Homeಎಕಾನಮಿಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ.

- Advertisement -
- Advertisement -

ಭಾರತದ ಜಿಡಿಪಿ ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. -23.9 ರಷ್ಟು ಗಣನೀಯ ಇಳಿಕೆಯಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ಧರಾಮಯ್ಯ ಸೇರಿದಂತೆ ಹಲವು ನಾಯಕರು ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಸಂಘಟಿತ ವಲಯದ ಮೇಲೆ ಆಕ್ರಮಣ ಮಾಡುವ ಮೂಲಕ ಸರ್ಕಾರವು ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ರಾಹುಲ್ ಗಾಂಧಿ ನಿನ್ನೆ ಟ್ವೀಟ್ ಮಾಡಿರುವ ವೀಡಿಯೋವೊಂದರಲ್ಲಿ ಹೇಳಿದ್ದು, ತಜ್ಞರು ಮತ್ತು ಇತರರ ಸೂಚನೆಗಳನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ ಎಂದು ಹೇಳಿದ ನಂತರ, ಇಂದು ಮತ್ತೊಂದು ಟ್ವೀಟ್ ಮಾಡಿ ‘ಮೋದಿ ನಿರ್ಮಿಸಿದ ವಿಪತ್ತುಗಳಿಂದ ಭಾರತ ತತ್ತರಿಸುತ್ತಿದೆ’ ಎಂದಿದ್ದಾರೆ.

“1. ಐತಿಹಾಸಿಕ ಜಿಡಿಪಿ ಕಡಿತ -23.9%, 2. 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗ, 3. 12 ಕೋಟಿ ಉದ್ಯೋಗ ನಷ್ಟ, 4. ರಾಜ್ಯಗಳಿಗೆ ಜಿಎಸ್‌ಟಿ ಬಾಕಿ ಪಾವತಿಸುವುದಿಲ್ಲ, 5. ಜಾಗತಿಕವಾಗಿ ಅತಿ ಹೆಚ್ಚು ಕೊರೊನಾ, 6.ನಮ್ಮ ಗಡಿಯಲ್ಲಿ ಬೇರೆಯವರ ಅತಿಕ್ರಮಣ” ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿ, “ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ. ಆರ್‌ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರವರೆಗೆ ಖ್ಯಾತ ಆರ್ಥಿಕ ತಜ್ಞರೆಲ್ಲರೂ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದರು. ಆಗಲೂ, ಈಗಲೂ ಸರ್ಕಾರ ಕುರುಡು-ಕಿವುಡು” ಎಂದು ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ನರೇಂದ್ರ ಮೋದಿಯವರು ಹೊರಟಿದ್ದಾರೆ. ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಅವರು, ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ. ಈಗ ರೋದಿಸಿ ಏನು ಫಲ?” ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿಯಾದ ಈಶ್ವರ್ ಖಂಡ್ರೆ, “ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಿದ್ದು ದೇಶದಲ್ಲಿ ಎಲ್ಲವು ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತಿರಿ ಪ್ರಧಾನಿಗಳೇ..??” ಎಂದು ಟ್ವೀಟ್ ಮಾಡಿದ್ದಾರೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿಗೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ -23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...