HomeಮುಖಪುಟRupee one - Everyone: ಪ್ರತಿ ನಾಗರಿಕ-1 ರೂ. ಮತ್ತು 1 ತಿಂಗಳು ಅಭಿವ್ಯಕ್ತಿ ಸ್ವಾತಂತ್ರ್ಯದ...

Rupee one – Everyone: ಪ್ರತಿ ನಾಗರಿಕ-1 ರೂ. ಮತ್ತು 1 ತಿಂಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಆಂದೋಲನಕ್ಕೆ ಕರೆ

ಸೆಪ್ಟೆಂಬರ್ 2ರಿಂದ ಆರಂಭಿಸಿ ಅಕ್ಟೋಬರ್ 2ರವರೆಗೆ ದೇಶದಲ್ಲಿ 'ಆತ್ಮಸಾಕ್ಷಿಯ ಸ್ವಾತಂತ್ರ್ಯದ' ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಆಂದೋಲನವನ್ನು ಹಮ್ಮಿಕೊಳ್ಳಬೇಕು ಎಂದು ಭೂಷಣ್ ಮನವಿ ಮಾಡಿದ್ದಾರೆ.

- Advertisement -
- Advertisement -

‘ನಾನು ಮಾಡಿದ ಟ್ವೀಟ್‌ಗಳು ನಾಗರಿಕನ ಕರ್ತವ್ಯದ ಭಾಗವಾಗಿತ್ತು, ಆದರೆ ಸುಪ್ರೀಂಕೋರ್ಟು ದುರ್ಬಲವಾಗಬಾರದು ಎಂಬ ಕಾರಣಕ್ಕೆ ಅದನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ’ ಎಂದು ಘೋಷಿಸಿದ ಸುಪ್ರೀಂಕೋರ್ಟಿನ ನ್ಯಾಯವಾದಿ ಪ್ರಶಾಂತ್ ಭೂಷಣ್‌ರ ನಂತರ ಮಾತನಾಡಿದ ಅವರ ಸಹಯೋಗಿಗಳು ಪ್ರತಿ ನಾಗರಿಕ 1 ರೂ (Rupee one – everyone) ಎಂಬ ಹೊಸ ಆಂದೋಲನವನ್ನು ಘೋಷಿಸಿದ್ದಾರೆ.

ಸುಪ್ರೀಂಕೋರ್ಟು ಇಂದು ಬೆಳಿಗ್ಗೆ ಪ್ರಶಾಂತ್ ಭೂಷಣ್‌ರ ಟ್ವೀಟ್‌ಗಳ ವಿಚಾರದಿಂದ ನ್ಯಾಯಾಂಗ ನಿಂದನೆಯ ತೀರ್ಪಿನ ಭಾಗವಾಗಿ 1 ರೂ ದಂಡ ವಿಧಿಸಿತ್ತು.

ಆ ನಂತರ ಸಂಜೆ 4ಕ್ಕೆ ದೆಹಲಿಯ ಪ್ರೆಸ್‌ಕ್ಲಬ್‌ನ ಹೊರ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಶಾಂತ್ ಭೂಷಣ್ ಅವರು 1 ರೂ ದಂಡ ಕಟ್ಟುವುದಾಗಿ ಹೇಳಿದ್ದರು.

