Homeಮುಖಪುಟಸಿಎಎ ಪ್ರತಿಭಟನೆ- ಹಿಂಸಾಚಾರ: ಜೆಎನ್‌ಯು ವಿದ್ಯಾರ್ಥಿನಿಗೆ ಜಾಮೀನು

ಸಿಎಎ ಪ್ರತಿಭಟನೆ- ಹಿಂಸಾಚಾರ: ಜೆಎನ್‌ಯು ವಿದ್ಯಾರ್ಥಿನಿಗೆ ಜಾಮೀನು

ಈ ಹಿಂದೆಯೂ ದೇವಾಂಗನಾ ಕಾಳಿತಾ ವಿರುದ್ಧ ಧರಿಯಾಗಂಜ್ ಪ್ರತಿಭಟನೆಯ ಹಿಂಸಾಚಾರದಲ್ಲಿ ಅವರ ವಿರುದ್ಧ ಧೃಡವಾದ ಸಾಕ್ಷಿಗಳಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ತಿಳಿಸಿದ್ದರು

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯ ಹಿಂಸಾಚಾರ ಪ್ರಕರಣದಲ್ಲಿ ಮೇ 23ರಂದು ಬಂಧಿಸಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆ ಮತ್ತು ಜೆಎನ್‌ಯು ವಿದ್ಯಾರ್ಥಿ ದೇವಾಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ.

ಫೆಬ್ರವರಿಯಲ್ಲಿ ದೇಶದಲ್ಲಿ ಭುಗಿಲೆದ್ದಿದ್ದ ಪೌರತ್ವ ನಿಷೇಧ ಕಾಯ್ದೆ ಹೋರಾಟ, ಪ್ರತಿಭಟನೆಗಳನ್ನು ಹತ್ತಿಕ್ಕಲು ಸರ್ಕಾರ ಸಾವಿರಾರು ಜನರನ್ನು ಬಂಧಿಸಿತ್ತು. ಅದರಲ್ಲಿ ದೇವಾಂಗನಾ ಕಾಳಿತಾ ಸಹ ಒಬ್ಬರಾಗಿದ್ದರು.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ 25,000 ರೂಪಾಯಿಯ ವೈಯಕ್ತಿಕ ಬಾಂಡ್ ಮೇಲೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ.

No evidence against pinjra tod activist Devangana Kalichha: Bail granted

ದೇವಾಂಗನಾ ಕಾಳಿತಾ ಮೇಲೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ  ಪತ್ರತಿಭಟನೆ ಕುರಿತು ಈಶಾನ್ಯ ದೆಹಲಿ ಗಲಭೆಗಳು ಮತ್ತು ದರಿಯಗಂಜ್ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ.  ಸದ್ಯ ಧರಿಯಾಗಂಜ್ ಮತ್ತು ದೆಹಲಿ ಹಿಂಸಾಚಾರ ಎರಡು ಪ್ರಕರಣಗಳಲ್ಲಿ ಜಾಮೀನು ದೊರಕಿದೆ.

ಈ ಹಿಂದೆಯೂ ದೇವಾಂಗನಾ ಕಾಳಿತಾ ವಿರುದ್ಧ ಧರಿಯಾಗಂಜ್ ಪ್ರತಿಭಟನೆಯ ಹಿಂಸಾಚಾರದಲ್ಲಿ ಅವರ ವಿರುದ್ಧ ಧೃಡವಾದ ಸಾಕ್ಷಿಗಳಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ತಿಳಿಸಿದ್ದರು.

ಇದನ್ನೂ ಓದಿ: JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ದೆಹಲಿ ಹಿಂಸಾಚಾರ ಪ್ರಕರಣದಲ್ಲಿ ದೇವಾಂಗನಾ ಕಾಳಿತಾ ಮತ್ತು ಸಂಘಟನೆಯ ಇನ್ನೊಬ್ಬ ಕಾರ್ಯಕರ್ತೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಗಲಭೆ, ಕಾನೂನು ಬಾಹಿರ ಕೆಲಸ ಮತ್ತು ಕೊಲೆ ಯತ್ನ ಸೇರಿ ಹಲವು ಕೇಸ್‌ಗಳನ್ನು ಇವರುಗಳ ಮೇಲೆ ಹಾಕಲಾಗಿತ್ತು.

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 24ರಂದು ನಡೆದಿದ್ದ ಹಿಂಸಾಚಾರದಲ್ಲಿ 53ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದರು. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇಂದಿಗೂ ಈ ಪ್ರಕರಣದಲ್ಲಿ ಹಲವು ಜನರನ್ನು, ಜೆಎನ್‌ಯು ವಿದ್ಯಾರ್ಥಿಗಳನ್ನು ಬಂಧಿಸಲಾಗುತ್ತಿದೆ.


ಇದನ್ನೂ ಓದಿ: ದೆಹಲಿ ಗಲಭೆ: ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್‌ ಮತ್ತೆ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...