂದ ಸುಮಾರು 10 ವರ್ಷಗಳ ಹಿಂದೆ ಅದೇ ವೈಂಗಂಗಾ ನದಿಯಲ್ಲಿ ನಿರ್ಮಿಸಲಾದ ಮತ್ತೊಂದು ಸೇತುವೆ ಭೀಮ್‌ಗಡ್ ಅಣೆಕಟ್ಟಿನಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿದೆ, ಇದರಿಂದ ಕಳೆದ ಎರಡು ದಿನಗಳಲ್ಲಿ ಸುಮಾರು 2.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಈ ನಡುವೆ, ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಮಧ್ಯಪ್ರದೇಶದ ಮಹಾಕೋಷಲ್‌ ಪ್ರದೇಶದ ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

ಹೋಶಂಗನಾಡ್, ಭೋಪಾಲ್, ಚಿಂದ್ವಾರ, ಸೆಹೋರ್, ರೈಸನ್, ನರಸಿಂಗ್‌ಪುರ, ಸಿಯೋನಿ, ಬಾಲಘಾಟ್, ಹರ್ಡಾ, ವಿದಿಶಾ ಮತ್ತು ದೇವಾಸ್ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಸ್ಥಳೀಯ ಆಡಳಿತ ಮತ್ತು ಪೊಲೀಸ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಹಾಗೂ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನಾ ತಂಡಗಳು ಈವರೆಗೆ ಸುಮಾರು 11,000 ಜನರನ್ನು ರಕ್ಷಿಸಿದೆ.

ರಾಜ್ಯದ ಒಟ್ಟು 251 ಜಲಾಶಯಗಳಲ್ಲಿ 120 ರಷ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಹಾಕಲು ಅಣೆಕಟ್ಟು ಗೇಟ್‌ಗಳನ್ನು ತೆರೆಯಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ ತನಕ 815.2 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...