Homeಅಂಕಣಗಳುಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

ಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

- Advertisement -
- Advertisement -

ಸಾರ ಅಬೂಬಕ್ಕರ್ |

ಇದೇ ಡಿಸೆಂಬರ್ ತಿಂಗಳ ದಿನಾಂಕ 10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಮುಸ್ಲಿಮರ ‘ಶರಿಯತ್ ರಕ್ಷಣ್’ ಎಂಬ ವಿಷಯದ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದ್ದು ರಾಜ್ಯಾದ್ಯಂತದಿಂದ ಮುಸ್ಲಿಂ ಪುರುಷರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದನ್ನು ಅನುಸರಿಸಿ ರಾಜ್ಯದ ಹಲವು ಜಿಲ್ಲೆಗಳಿಂದ ಮುಸ್ಲಿಂ ಪುರುಷರು ಆಗಮಿಸಿ ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇರಳದ ಹಲವಾರು ಧರ್ಮ ಗುರುಗಳು ಬಂದು ಈ ಜನರಿಗೆ ಮಾರ್ಗದರ್ಶನ ನೀಡಿದರು.
1985ರ ಸಂದರ್ಭದಲ್ಲಿ ಶಾಬಾನು ಎಂಬ ಮಹಿಳೆ, ಐದು ಮಕ್ಕಳ ತಾಯಿಯು ವಕೀಲನಾಗಿದ್ದ ಆಕೆಯ ಗಂಡ ತ್ರಿವಳಿ ತಲಾಖ್ ನೀಡಿ ಹೊರ ಹಾಕಿದಾಗ ಆಕೆ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದಳು. ನ್ಯಾಯಾಲಯ ಆಕೆ ಮತ್ತು ಮಕ್ಕಳಿಗೆ ತಿಂಗಳಿಗೆ 185ರೂ ಜೀವನಾಂಶ ನೀಡಬೇಕೆಂದು ತೀರ್ಪು ನೀಡಿದಾಗ ಆಗ ಆಕೆಯ ಗಂಡನು ದೇಶಾದ್ಯಂತ ಎಲ್ಲ ಮುಸ್ಲಿಮರನ್ನು ಈ ತೀರ್ಪಿನ ವಿರುದ್ಧ ಎತ್ತಿ ಕಟ್ಟಿ, ತಲಾಖ್ ನೀಡಿದ ಬಳಿಕ ಹೆಂಡತಿಗೆ ಜೀವನಾಂಶ ನೀಡುವುದು ಧರ್ಮ ವಿರುದ್ಧವೆಂದು ಹೋರಾಟವನ್ನಾರಂಭಿಸಿದರು. ಆಗ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ದಾರಿ ತಪ್ಪಿಸಿ ‘ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ’ ಎಂಬ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದಂತೆ ತಲಾಖ್ ಪೀಡಿತ ಮಹಿಳೆಯರನ್ನು ಅವಳ ಸಂಬಂಧಿಕರು ನೋಡಿಕೊಳ್ಳಬೇಕು ಯಾರೂ ಇಲ್ಲವಾದರೆ ವಕ್ಸ್ ಮಂಡಳಿಯನ್ನು ಆಕೆ ಕೇಳಿಕೊಳ್ಳಬೇಕು. ಈ ನಿಯಮ ತೀರಾ ಹಾಸ್ಯಾಸ್ಪದ ಎಂಬಂತಾಯಿತು. ಹಕ್ಕೇ ಇಲ್ಲದ ಮುಸ್ಲಿಂ ಮಹಿಳೆಯರ ಯಾವ ಹಕ್ಕುಗಳನ್ನು ಈ ನಿಯಮ ರಕ್ಷಿಸುತ್ತದೆ? ವಕ್ಪ್ ಮಂಡಳಿಯ ಅನ್ಯ ಪುರುಷರೊಡನೆ ಆಕೆ ತನಗೆ ಜೀವನಾಂಶ ಕೊಡಿ ಎಂದು ಕೇಳತೊಡಗಿದರೆ ಪರಿಣಾಮವೇನಾಗಬಹುದು ಎಂಬುದನ್ನು ನಾನು ವಿವರಿಸಬೇಕಾಗಿಲ್ಲ. ಇಷ್ಟಕ್ಕೂ ಖುರಾನಿನ 2ನೇ ಸೂರದ 241ನೇ ವಾಕ್ಯ ಸ್ಪಷ್ಟವಾಗಿ ತಲಾಖ್ ಪೀಡಿತ ಮಹಿಳೆಯ ಮುಂದಿನ ಬದುಕಿಗಾಗಿ ಆಕೆಗೆ ಜೀವನಾಂಶ ನೀಡಬೇಕೆಂದು ಬರೆದಿದೆ. ಮುಸ್ಲಿಂ ಪುರುಷರು ಈ ಖುರ್‍ಆನಿನ ಈ ವಾಕ್ಯವನ್ನೇ ಜನರ ಕಣ್ಣಿನಿಂದ ಮಶಿಮಾ ಡಿ, ತಲಾಖ್ ಪೀಡಿತೆಗೆ ಜೀವನಾಂಶ ಧರ್ಮ ವಿರುದ್ಧ. ತಮ್ಮ ಧರ್ಮದಲ್ಲಿ ಸರಕಾರದ ಹಸ್ತಕ್ಷೇಪ ಎಂದು ಘೋಷಣೆ ಕೂಗಿದರು. ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರು ಬದುಕಿನ ಹಾದಿಯನ್ನು ಮುಂಬೈಯ ಕೆಂಪು ದೀಪದ ಅಡಿಯಲ್ಲಿ ಕಂಡುಕೊಂಡರು. ಧರ್ಮ ರಕ್ಷಕರೆಂಬ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಎಂಬ ಸಂಸ್ಥೆ ಧರ್ಮ ರಕ್ಷಣೆ ಆಯಿತೆಂದು ಸಂಭ್ರಮಾಚರಿಸಿದರು. ತಲಾಖ್ ಪೀಡಿತ ಮಹಿಳೆಯರ ಗತಿ ಏನಾಯಿತೆಂದು ಈ ಪುರುಷರು ಯೋಚಿಸುವ ಗೋಜಿಗೆ ಇಂದಿನವರೆಗೂ ಹೋಗಿಯೇ ಇಲ್ಲ. ಈ ಹೊಸ ನಿಯಮದ ವಿರುದ್ಧ ಹೋರಾಡಿದ ವಿದ್ಯಾವಂತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಈ ಜನರು ಜಾತಿ ಭ್ರಷ್ಟತೆಯ ಆರೋಪ ಹೊರಸಿದರು.
ಈಗಲೂ ತ್ರಿವಳಿ, ಬಾಯಿಮಾತಿನ ತಲಾಖನ್ನು ಕೇಂದ್ರ ಸರಕಾರ ನಿಷೇಧಿಸಿದ ಕಾರಣ ನೀಡಿ ಈ ಜನರು ಶರಿಯತ್ ರಕ್ಷಣೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ರದ್ಧತಿ ನಿಯಮದಿಂದ ಹಿಂದೆ ಸರಿಯಬಾರದೆಂದು ನನ್ನ ಕಳಕಳಿಯ ಮನವಿ.
