Homeಅಂಕಣಗಳುಶುರುವಾಗಿದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕುವ ಕೆಲಸ

ಶುರುವಾಗಿದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕುವ ಕೆಲಸ

- Advertisement -
- Advertisement -

ಸಂಪಾದಕೀಯ |

ಚಳಿಗಾಲ ಮುಗಿದು ತಾಪಮಾನ ಏರುತ್ತಿರುವ ಜತೆಗೇ ಲೋಕಸಭಾ ಚುನಾವಣೆಯ ಬಿಸಿಯೂ ಸೇರಿ ವಾತಾವರಣದ ಶಾಖ ಏರುತ್ತಲಿದೆ. ರಾಜಕಾರಣಿಗಳ ಪ್ರತಿ ನಡೆಯೂ ಆಗಲೇ ಈ ಚುನಾವಣೆಗಳ ಮೇಲೆ ಕಣ್ಣಿಟ್ಟುಕೊಂಡೇ ಜರುಗುತ್ತಲಿದೆ. ಆದರೆ ಈ ಚುನಾವಣೆ ಹಿಂದಿನಂಥದ್ದಲ್ಲ. ಇದು ಈ ದೇಶದ ಪ್ರಜಾತಂತ್ರ ಮತ್ತು ಅದಕ್ಕೆ ಅಡಿಪಾಯವಾಗಿರುವ ಸಂವಿಧಾನವನ್ನು ಜನಸಾಮಾನ್ಯರು ಉಳಿಸಿಕೊಳ್ಳುತ್ತಾರೆಯೋ ಅಥವಾ ಮತ್ತೊಮ್ಮೆ ಹಿಂದುತ್ವ ಫ್ಯಾಸಿಸಂಗೆ ಮೇಲುಗೈ ಆಗುತ್ತದೋ ಎಂಬ ನಿರ್ಣಾಯಕ ಚುನಾವಣೆ ಇದಾಗಲಿದೆ. ಅದಕ್ಕಿಂತಲೂ ಹೆಚ್ಚಾಗಿ ಜನಸಾಮಾನ್ಯರ ಬವಣೆಗೆ ಈಗಲಾದರೂ ಕಿಂಚಿತ್ ಸಮಾಧಾನ ಸಿಗಬಹುದೋ ಎಂಬ ಕಾತರವೂ ಇದೆ. ಇದೇ ಆಶಯದಿಂದ ಈ ದೇಶದ ಜನ ಹಣ-ಹೆಂಡ, ಜಾತಿ ಇತ್ಯಾದಿ ಆಮಿಷಗಳ ನಡುವೆಯೂ ಅಧಿಕಾರರೂಢ ಪಕ್ಷಗಳ ವಿರುದ್ಧ ಮತ ಚಲಾಯಿಸುತ್ತಲೇ ಬಂದಿದ್ದಾರೆ. ಇದಕ್ಕೆ ಮೊನ್ನೆ ನಡೆದ ಉಪಚುನಾವಣೆಯಲ್ಲಿ ಆಳುವ ಪಕ್ಷ ಅನುಭವಿಸಿದ ಸೋಲೇ ಸಾಕ್ಷಿ. ಉಪಚುನಾವಣೆಯ ಫಲಿತಾಂಶ ಮಹಾ ಚುನಾವಣೆಯ ಭವಿಷ್ಯವನ್ನು ನಿರ್ಧರಿಸದಿದ್ದರೂ, ಅದು ಜನರ ಆಲೋಚನೆಯ ದಿಕ್ಕನ್ನು ಸೂಚಿಸುವಂತಿರುತ್ತದೆ. ಉದಾಹರಣೆಗೆ, ಉಪಚುನಾವಣೆಗಳ ಫಲಿತಾಂಶ ಭಾಜಪದ ದರ್ಪವನ್ನೂ, ಆತ್ಮವಿಶ್ವಾಸವನ್ನೂ ಕೊಂಚ ಕುಗ್ಗಿಸಿರುವುದು ನಿಜ. ಆದರೆ ಇದರಿಂದ ವಿರೋಧ ಪಕ್ಷಗಳು ಸಂಭ್ರಮಿಸುವ ಹಾಗೇನೂ ಇಲ್ಲ. ಆಳುವ ಪಕ್ಷಗಳ ಮೇಲಿನ ಅಸಮಾಧಾನವನ್ನು ಜನ ಹೊರಹಾಕಿದ್ದಾರೆ ಅಷ್ಟೆ. ಹಾಗೆ ನೋಡಿದರೆ ಭಾರತದ ಮತದಾರರು ತುರ್ತು ಪರಿಸ್ಥಿತಿ ನಂತರ, ಕೆಲವು ಅಪವಾದಗಳನ್ನು ಹೊರತುಪಡಿಸಿ, ನಿರಂತರವಾಗಿ ಅಧಿಕಾರ ವಿರೋಧಿ ನಿಲುವನ್ನು ಪ್ರಕಟಿಸುತ್ತಲೇ ಬಂದಿದ್ದಾರೆ. ನಮ್ಮ ಚುನಾವಣೆಯ ಸ್ವರೂಪದಲ್ಲೇ ಆಯ್ಕೆಗಳು ತೀರಾ ಮಿತವಾಗಿರುವುದರಿಂದ ಪ್ರತಿ ಬಾರಿಯೂ ಅಧಿಕಾರದಲ್ಲಿ ಇಲ್ಲದ ಪಕ್ಷಗಳು ಮತ್ತೇ ಆಯ್ಕೆ ಆಗುತ್ತಲಿವೆ.
ಈ ಅಧಿಕಾರ ವಿರೋಧಿ ನಿಲುವು ಏನನ್ನೂ ಸೂಚಿಸುತ್ತದೆ? ಅಧಿಕಾರಕ್ಕೆ ಬಂದ ಪ್ರತಿ ಪಕ್ಷವೂ ಜನರನ್ನು ಮೋಸಗೊಳಿಸಿದೆ. ಹೀಗೆ ಮೋಸ ಹೋಗುತ್ತಿದ್ದರೂ, ಜನ ಸಿನಿಕರಾಗದೆ ತಮ್ಮ ಸೀಮಿತ ಆಯ್ಕೆಯನ್ನು ನಿರಂತರವಾಗಿ ತೋರಿಸುತ್ತಲೇ ಇದ್ದಾರೆ. ಅಂದರೆ, ಜನ ಬದಲಾವಣೆ ಬಯಸುತ್ತಿದ್ದಾರೆ, ಆದರೆ ಜನರಿಗೆ ಬೇಕಾದ ಬದಲಾವಣೆಯ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಈ ಪಕ್ಷಗಳಿಗೆ ಒಂದು ಸಾಧ್ಯವಾಗುತ್ತಿಲ್ಲ; ಅಥವಾ ಅದು ತಿಳಿದಿದ್ದರೂ ಅವರಿಗೆ ಈ ಬದಲಾವಣೆಗಳನ್ನು ತರಲು ಮನಸ್ಸಿಲ್ಲ. ಇನ್ನೂ ಮುಖ್ಯವಾಗಿ ನವಉದಾರೀಕರಣದಿಂದ ಹೊರಬರುವ ತನಕ ಜನಪರ ಬದಲಾವಣೆ ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ಕೆಲವು ಜನಪ್ರಿಯ ಕಲ್ಯಾಣಯೋಜನೆಗಳನ್ನು ಮಾತ್ರ ಮುಂದಿಟ್ಟು ಅದೇ ಬದಲಾವಣೆ ಎಂಬಂತೆ ಜನರನ್ನು ಮರಳು