Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಭಾರತದ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ 2021ರ ಮೊದಲ ತ್ರೈಮಾಸಿಕ ಏಪ್ರಿಲ್-ಜೂನ್ ಅವಧಿಯಲ್ಲಿ 23.9ರ ಋಣಾತ್ಮಕ ಕುಸಿತ ಕಾಣುವ ಮೂಲಕ ಮಹಾ ಆರ್ಥಿಕ ಕುಸಿತಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು ಅನುಭವಿಸುತ್ತಿದ್ದರೆ, ಭಾರತವು 2020 ರಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಸ್ಥಾನಮಾನವನ್ನು ಉಳಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಪಕ್ಷದ ಫೇಸ್‌ಬುಕ್‌ನಲ್ಲಿ ಆಗಸ್ಟ್ 23 ರಂದು ಪೋಸ್ಟ್ ಮಾಡಿದೆ. ಅದು ನಿಜವೇ?

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಪೋಸ್ಟ್‌ನಲ್ಲಿನ ಚಿತ್ರದಲ್ಲಿ ಮಾಹಿತಿ ಮೂಲ ಐಎಂಎಫ್ ಎಂದು ನಮೂದಿಸಿದೆ. ಅದರ ಆಧಾರದಲ್ಲಿ ಐಎಂಎಫ್‌ ಈ ಕುರಿತು ಹುಡುಕಿದಾಗ 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಿರುವ ವರ್ಲ್ಡ್ ಎಕಾನಾಮಿಕ್ ಔಟ್‌ಲುಕ್ ವರದಿ ಕಾಣುತ್ತದೆ. ಅದರಲ್ಲಿ ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ವಿಶ್ವದ ಹಲವು ಆರ್ಥಿಕತೆಗಳ ಬೆಳವಣಿಗೆ ದರವನ್ನು ಅಂದಾಜಿಸಲಾಗಿದೆ.

ಆದರೆ 2020ರ ಜೂನ್ ತಿಂಗಳಿನಲ್ಲಿ ಐಎಂಎಫ್ ಮತ್ತೊಂದು ವರದಿಯನ್ನು ಬಿಡುಗಡೆಗೊಳಿಸಿದೆ. ಆ ವರದಿಯಲ್ಲಿ 2020ರ ಭಾರತದ ಜಿಡಿಪಿ ಬೆಳವಣಿಗೆಯು -4.5 ಕ್ಕೆ ಕುಸಿದಿದ್ದು, ಚೀನಾ ಮಾತ್ರವೇ ಸಕರಾತ್ಮಕ (1.0) ಬೆಳವಣಿಗೆ ಹೊಂದಿದೆ ದೇಶವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿನ ಪ್ರತಿಪಾದನೆ ಹಿಂದಿನದೇ ಹೊರತು ಇತ್ತೀಚಿನದಲ್ಲ ಎಂದು ಹೇಳಬಹುದಾಗಿದೆ.

ಇನ್ನು ಬಿಜೆಪಿಯು ಆಗಸ್ಟ್ 23 ರಂದು ಈ ರೀತಿ ಭಾರತದ ಜಿಡಿಪಿ ಮಾತ್ರ ಸಕರಾತ್ಮಕವಾಗಿದೆ ಎಂದು ಪೋಸ್ಟ್ ಮಾಡಿದೆ. ಆದರೆ ಅದೇ ಆಗಸ್ಟ್ 31 ರಂದು ಅಂದರೆ ಒಂದು ವಾರದ ನಂತರ ಭಾರತದ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ 2021ರ ಮೊದಲ ತ್ರೈಮಾಸಿಕ ಏಪ್ರಿಲ್-ಜೂನ್ ಅವಧಿಯಲ್ಲಿ 23.9ರ ಋಣಾತ್ಮಕ ಕುಸಿತ ಕಾಣುವ ಮೂಲಕ ಮಹಾ ಆರ್ಥಿಕ ಕುಸಿತಕ್ಕೆ ಸಾಕ್ಷಿಯಾಗಿದೆ.

1996 ರಿಂದಲೂ ತ್ರೈಮಾಸಿಕ ಜಿಡಿಪಿ ಅಂಕಿಅಂಶ ಬಿಡುಗಡೆ ಮಾಡುತ್ತಿದ್ದರೂ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಜಿಡಿಪಿ ಕುಸಿತ ಕಂಡಿದೆ. ಈ ರೀತಿಯ ಕುಸಿತಕ್ಕೆ ಕೊರೊನಾ ಲಾಕ್‌ಡೌನ್‌ ಕಾರಣ ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಮೋದಿಯವರು ಕೈಗೊಂಡ ನೋಟು ಅಮಾನ್ಯೀಕರಣ, ಜಿಎಸ್‌ಟಿ ಸೇರಿದಂತೆ ಮುಂದಾಲೋಚನೆಯಿಲ್ಲದ ಕ್ರಮಗಳು ಹಾಗೂ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿರುವುದು ಇಂದಿನ ಮಹಾಕುಸಿತಕ್ಕೆ ಕಾರಣ ಎಂದು ದೂರಿದ್ದಾರೆ.

ಸಿಕ್ಕಿದ್ದೇಚಾನ್ಸ್ ಅಂತ ಎಲ್ಲವನ್ನೂ ಸೇರಿಸಿ ದೂಡಿದ್ದು!- – – – – – – – – – ಈವತ್ತು ಪತ್ರಿಕೆಗಳಲ್ಲಿ GDP ಕುಸಿತದ ವರದಿಯ “ಸ್ಪಿನ್”…

Posted by Rajaram Tallur on Monday, August 31, 2020

ಹಾಗಾಗಿ ಜಿಡಿಪಿ ಪಾತಾಳ ಸೇರುತ್ತಿದ್ದರೂ ಬಿಜೆಪಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ನಾವೇ ವಿಶ್ವಗುರು ಎಂದು ಹೇಳಿಕೊಳ್ಳುತ್ತಿರುವುದು ಸಂಪೂರ್ಣ ಸುಳ್ಳಾಗಿದೆ.


ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...