ನಮ್ಮ ಸಂವಿಧಾನವು ಎಲ್ಲರಿಗೂ ತಮ್ಮ ಧಾರ್ಮಿಕ ನಿಯಮಗಳನ್ನು ಪಾಲಿಸುವ ಅಧಿಕಾರವನ್ನು ನೀಡಿದೆ. ಆದರೆ ಯಾವ ಧರ್ಮ ಕೂಡಾ ಮನುಷ್ಯರನ್ನು ಬದುಕಿನಲ್ಲಿ ಸಂಕಟ ಪಡುವಂತಹ ನಿಯಮಗಳನ್ನು ರೂಪಿಸುವುದಿಲ್ಲ. 1500 ವರ್ಷಗಳ ಹಿಂದೆ ಪ್ರವಾದಿಗಳು ಹೆಂಡತಿ ಬೇಡವಾದರೆ ಬೀದಿಗೆಸೆಯಿರಿ ಎಂದು ಹೇಳಿಯೂ ಇರಲಿಲ್ಲ. ಅವರು ಪುರುಷರಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನೋಡಿಯೇ ಇಸ್ಲಾಂ(ಶಾಂತಿ) ಎಂಬ ಧರ್ಮ ಸ್ಥಾಪನೆ ಮಾಡಿದರು.
ಧರ್ಮದ ನಿಯಮಗಳು 1500 ವರ್ಷಗಳ ಹಿಂದೆ ನಡೆಯುತ್ತಿದ್ದಂತೆ ಈಗಲೂ ಇರಬೇಕೆನ್ನುವುದೇ ಮೂರ್ಖತನವಾಗುತ್ತದೆ. ಶರಿಯತ್ ರಕ್ಷಣೆಗೆ ಹೊರಟವರಿಗೆ ಶರಿಯತ್ ಎಂಬ ಕರ್ಮ ಶಾಸ್ತ್ರ ಯಾವಾಗ ಜಾರಿಯಾಯಿತೆಂದು ತಿಳಿದಿದೆಯೇ? ಪ್ರವಾದಿಗಳ ಮರಣಾನಂತರ 150 ವರ್ಷಗಳ ಬಳಿಕವಷ್ಟೆ ಧಾರ್ಮಿಕ ಗುರುಗಳು ಶರಿಯತ್‍ನ್ನು ಜಾರಿಗೊಳಿಸಿದರು. ಇಸ್ಲಾಂ ಧಾರ್ಮಿಕ ನಿಯಮಗಳು ಮಹಿಳೆಯರ ಮೇಲೆ ಅಧಿಕಾರ ಚಲಾಯಿಸಲು ಪುರುಷರಿಗೆ ಸಾಧ್ಯವಾಗುವಂತಹ ನಿಯಮಗಳನ್ನು ಶರಿಯತ್ ಎಂಬ ಹೆಸರಿನಲ್ಲಿ ಜಾರಿಗೊಳಿಸಿದರು.
ನಮ್ಮ ಸಂವಿಧಾನ ಸರ್ವರಿಗೂ ಸಮಾನತೆ ನೀಡಿದೆ. ವಿವಿಧ ಧಾರ್ಮಿಕ ನಿಯಮಗಳಿಂದಾಗಿ ಈ ಸಮಾನತೆ ಮುಸ್ಲಿಂ ಮಹಿಳೆಯರಿಗೆ ದೊರೆಯುತ್ತಿಲ್ಲ. ವಿವಾಹ, ವಿಚ್ಛೇದನ ಇವು ಯಾವುದು ಧಾರ್ಮಿಕ ನಿಯಮಗಳಲ್ಲ. ಇವೆಲ್ಲವೂ ಸಾಮಾಜಿಕ ನಿಯಮಗಳು ಇಂತಹ ಸಾಮಾಜಿಕ ನಿಯಮಗಳು ಮಹಿಳೆಯರಿಗೆ ಬದುಕಲು ಸಾಧ್ಯವಾಗದ ರೀತಿಯಲ್ಲಿ ಅವರಿಗೆ ಉಸಿರುಗಟ್ಟುವಂತಾದರೆ ಅವುಗಳನ್ನು ಕಾಲಕ್ಕನುಸಾರವಾಗಿ ಬದಲಾಯಿಸಬಹುದು. ನೀವು ಯಾವ ದೇಶದಲ್ಲಿ ಬದುಕುತಿದ್ದೀರೋ ಆ ದೇಶದ ಸಾಮಾಜಿಕ ನಿಯಮವನ್ನು ಅನುಸರಿಸಬಹುದು ಎಂಬುದು ಪ್ರವಾದಿಗಳ ಬೋಧನೆಯಾ.
