Homeನೂರರ ನೋಟಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? - ಎಚ್‌.ಎಸ್ ದೊರೆಸ್ವಾಮಿ

ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

- Advertisement -
- Advertisement -

ನಮ್ಮ ಸಂಸ್ಕೃತಿಗೆ ಪೂರಕವಾಗಿ ಪರಿಸರಕ್ಕೆ ಎರವಾಗದಂತೆ ನಮ್ಮ ಪೂರ್ವಿಕರು ಬದುಕಿದರು. ನೆಲ, ಜಲ, ವಾಯು ಎಲ್ಲ ಮಾನವರ ಉಪಯೋಗಕ್ಕೆ ಇದೆ ಎಂಬುದು ನಮ್ಮ ತಲೆಮಾರಿಗೆ ಗೊತ್ತೇ ಇಲ್ಲ. ಹಾಲಿಗೂ, ನೀರಿಗೂ ಒಂದೇ ಬೆಲೆ ಆಗುತ್ತಿದ್ದರೂ ಇದೇಕೆ ಹೀಗಾಯಿತು ಎಂದು ಯಾರು ಚಿಂತಿಸುತ್ತಿಲ್ಲ. ಶಬ್ದವಿಲ್ಲದ ನಿಶ್ಯಬ್ದ ಯುದ್ಧವನ್ನು ನಮ್ಮ ಬಂಡವಾಳಶಾಹಿಗಳು, ಕಾರ್ಪೊರೇಟರ್‌ಗಳು, ಬಹುರಾಷ್ಟ್ರೀಯ ಕಂಪನಿಗಳು ಜನಸಾಮಾನ್ಯರ ಮೇಲೆ ಪ್ರಾರಂಭಿಸಿದ್ದಾರೆ. ಇಂದು ನಾವು ಕೇಳುವ ಸಂಗೀತ, ನೋಡುವ ಸಿನಿಮಾ, ನಮ್ಮ ಉಡುಪು, ಚಿಂತನೆಯ ಮಾದರಿಗಳನ್ನು ಗಮನಿಸಿದರೆ ನಮ್ಮ ಅಭಿವೃದ್ಧಿ ಯಾವ ಜಾಡನ್ನು ಹಿಡಿಯುತ್ತಿದೆ ಎಂಬುದು ನಮಗೆ ಮನವರಿಕೆಯಾಗಬಹುದು.

ಡಿವಿಜಿಯವರು ಹೇಳುತ್ತಾರೆ ಈಗ ಧನಸಂಪತ್ತು ಹೆಚ್ಚಿದೆ. ಧಾನ್ಯಸಂಪತ್ತು ಕುಸಿದಿದೆ. ಸೋಪು, ಪೌಡರ್ ಹೆಚ್ಚಿದೆ. ಮನಸ್ಸಿನ ನಿರ್ಮಲತೆ ಕುಗ್ಗಿದೆ. ಭೋಗ ಹೆಚ್ಚಿದೆ ನೆಮ್ಮದಿ ಕುಗ್ಗಿದೆ ಎಂದು.

ಅನ್ನ ತಿನ್ನುವ ಬಾಯಿಗೆ ನೂಡಲ್ಸ್, ಪಿಜ್ಜಾಗಳನ್ನು ತುರುಕಲಾಗುತ್ತಿದೆ. ಎಳೆನೀರು, ಮಜ್ಜಿಗೆ ಕುಡಿಯುತ್ತಿದ್ದ ಬಾಯಿಗೆ ಕೋಕಕೋಲಾ ಸುರಿಯಲಾಗುತ್ತಿದೆ. ಚಕ್ಕುಲಿ, ಕೋಡ್‌ಬಳೆಯ ಬದಲು ಲೇಸ್, ಕುರ್ಕುರೆ, ಚಿಪ್ಸ್  ಪ್ಯಾಕೇಟ್, ಕೆಂಟಕಿ ಚಿಕನ್ ನೀಡಲಾಗುತ್ತಿದೆ. ಅರಿಶಿನ, ಶ್ರೀಗಂಧ ಬಳಿದುಕೊಳ್ಳುತ್ತಿದ್ದ ಮುಖಕ್ಕೆ ಹತ್ತಾರು ಕ್ರೀಮ್‌ಗಳನ್ನು ಬಳಿದುಕೊಳ್ಳಲಾಗುತ್ತಿದೆ. ಕರಿಯರನ್ನು 15 ದಿನಗಳಲ್ಲಿ ಬಿಳಿಯರನ್ನಾಗಿ ಮಾಡಲು, ಬೊಜ್ಜು ಬೆಳೆದವರನ್ನು 10 ದಿನಗಳಲ್ಲಿ ಸಪೂರರನ್ನಾಗಿ ಮಾಡಲು, ಬೋಳು ತಲೆಯವರಿಗೆ ಕೂದಲು ಚಿಗುರುವಂತೆ ಮಾಡುವ ಜಾಹಿರಾತುಗಳು ಹೊರಬೀಳುತ್ತಿವೆ. ಇಡೀ ರಾತ್ರಿ ಭೋಗಸುಖ ಅನುಭವಿಸುವಂತೆ ಮಾಡಲು ಮಾತ್ರೆಗಳನ್ನು ತಯಾರಿಸಲಾಗಿದೆ ಎಂಬ ಜಾಹಿರಾತು ಹೊರಬೀಳುತ್ತಿದೆ. ಮಧ್ಯಮ ವರ್ಗದ ಜನ ಇದಕ್ಕೆಲ್ಲ ಬಲಿಪಶುಗಳಾಗುತ್ತಿದ್ದಾರೆ.