ಮಾಡುವುದು ಎಲ್ಲ ಪಕ್ಷಗಳ ಚಾಳಿಯಾಗಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಗೆ ಹೋಲಿಸಿದರೆ ಇದರಲ್ಲಿ ಬಿಜೆಪಿ ಕೊಂಚ ಭಿನ್ನ ಮತ್ತು ಹೆಚ್ಚು ಅಪಾಯಕಾರಿ. ಅದು ತನ್ನ ಹಿಂದುತ್ವ ಫ್ಯಾಸಿಸಂ ಮೂಲಕ ಹೊಸ “ಹಿಂದೂ ನಾಗರಿಕತೆ”ಯನ್ನು ಕಟ್ಟುವ ಆಮಿಷವನ್ನು ಮುಂದಿಡುತ್ತದೆ. ರಾಮಮಂದಿರ ಕಟ್ಟುವುದು ಅದರ ಪ್ರಕಾರ ಈ ನಾಗರಿಕತೆಯ ಭಾಗ. ಆದರೆ ಮೊನ್ನೆಯ ಚುನಾವಣೆಗಳು ಭಾಜಪದ ಈ ಯೋಜನೆಗೆ ಸೊಪ್ಪು ಹಾಕಿಲ್ಲ. ಅವರಿಗೆ ಏರುತ್ತಿರುವ ನಿರುದ್ಯೋಗ, ಹಣದುಬ್ಬರ, ಜಿ.ಎಸ್.ಟಿ ಮತ್ತು ನೋಟು ಅಮಾನ್ಯೀಕರಣದಿಂದಾದ ತೊಂದರೆ, ಕೃಷಿ ಬಿಕ್ಕಟ್ಟು ಇತ್ಯಾದಿ ಹಾರ್ಡ್‍ಕೋರ್ ಆರ್ಥಿಕ ಕಾರಣಗಳೇ ಮುಖ್ಯವಾಗಿವೆ. ಹೀಗಾಗಿ ರಾಮಮಂದಿರದ ವಿಚಾರ ಕೊಂಚ ಮಟ್ಟಿಗೆ ತನ್ನ ಅಪೀಲನ್ನು ಕಳೆದುಕೊಂಡಿದೆ. ಮೋದಿಯ ವಾಗ್ಝರಿ ಕೂಡ ತನ್ನ ಮೋಡಿಯನ್ನು ಕಳೆದುಕೊಳ್ಳುತ್ತಿದೆ. ಇದರಿಂದ ಕಂಗಾಲಾಗಿರುವ ಮೋದಿ ಈ ಚುನಾವಣೆಯನ್ನು ಸುಭದ್ರ (ಮಜ್ಬೂರ್) ಮತ್ತು ಅಸಹಾಯಕ (ಮಜ್ದೂರ್) ಸರ್ಕಾರದ ನಡುವಿನ ಆಯ್ಕೆ ಎಂದಿದ್ದಾರೆ. ಆದರ ಹಿಂದೆಯೇ ತಮ್ಮ ಪಕ್ಷ ತನ್ನ ಎಲ್ಲ ಹಳೆಯ ಗೆಳೆಯರನ್ನು ಸ್ವಾಗತಿಸುತ್ತದೆ ಎಂದು ಕೂಡ ಹೇಳಿದ್ದಾರೆ. ಇದು ಈ ಬಾರಿ ತಮಗೆ ಭಾರಿ ಬಹುಮತ ಸಿಗಲಾರದು ಎನ್ನುವುದನ್ನು ಬಿಜೆಪ ಈಗಾಗಲೇ ಒಪ್ಪಿಕೊಂಡ ಹಾಗಿದೆ. ಹೀಗಾಗಿ ಈ ಬಾರಿ ಸಮ್ಮಿಶ್ರ ಸರ್ಕಾರ ಹೆಚ್ಚು ಸಂಭವನೀಯ. ಇದು ಕೂಡ ಜನರ ಭ್ರಮನಿರಸನದ ಆಯ್ಕೆಯ ಪ್ರತೀಕವೇ ಹೌದು.
ಇದರಿಂದ ಹೊರಹೊಮ್ಮುವ ಪಾಠಗಳೇನು?
