Homeಮುಖಪುಟಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಆರ್‌ಬಿಐ ಸೇರಿದಂತೆ ಇತರೆ ತಜ್ಞರು ಈ ಕುಸಿತವನ್ನು ಊಹಿಸಿ, ಎಚ್ಚರಿಸಿದ್ದರು. ಈ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಜೊತೆಗೆ ಆಶಾಭಾವನೆಯ ಭರವಸೆಯನ್ನೂ ಸಹ ಮೂಡಿಸುವುದಿಲ್ಲ ಎಂದು ಚಿದಂಬರಂ ಹೇಳಿದರು

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಕ್ಟ್ ಆಫ್ ಗಾಡ್ (ದೇವರ ಕಾರ್ಯ) ಹೇಳಿಕೆಗೆ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನವ ನಿರ್ಮಿತ ತಪ್ಪುಗಳಿಗೆ ದೇವರನ್ನು ದೂಷಿಸಬೇಡಿ ಎಂದಿದ್ದಾರೆ.

ಕೊರೊನಾ ವೈರಸ್ ಆರ್ಥಿಕತೆ ಮೇಲೆ ಬೀರಿರುವ ಪರಿಣಾಮದ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ’ಕೊರೊನಾ ಸಾಂಕ್ರಾಮಿಕವು ದೇವರ ಕಾರ್ಯ. ಹಾಗಾಗಿಯೇ ಜಿಎಸ್‌ಟಿ ಸಂಗ್ರಹದಲ್ಲಿ ಕುಸಿತವಾಗಿದೆ’ ಎಂದು ಹೇಳಿ ವಿವಾದಕ್ಕೊಳಗಾಗಿದ್ದಾರೆ.

ಕೊರೋನಾ ಸೋಂಕು ಸಾಂಕ್ರಾಮಿಕ ರೋಗವು ನೈಸರ್ಗಿಕ ವಿಪತ್ತು ನಿಜ, ಆದರೆ ನೀವು ನೈಸರ್ಗಿಕ ವಿಪತ್ತನ್ನು ಮಾನವ ನಿರ್ಮಿತ ವಿಪತ್ತಿನೊಂದಿಗೆ ಸಂಯೋಜಿಸುತ್ತಿದ್ದೀರಿ ಎಂದಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ಇನ್ನು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಮಣ್ಯನ್ ಅವರ ವಿ-ಆಕಾರದ ಚೇತರಿಕೆಯನ್ನು ಟೀಕಿಸಿದ್ದಾರೆ. ಮುಖ್ಯ ಆರ್ಥಿಕ ಸಲಹೆಗಾರರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವವರಿಲ್ಲ. ಅವರು ಪ್ರಧಾನಿಗಳನ್ನು ಭೇಟಿ ಮಾಡಿ ಸಂಭಾಷಣೆ ನಡೆಸಿ ತುಂಬಾ ದಿನಗಳಾಗಿವೆ ಎಂದಿದ್ದಾರೆ.

2019-20ರ ಅಂತ್ಯದ ವೇಳೆಗೆ ಒಟ್ಟು ದೇಶೀಯ ಉತ್ಪಾದನೆಯು ಶೇ.20 ರಷ್ಟು ಕುಸಿದಿತ್ತು. ಆದರೆ ಕೃಷಿ, ಅರಣ್ಯ ಮತ್ತು ಮೀನುಗಾರಿಕೆು ಕ್ಷೇತ್ರ ಮಾತ್ರ ಶೇ.3.4 ರಷ್ಟು ಏರಿಕೆ ಕಂಡಿತ್ತು. ಆರ್ಥಿಕ ಕುಸಿತಕ್ಕೆ ದೇವರನ್ನು ದೂಷಿಸುವ ನಿರ್ಮಲಾ ಸೀತಾರಾಮನ್, ಕೃಷಿಕರು ಮತ್ತು ಅವರಿಗೆ ಕೃಪೆ ತೋರಿದ ದೇವರನ್ನು ಶ್ಲಾಘಿಸಬೇಕು” ಎಂದು ಚಿದಂಬರಂ ಹೇಳಿದರು.

ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ಆರ್‌ಬಿಐ ಸೇರಿದಂತೆ ಇತರೆ ತಜ್ಞರು ಈ ಕುಸಿತವನ್ನು ಊಹಿಸಿ, ಎಚ್ಚರಿಸಿದ್ದರು. ಈ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಜೊತೆಗೆ ಆಶಾಭಾವನೆಯ ಭರವಸೆಯನ್ನೂ ಸಹ ಮೂಡಿಸುವುದಿಲ್ಲ ಎಂದು ಚಿದಂಬರಂ ಹೇಳಿದರು.

ಸದ್ಯದ ಆರ್ಥಿಕ ಚೇತರಿಕೆಗೆ ಸರ್ಕಾರ ಭಾರಿ ಸಾಲವನ್ನು ಪಡೆಯಬೇಕು ಅಥವಾ ಕೊರತೆಯ ಭಾಗವನ್ನು ಸರಿದೂಗಿಸಲು ಹಣವನ್ನು ಮುದ್ರಿಸಬೇಕು ಎಂಬ ಸಲಹೆಯನ್ನು ಮಾಜಿ ಹಣಕಾಸು ಸಚಿವ ಚಿದಂಬರಂ ಹೇಳಿದ್ದಾರೆ.

ದೇಶದ ಜಿಡಿಪಿಯಲ್ಲಿ ಶೇಕಡಾ 23.9 ರಷ್ಟು ಕುಸಿತ ಕಂಡಿರುವುದಕ್ಕೆ ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ ಅನ್ನು ಪಿ.ಚಿದಂಬರಂ ಅದೊಂದು ತಮಾಷೆ ಎಂದು ಕರೆದಿದ್ದಾರೆ.


ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...