Homeಅಂತರಾಷ್ಟ್ರೀಯಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

- Advertisement -
- Advertisement -

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯ (ಎಲ್‌ಎಸಿ) ಬಳಿಯಿರುವ ಪಾಂಗೊಂಗ್ ತ್ಸೋದಲ್ಲಿ ಇತ್ತೀಚೆಗೆ ಉಂಟಾಗಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಆರೋಪಿಸಿರುವ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ, ಕೂಡಲೇ ಭಾರತ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿ ಎಂದು ಒತ್ತಾಯಿಸಿದೆ.

“ಭಾರತೀಯ ಸೈನಿಕರು ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯನ್ನು ಉಲ್ಲಂಘಿಸಿದ್ದಾರೆ, ಮತ್ತು ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಮತ್ತು ರೆಕಿನ್ ಪಾಸ್‌ ಅನ್ನು ದಾಟಿದ್ದಾರೆ” ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್ (ಡಬ್ಲ್ಯುಟಿಸಿ) ಆರೋಪಿಸಿದೆ. ಜೊತೆಗೆ ಅಗತ್ಯ ಪ್ರತಿರೋಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಪಿಎಲ್‌ಎ ಎಚ್ಚರಿಸಿದೆ.

ಅಧಿಕೃತ ಸುದ್ದಿ ಸಂಸ್ಥೆ, ಕ್ಸಿನ್ಹುವಾ ಡಬ್ಲ್ಯುಟಿಸಿ ವಕ್ತಾರ ಹಿರಿಯ ಕರ್ನಲ್ ಜಾಂಗ್ ಶೂಯಿಲಿಯ ಹೇಳಿಕೆಯನ್ನು ಉಲ್ಲೇಖಿಸಿ “ಆಗಸ್ಟ್ 31 ರಂದು, ಭಾರತೀಯ ಸೈನ್ಯವು ಎರಡೂ ದೇಶಗಳ ನಡುವೆ ಹಿಂದೆ ನಡೆದಿದ್ದ ಬಹು-ಹಂತದ ಮಾತುಕತೆಯಲ್ಲಿ ನಿರ್ಧರಿಸಿದ್ದ ಒಮ್ಮತವನ್ನು ಮುರಿದು ಕಾನೂನುಬಾಹಿರವಾಗಿ ಪಾಂಗೊಂಗ್‌ನ ದಕ್ಷಿಣ ದಂಡೆಯ ಬಳಿ ಮತ್ತೆ ಗಡಿ ದಾಟಿದೆ. ಇದು ಪ್ರಚೋದನಾಕಾರಿ ಮತ್ತು ಗಡಿಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ” ಎಂದು ಹೇಳಿದೆ.

“ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ತೀವ್ರವಾಗಿ ಉಲ್ಲಂಘಿಸುವ ಭಾರತದ ಈ ನಡೆಯು, ಗಡಿಯಲ್ಲಿನ ಶಾಂತಿಯನ್ನು ಹಾಳುಮಾಡುತ್ತದೆ. ಇದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ” ಎಂದು ಜಾಂಗ್ ಹೇಳಿರುವುದಾಗಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

“ಭಾರತವು ತನ್ನ ಸೈನಿಕರನ್ನು ನಿಯಂತ್ರಿಸಬೇಕು ಮತ್ತು ಈ ಪ್ರದೇಶದಿಂದ ಹಿಂದೆ ಸರಿಯಬೇಕು. ಜೊತೆಗೆ ತನ್ನ ಬದ್ಧತೆಯನ್ನು ಪಾಲಿಸುವುದರೊಂದಿಗೆ, ಪರಿಸ್ಥಿತಿಯ ಬಿಗಡಾಯಿಸುವಿಕೆಯನ್ನು ತಪ್ಪಿಸಬೇಕು ಎಂದು ನಾವು ವಿನಂತಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾದ ಗಡಿ ಪಡೆಗಳು ಯಾವಾಗಲೂ ಎಲ್‌ಎಸಿಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ನಮ್ಮ ಪಡೆ ಎಂದಿಗೂ ಗಡಿ ದಾಟುವುದಿಲ್ಲ. ವಾಸ್ತವ ಸಮಸ್ಯೆಗಳ ಬಗ್ಗೆ ಎರಡು ಕಡೆ ಗಡಿ ಪಡೆಗಳು ನಿಕಟ ಸಂವಹನ ನಡೆಸುತ್ತಿವೆ ”ಎಂದು ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಹೇಳಿದ್ದಾರೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯವು ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಲ್ಲಿ ತೊಡಗಿದೆ ಎಂದು ವರದಿಯಾಗಿದೆ.

ಪ್ಯಾಗೋಂಗ್‌-ತ್ಶೋ ಸರೋವರದ ಉತ್ತರ ತೀರದಲ್ಲಿ ಚೀನಾ ಸೈನ್ಯ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನ್ಯವು ವಿಫಲಗೊಳಿಸಿದೆ ಮತ್ತು ಚೀನಾ ಸೈನ್ಯದ ಪ್ರಯತ್ನವನ್ನು ತಡೆಯಲು ಭಾರತವು ತಮ್ಮ ಸ್ಥಾನವನ್ನು ಬಲಪಡಿಸಿದೆ ಎಂದು ಭಾರತ ಸರ್ಕಾರ ಹೇಳಿದೆ.

ಮಾತುಕತೆಗಳ ಮೂಲಕ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿರುವ ಅದೇ ಸಂದರ್ಭದಲ್ಲಿ ಭಾರತೀಯ ಮಿಲಿಟರಿ ತನ್ನ ಭೂಪ್ರದೇಶವನ್ನು ರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಸಮಸ್ಯೆಯನ್ನು ಬಗೆರಿಸಲು ಗಡಿಯಲ್ಲಿರುವ ಸುಶುಲ್‌ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಗಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಗಡಿ ಪಡೆಗಳು ಘರ್ಷಣೆ ನಡೆಸಿದ ನಂತರ ಎರಡೂ ದೇಶಗಳ ನಡುವೆ ಹಲವಾರು ಸಭೆಗಳು ನಡೆದಿವೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...