Homeಎಕಾನಮಿನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರವನ್ನು ಬರೆದಿದ್ದೇನೆ- ಪಿಣರಾಯಿ ವಿಜಯನ್

- Advertisement -
- Advertisement -

ಈ ಬಾರಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಲು ಹಣವಿಲ್ಲ, ಸಾಲ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

“2017 ರ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ರಾಜ್ಯಗಳಿಗೆ ಪರಿಹಾರ ಮೊತ್ತವನ್ನು ಪ್ರತಿ ಎರಡು ತಿಂಗಳಿಗೊಮ್ಮೆ, ತಿಂಗಳಾಂತ್ಯದಲ್ಲಿ ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ 2019-20ನೇ ಸಾಲಿನಿಂದ ಏಪ್ರಿಲ್ 2020ರವರೆಗೆ ಜಿಎಸ್‌ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಿಲ್ಲ. ಕೇರಳಕ್ಕೆ ನೀಡಬೇಕಾದ ಬಾಕಿ, 2020-21ನೇ ಹಣಕಾಸು ವರ್ಷದಲ್ಲಿ ಆಗಸ್ಟ್ ವರೆಗೆ 7000 ಕೋಟಿ ಇದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

“41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, ಕೊರೊನಾ‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದು ಹೇಳಲಾಗಿತ್ತು. ಹಾಗಾಗಿ ಪರಿಹಾರವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. ಆದರೆ ಇದರಿಂದ ರಾಜ್ಯಗಳ ಪರಿಸ್ಥಿತಿ ಇನ್ನೂ ಅಧೋಗತಿಗೆ ಹೋಗಬಹುದು” ಎಂದು ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು. ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಿಸಬೇಕೆಂದು ಕೇಂದ್ರ ಹೇಳಿದೆ.

“ಈ ಎರಡೂ ಆಯ್ಕೆಗಳನ್ನು ಹಿಂತೆಗೆದುಕೊಂಡು, ರಾಜ್ಯಗಳಿಗೆ ನೀಡಬೇಕಾಗಿರುವ ಪರಿಹಾರವನ್ನು ನೀಡುವಂತೆ ಹಣಕಾಸು ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಪ್ರಧಾನಿಯವರನ್ನು ಕೇಳಿಕೊಳ್ಳುತ್ತೇನೆ” ಎಂದು ವಿನಂತಿಸಿದ್ದಾರೆ.

“ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ. ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ಕೇರಳ ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ನಿನ್ನೆ ಹೇಳಿದ್ದರು.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...