Homeಮುಖಪುಟಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಈ ಸರ್ಕಾರವು ಸಂಸತ್ತನ್ನು ನೋಟಿಸ್-ಬೋರ್ಡ್‌ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಜೊತೆಗೆ ಅದರ ಬಹುಮತವನ್ನು ರಬ್ಬರ್-ಸ್ಟಾಂಪ್ ಆಗಿ ಬಳಸಿಕೊಳ್ಳಲು ಬಯಸುತ್ತದೆ - ಶಶಿ ತರೂರ್

- Advertisement -
- Advertisement -

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೆಯ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಓ’ಬ್ರಿಯೆನ್, “ಸಂಸದರು ಅಧಿವೇಶನದಲ್ಲಿ ಕೇಳುವ ಪ್ರಶ್ನೆಗಳನ್ನು 15 ದಿನಗಳ ಮುಂಚಿತವಾಗಿ ಸಲ್ಲಿಸಬೇಕಾಗಿದೆ. ಅಧಿವೇಶನ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುತ್ತದೆ. ಆದರೆ, ಪ್ರಶ್ನೆಯ ಸಮಯ ರದ್ದುಗೊಂಡಿದೆ? ಪ್ರತಿಪಕ್ಷದ ಸಂಸದರು ಸರ್ಕಾರವನ್ನು ಪ್ರಶ್ನಿಸುವ ಹಕ್ಕನ್ನು 1950 ರ ನಂತರ ಮೊದಲನೆಯ ಬಾರಿ ಕಳೆದುಕೊಂಡಿದ್ದಾರೆ? ಸಂಸತ್ತಿನ ಒಟ್ಟಾರೆ ಕೆಲಸದ ಸಮಯ ಬದಲಾಗಿಲ್ಲ, ಆದರೆ ಪ್ರಶ್ನೆಯ ಸಮಯವನ್ನು ಏಕೆ ರದ್ದುಗೊಳಿಸಲಾಗಿದೆ? ಪ್ರಜಾಪ್ರಭುತ್ವದ ಕಗ್ಗೋಲೆಗೆ ಸಾಂಕ್ರಾಮಿಕ ರೋಗದ ನೆಪ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್, “ಸರ್ಕಾರವನ್ನು ಪ್ರಶ್ನಿಸುವುದು ಸಂಸದೀಯ ಪ್ರಜಾಪ್ರಭುತ್ವದ ಆಮ್ಲಜನಕ. ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಬಲ ನಾಯಕರು ಸಾಂಕ್ರಾಮಿಕ ರೋಗದ ನೆಪವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ನಾಲ್ಕು ತಿಂಗಳ ಹಿಂದೆ ಹೇಳಿದ್ದೆ. ವಿಳಂಬವಾದ ಸಂಸತ್ತಿನ ಅಧಿವೇಶನದ ಅಧಿಸೂಚನೆಯು ‘ಪ್ರಶ್ನೆಯ ಸಮಯ’ ಇರುವುದಿಲ್ಲ ಎಂದು ಸ್ಪಷ್ಟವಾಗಿ ಘೋಷಿಸಿದೆ. ನಮ್ಮ ಸುರಕ್ಷತೆಯ ಹೆಸರಿನಲ್ಲಿ ಇದನ್ನು ಸಮರ್ಥಿಸಿಕೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಈ ಸರ್ಕಾರವು ಸಂಸತ್ತನ್ನು ನೋಟಿಸ್-ಬೋರ್ಡ್‌ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಜೊತೆಗೆ ಅದರ ಬಹುಮತವನ್ನು ರಬ್ಬರ್-ಸ್ಟಾಂಪ್ ಆಗಿ ಬಳಸಿಕೊಳ್ಳಲು ಬಯಸುತ್ತದೆ” ಎಂದು ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಅಧಿವೇಶನವು ಪ್ರತ್ಯೇಕ ಸಮಯದಲ್ಲಿ ನಡೆಯಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಂಸದರಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗುತ್ತಿದೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಕೆಲಸದ ದಿನಗಳಾಗಿವೆ.

ಯಾವುದೇ ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ಸಂಸದರಿಂದ ಕಳುಹಿಸಲಾಗುವ ಬಿಲ್‌ಗಳಿಗೆ ಸಮಯ ನಿಗದಿಪಡಿಸಲಾಗಿದೆ. ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ಚರ್ಚಿಸಲು ಸದಸ್ಯರಿಗೆ ಶೂನ್ಯ ವೇಳೆ ಇರುತ್ತದೆ. ಆದರೆ ಅದನ್ನು 30 ನಿಮಿಷಗಳಿಗೆ ಕಡಿತಗೊಳಿಸಲಾಗಿದೆ. ಸದನದ ಮೊದಲ ಗಂಟೆಯನ್ನು(ಪ್ರಶ್ನೆ ಸಮಯ) ಸಂಸದರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಲು ಅನುವು ಮಾಡಿಕೊಡಬೇಕಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಇದರ ಬಗ್ಗೆ ಟ್ವಿಟರ್ ನಲ್ಲಿ #Question Hour ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್ ಟ್ಯಾಗ್ ಬಳಸಿ ಸುಮಾರು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಗಳನ್ನು ಮಾಡಲಾಗಿದೆ. ವಿರೋಧ ಪಕ್ಷಗಳು ಸೇರಿದಂತೆ ಅನೇಕರು ಪ್ರಶ್ನೆಯ ಸಮಯವನ್ನು ರದ್ದುಗೊಳಿಸಿರುವುದಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...