ನಮ್ಮ ಮಾಧ್ಯಮಗಳು ಈ ಜಾಹಿರಾತುದಾರರ ಏಜೆಂಟರುಗಳಂತೆ ಕೆಲಸ ಮಾಡುತ್ತಿವೆ. ಉಳ್ಳವರ ಹಿಡಿ ಜನರ ನೆಮ್ಮದಿಯ ಬದುಕಿಗಾಗಿ ಲಕ್ಷಾಂತರ ಜನ ಬಡವರ ಬದುಕನ್ನು ಕಿತ್ತುಕೊಳ್ಳುವ ಸಾಧನೆ ಈ ಅಭಿವೃದ್ಧಿಯಂತ್ರವಾಗಿದೆ.

ಕೋಟ್ಯಂತರ ಜನಕ್ಕೆ ಬದುಕು ದುರ್ಭರವಾಗಿದೆ ಆದರೆ 120 ಕೋಟಿ ಜನರ ಕೈಗೆ ಮೊಬೈಲ್ ನೀಡಲಾಗಿದೆ. ಭಾರತದ ಅಭಿವೃದ್ಧಿಯನ್ನು ಮೊಬೈಲ್ ಸಂಖ್ಯೆಯ ಆಧಾರದ ಮೇಲೆ ಅಳೆಯೋಣವೇ? ಬಡತನ ಯಾರಿಂದ ಸೃಷ್ಟಿಯಾಗಿದೆ? ಜನ ಬಡವರಾಗಲು ಬಯಸಿ ಬಡತನ ಅನುಭವಿಸುತ್ತಿದ್ದಾರೆಯೆ? ಬಡತನ ಸರ್ಕಾರದಿಂದ ಸೃಷ್ಟಿಯಾಗುತ್ತದೆ. ಶ್ರೀಮಂತರನ್ನ ಓಲೈಸುವ ಸರ್ಕಾರದ ಧೋರಣೆಯಿಂದ ಬಡತನ ಸೃಷ್ಟಿಯಾಗುತ್ತದೆ. ಮಲತಾಯಿ ಧೋರಣೆಯಿಂದ ಬಡವರನ್ನು ಸರ್ಕಾರ ನೋಡುವುದರಿಂದ ಬಡತನ ಸೃಷ್ಟಿಯಾಗುತ್ತದೆ ಎಂಬ ಕಟುಸತ್ಯವನ್ನು ಮೋದಿ ಮಹಾಶಯ ಒಪ್ಪುವುದೇ ಇಲ್ಲ. ನಮ್ಮ ರಾಜ್ಯಾಂಗ ಸಮಾಜವಾದವನ್ನು ಪ್ರತಿಪಾದಿಸುತ್ತದೆ. ಆದರೆ ನಮ್ಮ ಸರ್ಕಾರಗಳು ಸಮಾಜವಾದದಿಂದ ದೂರ ಸರಿಯುತ್ತಿವೆ. ಬಂಡವಾಳಶಾಹಿ ಪದ್ಧತಿಗೆ ಜಾರುತ್ತಿವೆ.

ಕೆಲವರು ಹೇಳುತ್ತಾರೆ ಸರ್ಕಾರ ನಡೆಸುವವರು ರಿಲಾಯನ್ಸ್ ಕಂಪೆನಿಯವರು ಮತ್ತು ಅದಾನಿ ಎಂದು. ಅದೂ ನಿಜ ಇರಬಹುದು. ಈ ಕಳೆದ 25ವರ್ಷಗಳಲ್ಲಿ ಖಾಸಗಿ ಸೆಕ್ಟರಿನ ಪ್ರಭಾವ ತುಂಬ ಬೆಳೆದಿದೆ. ಸರ್ಕಾರ ಅವರು ಹೇಳಿದಂತೆ ಶಿರಸಾವಹಿಸಿ ಕೆಲಸ ಮಾಡುತ್ತದೆ.

ಸರ್ಕಾರ ಧರ್ಮಛತ್ರವಲ್ಲ. ಕಲ್ಲಿದ್ದಲು ಗಣಿ ಹರಾಜು ಹಾಕುವುದು, ಹಲವು ರೈಲ್ವೆ ಮಾರ್ಗಗಳನ್ನು ದೀರ್ಘಕಾಲದ ಗುತ್ತಿಗೆ ಆಧಾರದ ಮೇಲೆ ಖಾಸಗಿಗೆ ಬಿಟ್ಟುಕೊಡುವುದು, ಆ ಮೂಲಕ ತನ್ನ ಜವಾಬ್ದಾರಿಯಿಂದ ಕಳಚಿಕೊಳ್ಳುವುದು ಆಡಳಿತ ನಡೆಸುವವರ ಹೊಣೆಗೇಡಿತನವನ್ನು ಸೂಚಿಸುತ್ತದೆ. ಸಾರ್ವಜನಿಕ ಜೀವನದಲ್ಲಿ
hypocrisy ಬೆಳೆಸುವ ಹುನ್ನಾರ ಕಾಲಕ್ರಮದಲ್ಲಿ ತಿರುಗುಬಾಣವಾಗಿಬಿಡುವ ಸಾಧ್ಯತೆಗಳಿವೆ.


ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...