ಇಂದು ನಮ್ಮ ಸುತ್ತಮುತ್ತಲಿನ ಸುಮಾರು ಹತ್ತಿಪ್ಪತ್ತು ದೇಶಗಳಲ್ಲಿ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಪಡಿಸಲಾಗಿದೆ. ಅಲ್ಲಿ ಯಾರೂ ನಮ್ಮ ಧರ್ಮದಲ್ಲಿ ಹಸ್ತಕ್ಷೇಪವೆಂದು ಕಿರುಚಾಡಲಿಲ್ಲವಲ್ಲಾ? ಇತರ ಮುಸ್ಲಿಂ ರಾಷ್ಟ್ರಗಳು ಇಂತಹ ಅನ್ಯಾಯದ ನಿಯಮವನ್ನು ತಿದ್ದುಪಡಿ ಮಾಡಿದರೆ ಇಂಡಿಯಾ ಕೂಡಾ ಅದನ್ನು ಮಾಡಲು ಯಾರ ಅನುಮತಿಯನ್ನು ಪಡೆಯಬೇಕಾಗಿಲ್ಲ.
ನಾವೆಲ್ಲರೂ ನಮ್ಮ ಸಂವಿಧಾನಕ್ಕನುಸಾರವಾಗಿ ಬದುಕಬೇಕು. ನಮಗೆ ನಮ್ಮ ಧರ್ಮವೆನ್ನುವುದಾದರೆ ಮುಸ್ಲಿಮೇತರರೂ ಮನುಧರ್ಮಶಾಸ್ತ್ರ ನಮ್ಮ ಧರ್ಮವೆನ್ನುತ್ತಾರೆ. ಪೇಜಾವರ ಗುರುಗಳು ಹಾಗೂ ವಾರಣಾಸಿಯ ಧರ್ಮಗುರುಗಳೂ ನಮಗೆ ಸಂವಿಧಾನದಲ್ಲಿ ವಿಶ್ವಾಸವಿಲ್ಲ. ನಾವು ಮನುವಾದವನನುಸರಿಸುತ್ತೇವೆ ಎಂದು ಹೇಳತೊಡಗಿದ್ದಾರೆ. ನಮ್ಮ ದೇಶದಲ್ಲಿ ಅತ್ಯುತ್ತಮ ಸಂವಿಧಾನವಿದೆ. ನಾವೆಲ್ಲರೂ ಸೌಹಾರ್ದದಿಂದ ಈ ಸಂವಿಧಾನಕ್ಕನುಸಾರವಾಗಿ ವರ್ತಿಸತೊಡಗಿದರೆ ದೇಶದಲ್ಲಿ ಶಾಂತಿ ನೆಲೆಯೂರಬಹುದು. ಮುಸ್ಲಿಮರು ಎಷ್ಟು ಮಸೀದಿ ಕಟ್ಟಿಸಿಕೊಳ್ಳಲೂ ಅಭ್ಯಂತರವಿಲ್ಲ. ಒಂದೇ ಬೀದಿಯಲ್ಲಿ ಮೂರೋ ನಾಲ್ಕೋ ಮಸೀದಿಗಳಿರುವುದೂ ಇದೆ. ನಮ್ಮ ಧಾರ್ಮಿಕ ನಿಯಮಗಳನ್ನು ಯಾರೂ ತಡೆಯಲಾರರು. ನಮಗೆ ಎಲ್ಲರನ್ನು ಅರ್ಥ ಮಾಡಿಕೊಳ್ಳುವಂತಹ ಹೃದಯ ವಾತ್ಸಲ್ಯತೆ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...