Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...