Homeನೂರರ ನೋಟಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? - ಎಚ್‌.ಎಸ್ ದೊರೆಸ್ವಾಮಿ

ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

- Advertisement -
- Advertisement -

ನಮ್ಮ ಸಂಸ್ಕೃತಿಗೆ ಪೂರಕವಾಗಿ ಪರಿಸರಕ್ಕೆ ಎರವಾಗದಂತೆ ನಮ್ಮ ಪೂರ್ವಿಕರು ಬದುಕಿದರು. ನೆಲ, ಜಲ, ವಾಯು ಎಲ್ಲ ಮಾನವರ ಉಪಯೋಗಕ್ಕೆ ಇದೆ ಎಂಬುದು ನಮ್ಮ ತಲೆಮಾರಿಗೆ ಗೊತ್ತೇ ಇಲ್ಲ. ಹಾಲಿಗೂ, ನೀರಿಗೂ ಒಂದೇ ಬೆಲೆ ಆಗುತ್ತಿದ್ದರೂ ಇದೇಕೆ ಹೀಗಾಯಿತು ಎಂದು ಯಾರು ಚಿಂತಿಸುತ್ತಿಲ್ಲ. ಶಬ್ದವಿಲ್ಲದ ನಿಶ್ಯಬ್ದ ಯುದ್ಧವನ್ನು ನಮ್ಮ ಬಂಡವಾಳಶಾಹಿಗಳು, ಕಾರ್ಪೊರೇಟರ್‌ಗಳು, ಬಹುರಾಷ್ಟ್ರೀಯ ಕಂಪನಿಗಳು ಜನಸಾಮಾನ್ಯರ ಮೇಲೆ ಪ್ರಾರಂಭಿಸಿದ್ದಾರೆ. ಇಂದು ನಾವು ಕೇಳುವ ಸಂಗೀತ, ನೋಡುವ ಸಿನಿಮಾ, ನಮ್ಮ ಉಡುಪು, ಚಿಂತನೆಯ ಮಾದರಿಗಳನ್ನು ಗಮನಿಸಿದರೆ ನಮ್ಮ ಅಭಿವೃದ್ಧಿ ಯಾವ ಜಾಡನ್ನು ಹಿಡಿಯುತ್ತಿದೆ ಎಂಬುದು ನಮಗೆ ಮನವರಿಕೆಯಾಗಬಹುದು.

ಡಿವಿಜಿಯವರು ಹೇಳುತ್ತಾರೆ ಈಗ ಧನಸಂಪತ್ತು ಹೆಚ್ಚಿದೆ. ಧಾನ್ಯಸಂಪತ್ತು ಕುಸಿದಿದೆ. ಸೋಪು, ಪೌಡರ್ ಹೆಚ್ಚಿದೆ. ಮನಸ್ಸಿನ ನಿರ್ಮಲತೆ ಕುಗ್ಗಿದೆ. ಭೋಗ ಹೆಚ್ಚಿದೆ ನೆಮ್ಮದಿ ಕುಗ್ಗಿದೆ ಎಂದು.

ಅನ್ನ ತಿನ್ನುವ ಬಾಯಿಗೆ ನೂಡಲ್ಸ್, ಪಿಜ್ಜಾಗಳನ್ನು ತುರುಕಲಾಗುತ್ತಿದೆ. ಎಳೆನೀರು, ಮಜ್ಜಿಗೆ ಕುಡಿಯುತ್ತಿದ್ದ ಬಾಯಿಗೆ ಕೋಕಕೋಲಾ ಸುರಿಯಲಾಗುತ್ತಿದೆ. ಚಕ್ಕುಲಿ, ಕೋಡ್‌ಬಳೆಯ ಬದಲು ಲೇಸ್, ಕುರ್ಕುರೆ, ಚಿಪ್ಸ್  ಪ್ಯಾಕೇಟ್, ಕೆಂಟಕಿ ಚಿಕನ್ ನೀಡಲಾಗುತ್ತಿದೆ. ಅರಿಶಿನ, ಶ್ರೀಗಂಧ ಬಳಿದುಕೊಳ್ಳುತ್ತಿದ್ದ ಮುಖಕ್ಕೆ ಹತ್ತಾರು ಕ್ರೀಮ್‌ಗಳನ್ನು ಬಳಿದುಕೊಳ್ಳಲಾಗುತ್ತಿದೆ. ಕರಿಯರನ್ನು 15 ದಿನಗಳಲ್ಲಿ ಬಿಳಿಯರನ್ನಾಗಿ ಮಾಡಲು, ಬೊಜ್ಜು ಬೆಳೆದವರನ್ನು 10 ದಿನಗಳಲ್ಲಿ ಸಪೂರರನ್ನಾಗಿ ಮಾಡಲು, ಬೋಳು ತಲೆಯವರಿಗೆ ಕೂದಲು ಚಿಗುರುವಂತೆ ಮಾಡುವ ಜಾಹಿರಾತುಗಳು ಹೊರಬೀಳುತ್ತಿವೆ. ಇಡೀ ರಾತ್ರಿ ಭೋಗಸುಖ ಅನುಭವಿಸುವಂತೆ ಮಾಡಲು ಮಾತ್ರೆಗಳನ್ನು ತಯಾರಿಸಲಾಗಿದೆ ಎಂಬ ಜಾಹಿರಾತು ಹೊರಬೀಳುತ್ತಿದೆ. ಮಧ್ಯಮ ವರ್ಗದ ಜನ ಇದಕ್ಕೆಲ್ಲ ಬಲಿಪಶುಗಳಾಗುತ್ತಿದ್ದಾರೆ.