ಅವರ ಘೋಷಣೆಯ ನಂತರ ಸ್ವರಾಜ್ ಅಭಿಯಾನದ ಭಾಗವಾಗಿ ಯೋಗೇಂದ್ರ ಯಾದವ್ ಮತ್ತು ‘ನ್ಯಾಯಾಂಗದ ಉತ್ತರದಾಯಿತ್ವ ಮತ್ತು ಸುಧಾರಣೆಗಾಗಿನ ಸಮಿತಿ’ಯ ಭಾಗವಾಗಿ ಅಂಜಲಿ ಭಾರದ್ವಾಜ್ ಮಾತನಾಡಿದರು. ಪ್ರಶಾಂತ್ ಭೂಷಣ್ ಇವೆರಡರಲ್ಲೂ ಮುಖ್ಯಪಾತ್ರ ವಹಿಸಿದ್ದಾರೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಯೋಗೇಂದ್ರ ಯಾದವ್‌ ಅವರು ಈ ಸಂದರ್ಭದಲ್ಲಿ ದೇಶದ ಮುಂದೆ ಎರಡು ಮನವಿಗಳನ್ನು ಮುಂದಿಟ್ಟರು. ಒಂದು, ದೇಶದ ಪ್ರತಿಯೊಬ್ಬ ನಾಗರಿಕಳೂ/ನೂ ಒಂದೊಂದು ರೂಪಾಯಿ ನೀಡುವುದರ ಮೂಲಕ ಇಂತಹ ಹೋರಾಟಗಳನ್ನು ಮುಂದುವರೆಸುವುದಕ್ಕಾಗಿ ಒಂದು ನಿಧಿಯನ್ನು ಸ್ಥಾಪಿಸಬೇಕು. ಏಕೆಂದರೆ ಇದು ಪ್ರಶಾಂತ್ ಭೂಷಣ್ ಒಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಲ್ಲ. ದೇಶದಲ್ಲಿ ಜನಸಾಮಾನ್ಯರಿಂದ ಹಿಡಿದು ಚಿಂತಕರವರೆಗೆ ಹಲವರ ಪರಿಸ್ಥಿತಿ ಇದೇ ಆಗಿದೆ.

ಎರಡು, ಸೆಪ್ಟೆಂಬರ್ 2ರಿಂದ ಆರಂಭಿಸಿ ಅಕ್ಟೋಬರ್ 2ರವರೆಗೆ ದೇಶದಲ್ಲಿ ‘ಆತ್ಮಸಾಕ್ಷಿಯ ಸ್ವಾತಂತ್ರ್ಯದ’ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಒಂದು ಆಂದೋಲನವನ್ನು ಹಮ್ಮಿಕೊಳ್ಳಬೇಕು ಎಂಬ ಮನವಿಯನ್ನು ಅವರು ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಪ್ರಶಾಂತ್ ಭೂಷಣ್ ಅವರು. ತಾನು ಮೇಲ್ಮನವಿ ಅಥವಾ ತೀರ್ಪಿನ ಮರುಪರಿಶೀಲನೆಗಾಗಿನ ನನ್ನ ಹಕ್ಕನ್ನು ಕಾದಿರಿಸಿಕೊಂಡೇ ಪ್ರತಿಭಟನೆಯಾಗಿ 1 ರೂ ದಂಡ ಕಟ್ಟುತ್ತಿದ್ದೇನೆ ಎಂದು ಹೇಳಿದರು. ನೀವು 3 ತಿಂಗಳ ಜೈಲು ಅಥವಾ ಕೋರ್ಟ್’ನಿಂದ ಹೊರಹಾಕಿಸಿಕೊಳ್ಳುವುದರ ಬದಲಿಗೆ 1 ರೂ ಕಟ್ಟುವುದನ್ನೇಕೆ ಆಯ್ದುಕೊಂಡಿದ್ದೀರಿ ಎಂಬ ಇನ್ನೊಂದು ಪ್ರಶ್ನೆಗೂ ಅವರು ಉತ್ತರಿಸಿದರು. ಜೈಲಿಗೆ ಹೋಗಬೇಕೆಂಬ ತೀರ್ಪೇ ಬಂದರೆ, ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದ್ದೆ, ಅದರ ಅರ್ಥ ಜೈಲಿಗೆ ಹೋಗಲು ಬಯಸುತ್ತೇನೆ ಎಂದಲ್ಲ. ಸುಪ್ರೀಂಕೋರ್ಟು ಉಳಿದರೆ ಮಾತ್ರ ಗಣರಾಜ್ಯ ಉಳಿದೀತು ಎಂದು ಅವರು ತಮ್ಮ ಹೇಳಿಕೆಯಲ್ಲಿ ಹೇಳಿದ್ದನ್ನೂ ಇಲ್ಲಿ ಸ್ಮರಿಸಬಹುದು.

ಆಂದೋಲನದ ರೂಪುರೇಷೆಗಳ ಕುರಿತು ಯೋಗೇಂದ್ರ ಯಾದವ್‌ ಅವರು ವಿವರಗಳನ್ನು ನೀಡಿಲ್ಲ. ಆ ಕುರಿತು ನಾನುಗೌರಿ.ಕಾಂ ಅವರನ್ನು ಮಾತನಾಡಿಸಿ ಓದುಗರಿಗೆ ತಿಳಿಸಲಿದೆ.


ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...