Homeಎಕಾನಮಿಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ.

- Advertisement -
- Advertisement -

ಭಾರತದ ಜಿಡಿಪಿ ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. -23.9 ರಷ್ಟು ಗಣನೀಯ ಇಳಿಕೆಯಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ಧರಾಮಯ್ಯ ಸೇರಿದಂತೆ ಹಲವು ನಾಯಕರು ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಸಂಘಟಿತ ವಲಯದ ಮೇಲೆ ಆಕ್ರಮಣ ಮಾಡುವ ಮೂಲಕ ಸರ್ಕಾರವು ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ರಾಹುಲ್ ಗಾಂಧಿ ನಿನ್ನೆ ಟ್ವೀಟ್ ಮಾಡಿರುವ ವೀಡಿಯೋವೊಂದರಲ್ಲಿ ಹೇಳಿದ್ದು, ತಜ್ಞರು ಮತ್ತು ಇತರರ ಸೂಚನೆಗಳನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ ಎಂದು ಹೇಳಿದ ನಂತರ, ಇಂದು ಮತ್ತೊಂದು ಟ್ವೀಟ್ ಮಾಡಿ ‘ಮೋದಿ ನಿರ್ಮಿಸಿದ ವಿಪತ್ತುಗಳಿಂದ ಭಾರತ ತತ್ತರಿಸುತ್ತಿದೆ’ ಎಂದಿದ್ದಾರೆ.

“1. ಐತಿಹಾಸಿಕ ಜಿಡಿಪಿ ಕಡಿತ -23.9%, 2. 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗ, 3. 12 ಕೋಟಿ ಉದ್ಯೋಗ ನಷ್ಟ, 4. ರಾಜ್ಯಗಳಿಗೆ ಜಿಎಸ್‌ಟಿ ಬಾಕಿ ಪಾವತಿಸುವುದಿಲ್ಲ, 5. ಜಾಗತಿಕವಾಗಿ ಅತಿ ಹೆಚ್ಚು ಕೊರೊನಾ, 6.ನಮ್ಮ ಗಡಿಯಲ್ಲಿ ಬೇರೆಯವರ ಅತಿಕ್ರಮಣ” ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿ, “ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ. ಆರ್‌ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರವರೆಗೆ ಖ್ಯಾತ ಆರ್ಥಿಕ ತಜ್ಞರೆಲ್ಲರೂ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದರು. ಆಗಲೂ, ಈಗಲೂ ಸರ್ಕಾರ ಕುರುಡು-ಕಿವುಡು” ಎಂದು ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ನರೇಂದ್ರ ಮೋದಿಯವರು ಹೊರಟಿದ್ದಾರೆ. ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಅವರು, ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ. ಈಗ ರೋದಿಸಿ ಏನು ಫಲ?” ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿಯಾದ ಈಶ್ವರ್ ಖಂಡ್ರೆ, “ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಿದ್ದು ದೇಶದಲ್ಲಿ ಎಲ್ಲವು ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತಿರಿ ಪ್ರಧಾನಿಗಳೇ..??” ಎಂದು ಟ್ವೀಟ್ ಮಾಡಿದ್ದಾರೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿಗೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ -23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...