Homeಮುಖಪುಟಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಎಜಿಆರ್ ಬಾಕಿ ಪಾವತಿಗೆ 10 ವರ್ಷಗಳ ಗಡುವು: ಹಿಂದೆ ಗುಡುಗಿದ್ದ ಸುಪ್ರೀಂ ತಣ್ಣಗಾಗಿದ್ದೇಕೆ?

ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು.

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 1.6 ಲಕ್ಷ ಕೋಟಿ ಎಜಿಆರ್ ಹಣ ವಿಚಾರವಾಗಿ ಅವುಗಳ ವಿರುದ್ಧ ಕಿಡಿಕಾರುತ್ತಿದ್ದ ಸುಪ್ರೀಂ ಕೋರ್ಟ್ ಇಂದು ಏಕಾಏಕಿ ಅವುಗಳಿಗೆ ಬಾಕಿ ಪಾವತಿಸಲು 10 ವರ್ಷಗಳ ಕಾಲಾವಕಾಶ ನೀಡಿದೆ.

ವೋಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್‌ ಸೇರಿದಂತೆ ಹಲವು ಕಂಪನಿಗಳಿಗೆ ಹಣ ಪಾವತಿಗೆ ಮಾರ್ಚ್ 2031 ರವರೆಗೂ ಕಾಲಾವಕಾಶ ನೀಡಿದೆ. ಆದರೆ 2021ರ ಮಾರ್ಚ್ 31ರ ಒಳಗೆ ಎಜಿಆರ್ ಬಾಕಿಯ ಶೇಕಡಾ 10ರಷ್ಟನ್ನು ಪಾವತಿಸಲು ಕೋರ್ಟ್ ತಿಳಿಸಿದೆ.

ನಾಳೆ ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಬಾಕಿ ಪಾವತಿಸಲು ಕನಿಷ್ಟ 7 -10 ವರ್ಷಗಳ ಗಡುವನ್ನು ಟಾಟಾ ಟೆಲಿಕಾಂ ಸಂಸ್ಥೆ ಕೇಳಿದರೇ, ವೋಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ 15 ವರ್ಷಗಳ ಕಾಲಾವಕಾಶವನ್ನು ಕೇಳಿದ್ದವು. ಆದರೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ 20 ವರ್ಷಗಳ ಕಾಲಾವಕಾಶ ನೀಡುವಂತೆ ಸುಪ್ರೀಂಗೆ ಮನವಿ ಮಾಡಿತ್ತು.

ಹಣ ಪಾವತಿಯ ಜವಾಬ್ದಾರಿಯನ್ನು ಟೆಲಿಕಾಂ ಕಂಪನಿ ಅಧ್ಯಕ್ಷರು ವಹಿಸಬೇಕಾಗುತ್ತದೆ. ಕೇವಲ ಬಾಕಿ ಇರುವ ಹಣವಷ್ಟೇ ಅಲ್ಲದೇ, ಡಿಫಾಲ್ಟ್ ಬಡ್ಡಿ, ದಂಡ  ಮತ್ತು ನ್ಯಾಯಾಂಗ ನಿಂದನೆಯ ಹಣವನ್ನು ತುಂಬಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಏನಿದು ಎಜಿಆರ್ ಹಣ ಬಾಕಿ ತಕರಾರು?

1994 ರಾಷ್ಟ್ರೀಯ ಟೆಲಿಕಾಂ ನೀತಿಯ ಅಡಿಯಲ್ಲಿ ದೂರ ಸಂಪರ್ಕ ವಲಯವನ್ನು ಉದಾರೀಕರಣಗೊಳಿಸಲಾಯಿತು. ಈ ಬೆಳವಣಿಗೆಯ ನಂತರ ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರಗಳನ್ನು ಸ್ಥಿರ ಪರವಾನಗಿ ವಾರ್ಷಿಕ ಶುಲ್ಕಕ್ಕೆ ಮಾರಾಟ ಮಾಡುವ ಪರಿಪಾಠ ಆರಂಭವಾಯಿತು.

ಸ್ಥಿರ ಪರವಾನಗಿ ಶುಲ್ಕದಿಂದ ಬಿಡುಗಡೆ ಹೊಂದಲು ಕೇಂದ್ರ ಸರ್ಕಾರ 1999ರಲ್ಲಿ ಆದಾಯ ಹಂಚಿಕೆ ಶುಲ್ಕ ವಿಧಾನಕ್ಕೆ ಪರವಾನಗಿಯನ್ನು ವರ್ಗಾಯಿಸಿಕೊಳ್ಳುವ ಅವಕಾಶವನ್ನು ಆಯಾ ಕಂಪೆನಿಗಳಿಗೆ ನೀಡಿತು.