ಮೊದಲಿಗೆ, ಹಿಂದುತ್ವ, ಕೋಮುವಾದ, ರಾಮಮಂದಿರ…. ಇತ್ಯಾದಿ ಭಾವನಾತ್ಮಕ ಅಂಶಗಳು ಜನರಿಗೆ ಬೇಕಾದ ನೆಮ್ಮದಿಯ ಬದುಕು, ಭದ್ರತೆಗಳನ್ನು ನೀಡಲಾಗದು ಎಂಬ ಅರಿವು. ಇದು ಸ್ಪಷ್ಟವಾಗಿ ಗೋಚರವಾಗದಿದ್ದರೂ, ಆಳದಲ್ಲಿ ಕೆಲಸ ಮಾಡಿರುವುದು ನಿಜ. ಹಾಗೆಯೇ, ಈ ದೇಶ ಎದುರಿಸುತ್ತಿರುವ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಅಭದ್ರತೆ, ಶಿಕ್ಷಣ ಮತ್ತು ಆರೋಗ್ಯ ಮುಂತಾದ ಸಾರ್ವಜನಿಕ ಸೇವೆಗಳು ದುರ್ಲಭವಾಗಿರುವುದು ಇನ್ನೊಂದು. ಮೇಲಾಗಿ, ಅಸಂಘಟಿತ ಕಾರ್ಮಿಕರ, ಮಹಿಳೆ, ದಲಿತ ಮತ್ತು ಇತರೆ ಅಲ್ಪಸಂಖ್ಯಾತರ ಆತಂಕ ಇತ್ಯಾದಿ ವಿಷಯಗಳಿಗೆ ಬೇಕಾದ ಸೂಕ್ತ ಪರಿಹಾರ ಮಾರ್ಗಗಳು ಯಾವ ರಾಜಕೀಯ ಪಕ್ಷದಲ್ಲೂ ಇಲ್ಲ ಎಂಬ ಸತ್ಯ.
ಮುಂದಿನ ಚುನಾವಣೆ ಈ ವಿಷಯಗಳನ್ನು ಮುಂದಿಟ್ಟುಕೊಂಡು ನಡೆಯಬೇಕಾಗಿದೆ. ಆದರೆ ಈಗಿನ ರಾಜಕೀಯ ಪಕ್ಷಗಳಲ್ಲಿ ಈ ವಿಚಾರಗಳಿಗೆ ಸಂಬಂಧಪಟ್ಟ ಯಾವುದೇ ಸ್ಪಷ್ಟ ಕಾರ್ಯಯೋಜನೆ ಇಲ್ಲ. ಜಾಗತೀಕರಣ ಮತ್ತು ಖಾಸಗಿಕರಣಕ್ಕೇ ಒತ್ತು ನೀಡುವ ಯಾವ ಪಕ್ಷದಿಂದಲೂ ಈ ಸಂದಿಗ್ಧತೆಯಿಂದ ಹೊರಬರುವ ಮಾರ್ಗವೇ ಇಲ್ಲ. ಹೀಗಾಗಿ ಇಂದು ಪಕ್ಷರಾಜಕಾರಣದಿಂದ ಹೊರತಾಗಿ ಯೋಚಿಸುವ, ನಮ್ಮ ದೇಶದ ಜನ ಕಾಯುತ್ತಿರುವ ಬದಲಾವಣೆಗಳನ್ನು ಜಾರಿಗೆ ತರುವ ಮಾರ್ಗೊಪಾಯಗಳನ್ನು ಜನರ ಮುಂದಿಡುವ ಕಾರ್ಯ ಅತ್ಯಂತ ಜರೂರಾಗಿ ಆಗಬೇಕಿದೆ. ಅಂಥ ಕಾರ್ಯೊದ್ದೇಶವನ್ನು ಇಟ್ಟುಕೊಂಡು ಹೋರಾಡುವ ಹೊಸ ಯುವ ಶಕ್ತಿಯೊಂದು ಈಗ ಹಿಂದೆಂದಿಗಿಂತಲೂ ಅಗತ್ಯವಾಗಿದೆ.
