Homeಅಂತರಾಷ್ಟ್ರೀಯಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

- Advertisement -
- Advertisement -

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯ (ಎಲ್‌ಎಸಿ) ಬಳಿಯಿರುವ ಪಾಂಗೊಂಗ್ ತ್ಸೋದಲ್ಲಿ ಇತ್ತೀಚೆಗೆ ಉಂಟಾಗಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಆರೋಪಿಸಿರುವ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ, ಕೂಡಲೇ ಭಾರತ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿ ಎಂದು ಒತ್ತಾಯಿಸಿದೆ.

“ಭಾರತೀಯ ಸೈನಿಕರು ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯನ್ನು ಉಲ್ಲಂಘಿಸಿದ್ದಾರೆ, ಮತ್ತು ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಮತ್ತು ರೆಕಿನ್ ಪಾಸ್‌ ಅನ್ನು ದಾಟಿದ್ದಾರೆ” ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್ (ಡಬ್ಲ್ಯುಟಿಸಿ) ಆರೋಪಿಸಿದೆ. ಜೊತೆಗೆ ಅಗತ್ಯ ಪ್ರತಿರೋಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಪಿಎಲ್‌ಎ ಎಚ್ಚರಿಸಿದೆ.

ಅಧಿಕೃತ ಸುದ್ದಿ ಸಂಸ್ಥೆ, ಕ್ಸಿನ್ಹುವಾ ಡಬ್ಲ್ಯುಟಿಸಿ ವಕ್ತಾರ ಹಿರಿಯ ಕರ್ನಲ್ ಜಾಂಗ್ ಶೂಯಿಲಿಯ ಹೇಳಿಕೆಯನ್ನು ಉಲ್ಲೇಖಿಸಿ “ಆಗಸ್ಟ್ 31 ರಂದು, ಭಾರತೀಯ ಸೈನ್ಯವು ಎರಡೂ ದೇಶಗಳ ನಡುವೆ ಹಿಂದೆ ನಡೆದಿದ್ದ ಬಹು-ಹಂತದ ಮಾತುಕತೆಯಲ್ಲಿ ನಿರ್ಧರಿಸಿದ್ದ ಒಮ್ಮತವನ್ನು ಮುರಿದು ಕಾನೂನುಬಾಹಿರವಾಗಿ ಪಾಂಗೊಂಗ್‌ನ ದಕ್ಷಿಣ ದಂಡೆಯ ಬಳಿ ಮತ್ತೆ ಗಡಿ ದಾಟಿದೆ. ಇದು ಪ್ರಚೋದನಾಕಾರಿ ಮತ್ತು ಗಡಿಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ” ಎಂದು ಹೇಳಿದೆ.

“ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ತೀವ್ರವಾಗಿ ಉಲ್ಲಂಘಿಸುವ ಭಾರತದ ಈ ನಡೆಯು, ಗಡಿಯಲ್ಲಿನ ಶಾಂತಿಯನ್ನು ಹಾಳುಮಾಡುತ್ತದೆ. ಇದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ” ಎಂದು ಜಾಂಗ್ ಹೇಳಿರುವುದಾಗಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

“ಭಾರತವು ತನ್ನ ಸೈನಿಕರನ್ನು ನಿಯಂತ್ರಿಸಬೇಕು ಮತ್ತು ಈ ಪ್ರದೇಶದಿಂದ ಹಿಂದೆ ಸರಿಯಬೇಕು. ಜೊತೆಗೆ ತನ್ನ ಬದ್ಧತೆಯನ್ನು ಪಾಲಿಸುವುದರೊಂದಿಗೆ, ಪರಿಸ್ಥಿತಿಯ ಬಿಗಡಾಯಿಸುವಿಕೆಯನ್ನು ತಪ್ಪಿಸಬೇಕು ಎಂದು ನಾವು ವಿನಂತಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾದ ಗಡಿ ಪಡೆಗಳು ಯಾವಾಗಲೂ ಎಲ್‌ಎಸಿಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ನಮ್ಮ ಪಡೆ ಎಂದಿಗೂ ಗಡಿ ದಾಟುವುದಿಲ್ಲ. ವಾಸ್ತವ ಸಮಸ್ಯೆಗಳ ಬಗ್ಗೆ ಎರಡು ಕಡೆ ಗಡಿ ಪಡೆಗಳು ನಿಕಟ ಸಂವಹನ ನಡೆಸುತ್ತಿವೆ ”ಎಂದು ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಹೇಳಿದ್ದಾರೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯವು ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಲ್ಲಿ ತೊಡಗಿದೆ ಎಂದು ವರದಿಯಾಗಿದೆ.

ಪ್ಯಾಗೋಂಗ್‌-ತ್ಶೋ ಸರೋವರದ ಉತ್ತರ ತೀರದಲ್ಲಿ ಚೀನಾ ಸೈನ್ಯ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನ್ಯವು ವಿಫಲಗೊಳಿಸಿದೆ ಮತ್ತು ಚೀನಾ ಸೈನ್ಯದ ಪ್ರಯತ್ನವನ್ನು ತಡೆಯಲು ಭಾರತವು ತಮ್ಮ ಸ್ಥಾನವನ್ನು ಬಲಪಡಿಸಿದೆ ಎಂದು ಭಾರತ ಸರ್ಕಾರ ಹೇಳಿದೆ.

ಮಾತುಕತೆಗಳ ಮೂಲಕ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿರುವ ಅದೇ ಸಂದರ್ಭದಲ್ಲಿ ಭಾರತೀಯ ಮಿಲಿಟರಿ ತನ್ನ ಭೂಪ್ರದೇಶವನ್ನು ರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಸಮಸ್ಯೆಯನ್ನು ಬಗೆರಿಸಲು ಗಡಿಯಲ್ಲಿರುವ ಸುಶುಲ್‌ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಗಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಗಡಿ ಪಡೆಗಳು ಘರ್ಷಣೆ ನಡೆಸಿದ ನಂತರ ಎರಡೂ ದೇಶಗಳ ನಡುವೆ ಹಲವಾರು ಸಭೆಗಳು ನಡೆದಿವೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...