Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ ರಾಣಾ ಅಯೂಬ್‌ ಅವರ ಮೇಲೆ ದಾಳಿಗೆ ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಆಗಸ್ಟ್ 31 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನವಾಗಿದ್ದಕ್ಕೆ ಸಂಭ್ರಮಿಸಿ ಪತ್ರಕರ್ತೆ ರಾಣಾ ಅಯೂಬ್ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ, ಪ್ರಣಬ್ ಮುಖರ್ಜಿ ಅವರ ಫೋಟೋ ಹಾಕಿ “ಹುತಾತ್ಮ ಅಫ್ಜಲ್ ಗುರುವಿನ ಅರ್ಜಿಯನ್ನು ನಿರಾಕರಿಸಿದವರು ಇಂದು ಸತ್ತು ಹೋದರು, ಇಂದು ಅಫ್ಜಲ್ ಗುರುವಿಗೆ ಶಾಂತಿ ಸಿಗುತ್ತದೆ” ಎಂದು ಬರೆದಿದೆ.

ಪ್ರಣಬ್ ಮುಖರ್ಜಿ ಭಾರತದ ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ, 2001 ರ ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುವಿನ ಕ್ಷಮಾಪನಾ ಅರ್ಜಿಯನ್ನು ತಿರಸ್ಕರಿಸಿದ್ದರು.

ಮತ್ತಷ್ಟು ಫ್ಯಾಕ್ಟ್‌ಚೆಕ್ ಓದಲು ಇಲ್ಲಿ ಕ್ಲಿಕ್‌ ಮಾಡಿ

ಈ ಸ್ಕ್ರೀನ್‌ಶಾಟ್ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಜಿಹಾದಿ ಮನಸ್ಸು ಹೇಗೆ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಆರ್ಕೈವ್

ಫ್ಯಾಕ್ಟ್‌‌ಚೆಕ್‌‌

ರಾಣಾ ಅಯೂಬ್ ಅವರ ಟ್ವಿಟರ್ ಟೈಮ್‌ಲೈನ್‌ನಲ್ಲಿ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಯಾವುದೆ ಟ್ವೀಟ್‌‌ ಇಲ್ಲ. ಅಷ್ಟೇ ಅಲ್ಲದೆ ಈ ವೈರಲ್ ಸ್ಕ್ರೀನ್‌ಶಾಟ್‌ ಅನ್ನು ಸರಿಯಾಗಿ ಗಮನಿಸಿದೆರೆ ಅದು ನಕಲಿ ಟ್ವೀಟ್ (ಎಡಿಟ್ ಮಾಡಲಾದ) ಎಂದು ಗುರುತಿಸಬಹುದು. ಮುಖ್ಯವಾಗಿ ಈ ವೈರಲ್ ಟ್ವೀಟ್‌‌ನ ಸ್ಕ್ರೀನ್‌ಶಾರ್ಟ್‌ನಲ್ಲಿ ನಾವು ನಾಲ್ಕು ತಪ್ಪುಗಳನ್ನು ಗುರುತಿಸಬಹುದು.

ವೈರಲ್ ಟ್ವೀಟ್ (ಎಡ) ಮತ್ತು ರಾಣಾ ಅಯ್ಯುಬ್ (ಬಲ) ಅವರ ಮತ್ತೊಂದು ಟ್ವೀಟ್‌ನ ಹೋಲಿಕೆ ಹೋಲಿಕೆ. (ಫೋಟೋ: ದಿ ಕ್ವಿಂಟ್‌ )
  • ವೈರಲ್ ಟ್ವೀಟ್‌ನಲ್ಲಿ ಬಳಕೆದಾರ ಹೆಸರು ಮತ್ತು ಬರಹದ ನಡುವಿನ ಸ್ಥಳವು ಸಾಮಾನ್ಯ ಟ್ವೀಟ್‌ನಲ್ಲಿ ಕಾಣುವುದಕ್ಕಿಂತ ಹೆಚ್ಚಾಗಿದೆ.
  • ವೈರಲ್ ಟ್ವೀಟ್‌ನಲ್ಲಿ ಡೇಟ್‌ಲೈನ್ ಇಲ್ಲ.
  • ಟ್ವೀಟ್‌ಗಳಲ್ಲಿ ಸಾಮಾನ್ಯವಾಗಿ ಕಾಣುವಂತೆ ‘ಕಾಮೆಂಟ್‌’, ‘ರಿಟ್ವೀಟ್’ ಮತ್ತು ‘ಲೈಕ್’ ಐಕಾನ್‌ಗಳು ವೈರಲ್ ಟ್ವೀಟ್‌ನಲ್ಲಿ ಎಡಗಡೆಗೆ ಹೊಂದಿಕೊಂಡಿದೆ.
  • ವೈರಲ್ ಟ್ವೀಟ್ ‘ಶೇರ್‌’ ಆಯ್ಕೆಯ ಐಕಾನ್‌ ಹೊಂದಿಲ್ಲ.

ಇದನ್ನೂಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ.

ಅಷ್ಟೇ ಅಲ್ಲದೆ ಸ್ವತಃ ರಾಣಾ ಅಯೂಬ್ ಅವರು ಕೂಡಾ ಈ ಟ್ವೀಟ್ ಅನ್ನು ನಕಲಿ ಎಂದು ಕರೆದಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ, ನನ್ನ ಮೇಲೆ ದಾಳಿ ಮಾಡಲು ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸುತ್ತಿದ್ದಾರೆ” ಎಂದು ಅವರು ಟ್ವಿಟ್ಟ್‌ರ್‌ ಇಂಡಿಯಾಗೆ ಟ್ಯಾಗ್‌ ಮಾಡಿ ದೂರು ನೀಡಿದ್ದಾರೆ. ಆದರೆ ಮಹಿಳೆಯು ಅದನ್ನು ಡಿಲಿಟ್ ಮಾಡಿದ್ದಾರೆ. ಅವರು ಹಾಕಿರುವ ಟ್ವೀಟ್‌ನ ಆರ್ಕೈವ್ ಇಲ್ಲಿದೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಸ್ಕ್ರೀನ್‌‌ಶಾರ್ಟ್ ನಕಲಿ ಎಂದು ತಿಳಿದುಕೊಳ್ಳಬಹುದು.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ:  ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....