ಈ ಕಾಲಘಟ್ಟದಲ್ಲಿ ಬದಲಾದ ಟೆಲಿಕಾಂ ನೀತಿಯ ಅನ್ವಯ ದೂರ ಸಂಪರ್ಕ ಆದಾಯದ ಜೊತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ವಾರ್ಷಿಕ ಪರವಾನಗಿ ಶುಲ್ಕ (ಎಜಿಆರ್) ಎಂದು ಕರೆಯಲಾಯಿತು. ತರಂಗಾತರ ಹಂಚಿಕೆ ಶುಲ್ಕದ ಜೊತೆಗೆ ಈ ಶುಲ್ಕವನ್ನು ವರ್ಷಕ್ಕೊಮ್ಮೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಟೆಲಿಕಾಂ ಕಂಪೆನಿಗಳು ಪಾವತಿ ಮಾಡಬೇಕು ಎಂಬುದು ನಿಯಮ.


ಇದನ್ನೂ ಓದಿ: ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ


ಈ ಹಿಂದೆ ಟೆಲಿಕಾಂ ಕಂಪನಿಗಳು ಹಣ ಕಟ್ಟದಿದ್ದಾಗ ಸುಪ್ರೀಂ ಅವುಗಳ ವಿರುದ್ಧ ಗರಂ ಆಗಿತ್ತು. ಆಗ ಕೇಂದ್ರ ಸರ್ಕಾರ ಅವುಗಳ ಪರ ನಿಂತಿತ್ತು. ಮೊದಲು ಬಾಕಿ ಪಾವತಿಗೆ 20 ವರ್ಷ ಸಮಯ ಬೇಕೆಂದು ಕೇಳಿದ್ದ ಕೇಂದ್ರ ನಂತರ ಟೆಲಿಕಾಂ ಸಂಸ್ಥೆಗಳು ಕಟ್ಟಬೇಕಿರುವ ಹಣವನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಳ್ಳಲು ಮುಂದಾಗಿತ್ತು. ಆದರೆ ಆ ಎರಡು ವಿಚಾರಕ್ಕೆ ಸುಪ್ರೀಂ ತಡೆ ನೀಡಿತ್ತು.

ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಬಾಕಿ ಹಣ ತುಂಬಿ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿತ್ತು. ಇದಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿ, ಕೇಂದ್ರಕ್ಕೆ ಟೆಲಿಕಾಂ ಕಂಪನಿಗಳಿಂದ ವಸೂಲಿ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿತ್ತು.

ತನ್ನ ಹಲವು ಆದೇಶಗಳ ಹೊರತಾಗಿಯೂ ಟೆಲಿಕಾಂ ಕಂಪನಿಗಳು ಹಣ ಪಾವತಿ ಮಾಡದಿದ್ದಾಗ ಸುಪ್ರೀಂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ ಇಂದು ಮಾತ್ರ ಸರಾಗವಾಗಿ 10 ವರ್ಷ ಸಮಯ ನೀಡುವ ಮೂಲಕ ಸುಪ್ರೀಂ ತನ್ನ ಹಿಂದಿನ ಆದೇಶಗಳನ್ನು ಮರೆತಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ವೋಡಾಫೋನ್ -ಐಡಿಯಾ, ಭಾರ್ತಿ ಏರ್‌ಟೆಲ್, ಟಾಟಾ ಡೊಕೊಮೆ, ಜಿಯೋ ಸೇರಿದಂತೆ ಹಲವು ಕಂಪನಿಗಳು ಸುಮಾರು 1.6 ಲಕ್ಷ ಕೋಟಿ ಎಜಿಆರ್ ಹಣ ಬಾಕಿ ಉಳಿಸಿಕೊಂಡಿವೆ. ದಿವಾಳಿಯಾಗಿರುವ ಅನಿಲ್ ಅಂಬಾನಿ ನೇತೃತ್ವದ ರಿಲೆಯನ್ಸ್ ಕಮ್ಯುನಿಕೇ‍ಷನ್ ಈಗ ಆತನ ಸಹೋದರ ಮುಖೇಶ್ ಅಂಬಾನಿ ಪಾಲಾಗಿದ್ದು ಅದರ ಎಜಿಆರ್ ಯಾರು ಕಟ್ಟಬೇಕೆಂಬುದರ ಕುರಿತು ಸಹ ಚರ್ಚೆ ನಡೆಯುತ್ತಿವೆ.


ಇದನ್ನೂ ಓದಿ: ಜಿಯೋ ಎಂಬ ಟೆಲಿಕಾಂ ಕಂಪನಿ ಉಳಿದವುಗಳನ್ನು ನುಂಗಿ ಏಕಸ್ವಾಮ್ಯ ಸಾಧಿಸಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...