Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...