ನಮ್ಮ ಮಾಧ್ಯಮಗಳು ಈ ಜಾಹಿರಾತುದಾರರ ಏಜೆಂಟರುಗಳಂತೆ ಕೆಲಸ ಮಾಡುತ್ತಿವೆ. ಉಳ್ಳವರ ಹಿಡಿ ಜನರ ನೆಮ್ಮದಿಯ ಬದುಕಿಗಾಗಿ ಲಕ್ಷಾಂತರ ಜನ ಬಡವರ ಬದುಕನ್ನು ಕಿತ್ತುಕೊಳ್ಳುವ ಸಾಧನೆ ಈ ಅಭಿವೃದ್ಧಿಯಂತ್ರವಾಗಿದೆ.

ಕೋಟ್ಯಂತರ ಜನಕ್ಕೆ ಬದುಕು ದುರ್ಭರವಾಗಿದೆ ಆದರೆ 120 ಕೋಟಿ ಜನರ ಕೈಗೆ ಮೊಬೈಲ್ ನೀಡಲಾಗಿದೆ. ಭಾರತದ ಅಭಿವೃದ್ಧಿಯನ್ನು ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಅಳೆಯೋಣವೇ? ಬಡತನ ಯಾರಿಂದ ಸೃಷ್ಟಿಯಾಗಿದೆ? ಜನ ಬಡವರಾಗಲು ಬಯಸಿ ಬಡತನ ಅನುಭವಿಸುತ್ತಿದ್ದಾರೆಯೆ? ಬಡತನ ಸರ್ಕಾರದಿಂದ ಸೃಷ್ಟಿಯಾಗುತ್ತದೆ. ಶ್ರೀಮಂತರನ್ನ ಓಲೈಸುವ ಸರ್ಕಾರದ ಧೋರಣೆಯಿಂದ ಬಡತನ ಸೃಷ್ಟಿಯಾಗುತ್ತದೆ. ಮಲತಾಯಿ ಧೋರಣೆಯಿಂದ ಬಡವರನ್ನು ಸರ್ಕಾರ ನೋಡುವುದರಿಂದ ಬಡತನ ಸೃಷ್ಟಿಯಾಗುತ್ತದೆ ಎಂಬ ಕಟುಸತ್ಯವನ್ನು ಮೋದಿ ಮಹಾಶಯ ಒಪ್ಪುವುದೇ ಇಲ್ಲ. ನಮ್ಮ ರಾಜ್ಯಾಂಗ ಸಮಾಜವಾದವನ್ನು ಪ್ರತಿಪಾದಿಸುತ್ತದೆ. ಆದರೆ ನಮ್ಮ ಸರ್ಕಾರಗಳು ಸಮಾಜವಾದದಿಂದ ದೂರ ಸರಿಯುತ್ತಿವೆ. ಬಂಡವಾಳಶಾಹಿ ಪದ್ಧತಿಗೆ ಜಾರುತ್ತಿವೆ.

ಕೆಲವರು ಹೇಳುತ್ತಾರೆ ಸರ್ಕಾರ ನಡೆಸುವವರು ರಿಲಾಯನ್ಸ್ ಕಂಪೆನಿಯವರು ಮತ್ತು ಅದಾನಿ ಎಂದು. ಅದೂ ನಿಜ ಇರಬಹುದು. ಈ ಕಳೆದ 25ವರ್ಷಗಳಲ್ಲಿ ಖಾಸಗಿ ಸೆಕ್ಟರಿನ ಪ್ರಭಾವ ತುಂಬ ಬೆಳೆದಿದೆ. ಸರ್ಕಾರ ಅವರು ಹೇಳಿದಂತೆ ಶಿರಸಾವಹಿಸಿ ಕೆಲಸ ಮಾಡುತ್ತದೆ.

ಸರ್ಕಾರ ಧರ್ಮಛತ್ರವಲ್ಲ. ಕಲ್ಲಿದ್ದಲು ಗಣಿ ಹರಾಜು ಹಾಕುವುದು, ಹಲವು ರೈಲ್ವೆ ಮಾರ್ಗಗಳನ್ನು ದೀರ್ಘಕಾಲದ ಗುತ್ತಿಗೆ ಆಧಾರದ ಮೇಲೆ ಖಾಸಗಿಗೆ ಬಿಟ್ಟುಕೊಡುವುದು, ಆ ಮೂಲಕ ತನ್ನ ಜವಾಬ್ದಾರಿಯಿಂದ ಕಳಚಿಕೊಳ್ಳುವುದು ಆಡಳಿತ ನಡೆಸುವವರ ಹೊಣೆಗೇಡಿತನವನ್ನು ಸೂಚಿಸುತ್ತದೆ. ಸಾರ್ವಜನಿಕ ಜೀವನದಲ್ಲಿ
hypocrisy ಬೆಳೆಸುವ ಹುನ್ನಾರ ಕಾಲಕ್ರಮದಲ್ಲಿ ತಿರುಗುಬಾಣವಾಗಿಬಿಡುವ ಸಾಧ್ಯತೆಗಳಿವೆ.


ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...