Homeಎಕಾನಮಿಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ ಎಂದು ಕೇರಳ ಹೇಳಿದೆ. “ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

“ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರದ ಉದ್ದೇಶಗಳನ್ನು ನಾವು ಈಗ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇವೆ. ಕೇಂದ್ರದ ‘ಲಾಕ್, ಸ್ಟಾಕ್ ಮತ್ತು ಬ್ಯಾರೆಲ್’ ನೀತಿಯನ್ನು ತಿರಸ್ಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಆತ್ಮನಿರ್ಭರ್ ಅನ್ನು ಯಾವುದೇ ರಾಜ್ಯವು ಒಪ್ಪಿಕೊಂಡಿಲ್ಲ. ಸಾಕು, ರಾಜ್ಯಗಳು ತನ್ನ ಹಕ್ಕುಗಳಿಗಾಗಿ ಇನ್ನು ರಾಜಿಯಾಗಬಾರದು. ಜಿಎಸ್‌ಟಿ ಪರಿಹಾರ ನಮ್ಮ ಸಾಂವಿಧಾನಿಕ ಹಕ್ಕು” ಐಸಾಕ್ ಟ್ವೀಟ್ ಮಾಡಿದ್ದಾರೆ.

41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದು ದೇವರ ಕಾರ್ಯ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ಅಸಹಾಯಕತೆ ಪ್ರದರ್ಶಿಸಿದ್ದರು.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಇನ್ನು ರಾಜ್ಯಗಳು ದೊಡ್ಡ ಮೊತ್ತದ ಸಾಲ ಪಡೆಯಲು ಮತ್ತು ಅದರ ಬಡ್ಡಿ ಕಟ್ಟಲು ಸಾಧ್ಯವಿಲ್ಲ ಎಂದು ಘೋಷಿಸಿವೆ. ಹಾಗಾಗಿ ಆರ್‌ಬಿಐ ಮತ್ತೆ ನೇರವಾಗಿ ಕೇಂದ್ರಕ್ಕೆ ಸಾಲ ಕೊಡುವ ನೀರಿಕ್ಷೆಯಿದೆ ಎನ್ನಲಾಗುತ್ತಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು, “ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ” ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರೂ “ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ” ಎಂದು ಸರ್ಕಾರ ವಾದಿಸಿದೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...