Homeಕರ್ನಾಟಕನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

- Advertisement -
- Advertisement -

ನಾಳೆಯಿಂದ ರಾಜ್ಯದಲ್ಲಿ ಅನ್ಲಾಕ್-4.0 ಜಾರಿಗೆ ಬರಲಿದ್ದು, ಕಳೆದೈದು ತಿಂಗಳುಗಳಿಂದ ಬಂದ್ ಆಗಿದ್ದ ಪಬ್, ಬಾರ್, ಕ್ಲಬ್ ಮತ್ತು ರೆಸ್ಟೋರೆಂಟ್‌ಗಳು ಪುನಾರಾಂಭವಾಗಲಿವೆ.

ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದ್ದರೂ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಲ್ಲಿಯೇ ಕುಳಿತು ಮದ್ಯಸೇವನೆಗೆ ನಿಷೇಧ ಹೇರಲಾಗಿತ್ತು. ನಾಳೆಯಿಂದ ಆ ನಿರ್ಬಂಧ ಸಡಿಲಿಸಲಾಗಿದೆ. ಆದರೆ ಸರ್ಕಾರ ಇವುಗಳಿಗೂ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಕೊವೀಡ್ ತಡೆ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ.

ಮಾರ್ಗಸೂಚಿಗಳು

  • ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ
  • ಶೇಕಡ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
  • ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ರೂಂ, ಕ್ಯಾಬಿನ್ ಗಳ ಬಾಗಿಲ ಬಾಗಿಲ ಬಳಿ ಮದ್ಯ ಅಥವಾ ಆಹಾರ ಇಡಬೇಕು..
  • ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಕೆ.

ಮತ್ತೆ ಶುರುವಾಯ್ತು ಮಾರ್ಕೆಟ್

ಇನ್ನು ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಾಳೆಯಿಂದ ವ್ಯಾಪಾರಕ್ಕೆ ಮುಕ್ತವಾಗಲಿದೆ. ಇಷ್ಟು ದಿನ ಸೀಲ್‌ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳು ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಜನಸಂದಣೆ ನಿಯಂತ್ರಿಸಲು ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಮಳಿಗೆಗಳ ಮುಂಭಾಗ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಾಲಿಕೆ ನಿಯಮಗಳನ್ನು ಪಾಲಿಸದವರಿಗೆ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಮಾರುಕಟ್ಟೆ ಆವರಣ ಬಿಟ್ಟು ಹೊರ ಬಂದು ಅನಧಿಕೃತ ವ್ಯಾಪಾರ ಮಾಡುವವರಿಗೆ, ಮಾಸ್ಕ್ ಧರಿಸದೇ ಇರುವವರಿಗೆ ದಂಡ ಬೀಳಲಿದೆ. ಮಾರುಕಟ್ಟೆಯಲ್ಲಿ ಸ್ವಚ್ಛತೆ ಬಗ್ಗೆ ಹದ್ದಿನ ಕಣ್ಣಿಡಲು ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆಯಲ್ಲಿ ಒಂದು ಪಾಳಿಗೆ 15 ಮಂದಿಯಂತೆ ಸುಮಾರು 60 ಮಾರ್ಷಲ್‌ಗಳನ್ನು ನೇಮಿಸಲಾಗಿದೆ.

ಇನ್ನು ಸೆಪ್ಟೆಂಬರ್ 7 ರಿಂದ ನಮ್ಮ ಮೆಟ್ರೋ ಪುನರಾರಂಭ ಮಾಡಲಿದೆ. ಬಿಎಂಆರ್‌ಸಿಎಲ್‌ನಿಂದ ಸ್ವಚ್ಛತಾಕಾರ್ಯ ಭರದಿಂದ ಸಾಗಿದೆ. ಪ್ರಯಾಣಿಕರ ಸುರಕ್ಷತಾ ದೃಷ್ಠಿಯಿಂದ ಬಿಎಂಆರ್‌ಸಿಎಲ್ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ, ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ ಜೊತೆಗೆ ಟಿಕೆಟ್ ನೀಡದೇ ಸ್ಮಾರ್ಟ್ ಕಾರ್ಡ್ ಇದ್ದವರಷ್ಟೇ ಪ್ರಯಾಣಿಸಬಹುದೆಂಬ ನಿಯಮ ಹೇರಲಾಗಿದೆ.

ಪ್ರತಿ ರೈಲಿನಲ್ಲಿ ಹಿಂದೆ ಗರಿಷ್ಟ 1,800 ರಿಂದ 2 ಸಾವಿರ ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

ಮೆಟ್ರೋ ನಿಲ್ದಾಣ ಪ್ರವೇಶಿಸಲು ಮಾಸ್ಕ್ ಧರಿಸಿರುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಪಾಲನೆ ಮಾಡಲೇಬೇಕು.

ಅನ್ಲಾಕ್ 4.0 ಜನರ ಆರ್ಥಿಕ ಜೀವನವನ್ನು ಗಮನದಲ್ಲಿಟ್ಟುಕೊಂಡು ಹಲವು ವ್ಯಾಪಾರ –ವಹಿವಾಟಿಗೆ ಅವಕಾಶ ನೀಡಿದೆ. ಆದರೇ ಜನ ಎಷ್ಟರ ಮಟ್ಟಿಗೆ ಕೋವಿಡ್ ತಡೆ ನಿಯಮಗಳನ್ನು ಪಾಲಿಸುತ್ತಾರೆ ಎನ್ನುವುದರ ಮೇಲೆ ಕೊರೋನಾ ಸೋಂಕು ನಿಯಂತ್ರಣ ಅವಲಂಭಿಸಿದೆ.


ಇದನ್ನೂ ಓದಿ:ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...