Homeಮುಖಪುಟತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದ ಎನ್ನಲಾಗಿದೆ.

- Advertisement -
- Advertisement -

ಕುಖ್ಯಾತ ದರೋಡೆಕೋರನೊಬ್ಬ ಸೋಮವಾರ ಚೆನ್ನೈನ ವಂಡಲೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕಕ್ಕೆ ಸೇರಲು ಪ್ರಯತ್ನಿಸಿದ್ದು, ಆದರೆ ಪೊಲೀಸರನ್ನು ನೋಡಿದ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ.

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದರು ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಸೂರ್ಯ ಪಾಲ್ಗೊಳ್ಳಲಿದ್ದಾನೆ ಎಂದು ಚೆಂಗಲ್ಪಟ್ಟು ಜಿಲ್ಲಾ ಪೊಲೀಸರಿಗೆ ಸುಳಿವು ಸಿಕ್ಕಿದ ನಂತರ ಆ ಸ್ಥಳಕ್ಕೆ ತೆರಳಿದರು. ಆದರೆ, ಪೋಲೀಸರು ಬಂದುದ್ದನ್ನು ಗಮನಿಸಿದ ಆತ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ.

ಈ ಕುರಿತು ಟ್ವೀಟ್ ಮಾಡಿರುವ ಪತ್ರಕರ್ತ ಶರವಣನ್, “ವಂಡಲೂರು ಬಳಿ, ಭಾಜಾಪ ನಾಯಕ ಎಲ್.ಮುರುಗನ್ ಅವರ ಮುಂದಾಳತ್ವದಲ್ಲಿ, ಬಿಜೆಪಿ ಸೇರುವುದಕ್ಕೆ ಬಂದಿದ್ದ ಪ್ರಬಲ ರೌಡಿ ನೆರ್ಕುಂಡ್ರಂ ಸೂರ್ಯ(7 ಕೊಲೆ ಸೇರಿದಂತೆ 52 ಪ್ರಕರಣಗಳು) ಪೋಲೀಸರನ್ನು ಕಂಡೊಡನೆ ಪರಾರಿಯಾಗಿದ್ದಾನೆ. ಇತ್ತೀಚೆಗೆ ದಕ್ಷಿಣ ಚೆನ್ನೈನ ಕುಖ್ಯಾತ ದಾದಾ ಕಲ್ವೆಟ್ಟು ರವಿ ಭಾಜಾಪದೊಂದಿಗೆ ಸೇರಿಕೊಂಡಿದ್ದಾನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಈ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ, ಚಾಕು ಇಟ್ಟುಕೊಂಡಿದ್ದ ಇತರೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಸೂರ್ಯನೊಂದಿಗೆ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ದಿ ಹಿಂದು ವರದಿ ಮಾಡಿದೆ.

ಆರು ಆರೋಪಿಗಳೊಂದಿಗೆ ಪಕ್ಷದ ಇಬ್ಬರು ಸದಸ್ಯರನ್ನು ಸಹ ಬಂಧಿಸಲಾಗಿರುವುದರಿಂದ, ಪೊಲೀಸ್ ಠಾಣೆಯ ಹೊರಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ತಮಿಳುನಾಡು ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಪತ್ರಿಕೆಗೆ ತಿಳಿಸಿದ್ದಾರೆ. “ಆ ಇಬ್ಬರು ಮಾತ್ರ ನಮ್ಮ ಪಕ್ಷದ ಸದಸ್ಯರು. ಆ ಆರು ಜನರ ಬಿಡುಗಡೆಯನ್ನು ನಾವು ಬಯಸಲಿಲ್ಲ” ಎಂದು ಅವರು ಹೇಳಿದರು.

ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರುತ್ತಿರುವುದರ ಬಗ್ಗೆ ರಾಘವನ್ ಅವರನ್ನು ಪ್ರಶ್ನಿಸಿದಾಗ, “ನೂರಾರು ಜನರು ಬಿಜೆಪಿಗೆ ಸೇರುತ್ತಿರುವುದರಿಂದ ಪ್ರತಿಯೊಬ್ಬರ ವಿವರಗಳನ್ನು ಪರಿಶೀಲಿಸುವುದು ಕಷ್ಟ. ಸದಸ್ಯರ ಒಳಹರಿವು ಹೆಚ್ಚಾಗಿದ್ದಾಗ ಈ ರೀತಿಯ ಒಂದೆರೆಡು ಪ್ರಕರಣಗಳು ಜರುಗಿವೆ. ಈ ಬಗ್ಗೆ ನಾವು ಜಾಗರೂಕರಾಗಿರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಕೆ.ಅಣ್ಣಾಮಲೈ

“ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರಲು ಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಕಾಳಜಿ ವಹಿಸುತ್ತದೆಯೇ” ಎಂದು ತಮಿಳುನಾಡಿನ ಶಿವಗಂಗ ಸಂಸದ ಕಾರ್ತಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸೂರ್ಯ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಸ್ಫೋಟಕಗಳ ಬಳಕೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

2021ರಲ್ಲಿ ತಮಿಳುನಾಡಿನಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹಳಷ್ಟು ರೌಡಿ ಹಿನ್ನೆಲೆಯ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಬಿಜೆಪಿ ಸೇರಿದರೆ ತಮ್ಮ ಮೇಲಿನ ಪ್ರಕರಣಗಳನ್ನು ಕೈಬಿಡಲಾಗುತ್ತದೆ ಎಂಬ ಆಮಿಷ ಒಡ್ಡಲಾಗುತ್ತಿದೆ ಎಂಬ ವದಂತಿ ಸಹ ಚಾಲ್ತಿಯಲ್ಲಿದೆ ಎನ್ನಲಾಗಿದೆ.


ಇದನ್ನೂ ಓದಿ: ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...