Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...