ಈ ಕಾರಣಕ್ಕೆ ‘ಬದಲಾವಣೆ ಸಾಧ್ಯ ಮತ್ತು ನನ್ನಿಂದಲೇ ಈ ಬದಲಾವಣೆ ಪ್ರಾರಂಭ’ ಎಂಬ ಅರ್ಥ ಧ್ವನಿಸುವ ‘ಐ ಕ್ಯಾನ್’ (I ಅಂಓ) ಆಂದೋಲನಕ್ಕೆ ಅಖಿಲ ಭಾರತ ಮಟ್ಟದಲ್ಲಿ ಚಾಲನೆ ನೀಡಲಾಗಿದೆ. ಇದೇ ಆಶಯಗಳನ್ನ ಹೊಂದಿರುವ ಆದರೆ ಕರ್ನಾಟಕದ ಸಂದರ್ಭಕ್ಕೆ ಹತ್ತಿರವಾದ ವಿಚಾರಗಳನ್ನು ಇಟ್ಟುಕೊಂಡು ‘ದೇಶಕ್ಕಾಗಿ ನಾವು – ನಂಗೂ ಸಾಧ್ಯ!’ ಎಂಬ ಘೋಷಣೆಯ ಅಡಿಯಲ್ಲಿ ಯುವ ಜನತೆಯನ್ನು ಒಟ್ಟಿಗೆ ತರುವ ಪ್ರಯತ್ನ ನಮ್ಮ ರಾಜ್ಯದಲ್ಲೂ ಪ್ರಾರಂಭವಾಗಿದೆ. ಇದರಲ್ಲಿ ಜತೆಯಾಗುವ ಕಾರ್ಮಿಕರ, ಮಹಿಳೆಯರ, ನಿರುದ್ಯೋಗಿಗಳ, ದಲಿತರ, ಅಲ್ಪಸಂಖ್ಯಾತರ ಶಿಕ್ಷಣ, ಆರೋಗ್ಯ, ಪರಿಸರ ಇತ್ಯಾದಿ ವಿಚಾರಗಳಿಗಾಗಿ ಹೋರಾಡುತ್ತಿರುವ ಸಂಘಟನೆಗಳು ಹಾಗೂ ವ್ಯಕ್ತಿಗಳು ತಮ್ಮ ತಮ್ಮ ಅಜೆಂಡಾಗಳನ್ನೂ, ಅನನ್ಯತೆಗಳನ್ನು ಇಟ್ಟುಕೊಂಡೇ ‘ದೇಶಕ್ಕಾಗಿ ನಾವು’ ಎನ್ನುವ ಸಮಾನ ಆಶಯದೊಂದಿಗೆ ಕೈಜೋಡಿಸಲಿದ್ದಾರೆ. ಇದೊಂದು ರೀತಿಯಲ್ಲಿ ‘ಪ್ರಜಾ ಮಹಾಘಟ ಬಂಧನ’. ಇದು ಬದಲಾವಣೆಗೆ ಹಾತೊರೆಯುವ ಮನಸ್ಸುಗಳೆಲ್ಲಾ ಒಗ್ಗೂಡಿ ನಿಜವಾದ ಜನ ಪರ್ಯಾಯವನ್ನು ಕಟ್ಟುವ ಪ್ರಯತ್ನ. ಇದು ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕುವ ಕೆಲಸ. ಈ ಆಂದೋಲನಕ್ಕೆ ಧ್ವನಿಗೂಡಿಸಿರುವ ಹಿರಿಯ ಮುತ್ಸದ್ಧಿ ಎ.ಕೆ ಸುಬ್ಬಯ್ಯನವರು ಹೇಳಿರುವ ಹಾಗೆ ಇದು ಯಾವುದೋ ಪಕ್ಷವನ್ನು ಗೆಲ್ಲಿಸಲು ಅಥವಾ ಸೋಲಿಸಲು ನಡೆಯುತ್ತಿರುವ ಆಂದೋಲನವಲ್ಲ. ಪ್ರಜೆಗಳೇ ಪ್ರಜಾಪ್ರÀಭುತ್ವದ ನಿಜವಾದ ಪ್ರಭುಗಳು ಎನ್ನುವುದನ್ನು ರಾಜಕೀಯ ಪಕ್ಷಗಳಿಗೆ ನೆನಪಿಸುವ, ಜನರ ಅಧಿಕಾರಕ್ಕಾಗಿ ಒತ್ತಾಯಿಸುವ ಹೋರಾಟ.
ಇದರಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅವರ ಆದಿಯಾಗಿ ಜನಪರವಾಗಿ ಇರುವ ಎಲ್ಲ ಹಿರಿಯ ಕಿರಿಯರೂ ಭಾಗಿಯಾಗಿದ್ದಾರೆ. ನೀವೂ ಕೂಡ ಹೇಳಿ ‘ನಂಗೂ ಸಾಧ್ಯ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...