Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...