Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...