Homeಮುಖಪುಟಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ವೈದ್ಯರು ಹೇಳುವಂತೆ ತನ್ವೀರ್‌ಗೆ ಕನಿಷ್ಟ 15 ಗುಂಡುಗಳಾದರೂ ಕಣ್ಣಿಗೆ ಬಿದ್ದಿವೆ. ಕಣ್ಣಿನಲ್ಲಿ ರಂಧ್ರವಿರುವ ಸಾಧ್ಯತೆಯಿದೆ ಎನ್ನುತ್ತಾರೆ.

- Advertisement -
- Advertisement -

ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಜಮ್ಮು-ಕಾಶ್ಮೀರದ ಶ್ರೀನಗರದ ಬಮೀನಾದಲ್ಲಿ ನಡೆಯುತ್ತಿದ್ದ ಮೊಹರಂ ಮೆರವಣಿಗೆ ಚದುರಿಸಲು ಭದ್ರತಾ ಪಡೆಗಳು ನಡೆಸಿದ ಪೆಲೆಟ್ ಫೈರಿಂಗ್‌ನಲ್ಲಿ ಹಲವರು ದೃಷ್ಠಿ ಕಳೆದುಕೊಂಡಿದ್ದಾರೆ.

ಭದ್ರತಾ ಪಡೆಗಳ ದಾಳಿಯಿಂದಾಗಿ ಅಲಿಗಡ್‌ನಲ್ಲಿ 10ನೇ ತರಗತಿ ಓದುತ್ತಿದ್ದ ತನ್ವೀರ್ ಅಹ್ಮದ್ ಎಂಬ ಬಾಲಕನ ಎರಡು ಕಣ್ಣುಗಳು ದೃಷ್ಠಿ ಕಳೆದುಕೊಳ್ಳುವ ಅಪಾಯದಲ್ಲಿವೆ ಎಂದು ಎಸ್‌ಎಂಎಚ್‌ಎಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಾವು ತುಂಬಾ ಶಾಂತಿಯಿಂದಲೇ ಮೆರವಣಿಗೆ ನಡೆಸುತ್ತಿದ್ದೆವು. ಪೊಲೀಸರೇ ಮೊದಲು ಲಾಠಿಚಾರ್ಜ್ ಮಾಡಿ, ಪೆಲೆಟ್ ಫೈರಿಂಗ್ ಆರಂಭಿಸಿದರು. ನಾನು ಮನೆಗೆ ಹೊರಡುವವನಿದ್ದೆ. ಏನಾಗುತ್ತಿದೆ ಎಂದು ನೋಡಲು ಹಿಂತಿರುಗಿದೆ. ಆಗಲೇ ನನಗೆ ಗುಂಡುಗಳು ಬಿದ್ದವು ಎನ್ನುತ್ತಾರೆ  ಗಾಯಾಳು ತನ್ವೀರ್.

ನನ್ನ ಮಗ ಅಲಿಗಡ್‌ನಲ್ಲಿ 6ನೇ ತರಗತಿಯಿಂದಲೂ ಓದುತ್ತಿದ್ದ. ಲಾಕ್‌ಡೌನ್‌ನಿಂದಾಗಿ ಇಲ್ಲಿಗೆ ಬಂದಿದ್ದ, ಆತನಿಗಾಗಿ ದೃಷ್ಠಿ ಬರಲಿ ಎಂದು ನಾವು ಪ್ರಾರ್ಥಿಸುತ್ತಿದ್ದೆ ಎಂದು ತನ್ವೀರ್ ತಂದೆ ನಜೀರ್ ಅಹ್ಮದ್ ಭಟ್ ಕಣ್ಣೀರು ಹಾಕಿದ್ದಾರೆ.

ವೈದ್ಯರು ಹೇಳುವಂತೆ ತನ್ವೀರ್‌ಗೆ ಕನಿಷ್ಟ 15 ಗುಂಡುಗಳಾದರೂ ಕಣ್ಣಿಗೆ ಬಿದ್ದಿವೆ. ಕಣ್ಣಿನಲ್ಲಿ ರಂಧ್ರವಿರುವ ಸಾಧ್ಯತೆಯಿದೆ ಎನ್ನುತ್ತಾರೆ.

ಇನ್ನು ತನ್ವೀರ್ ನಂತೆಯೇ  ಗಾಯಗೊಂಡಿರುವ 12ನೇ ತರಗತಿ ವಿದ್ಯಾರ್ಥಿ ಸುಹೇಲ್ ಅಬ್ಬಾಸ್ ಮೀರ್ ಕೂಡ ನಮ್ಮ ಮೆರವಣಿಗೆ ಶಾಂತಿಯುತವಾಗಿತ್ತು, ನಮ್ಮ ಧಾರ್ಮಿಕ ಆಚರಣೆಯನ್ನು ನಾವು ಮಾಡುತ್ತಿದ್ದೆವು ಎನ್ನುತ್ತಾನೆ. ಈತನಿಗೂ ಎಡಗಣ್ಣು, ಎಡಗೈಗಳಿಗೆ ಗಾಯಗಳಾಗಿವೆ.

image courtesy: ThePrint

ಸದ್ಯ ಗಾಯಾಳು ಸುಹೇಲ್‌ಗೆ ಒಂದು ಶಸ್ತ್ರ ಚಿಕಿತ್ಸೆ ನಡೆದಿದ್ದು, ಕೆಲ ದಿನಗಳಲ್ಲಿ ಎಡಗಣ್ಣಿಗೆ ಮತ್ತೊಂದು ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಸರಿಯಾದ ಚಿಕಿತ್ಸೆ ಮತ್ತು ಉತ್ತಮ ಆರೈಕೆಯಿಂದ ಆತನಿಗೆ ದೃಷ್ಠಿ ಮರಳಬಹುದು ಎಂದು ವೈದ್ಯರು ಭರವಸೆ ನೀಡುತ್ತಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸೇರಿ 19 ಮಂದಿ ತೀವ್ರವಾಗಿ ಗಾಯಗೊಂಡಿದ್ದರೇ, 200-250ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.


ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...