Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...