Homeಮುಖಪುಟ10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ 'ಮನ್-ಕಿ-ಬಾತ್'!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಹತ್ತುಲಕ್ಷ ಡಿಸ್‌ಲೈಕ್ ಗಳಿಸಿ, ಪ್ರಧಾನಿ ಮೋದಿಯ ‘ಮನ್-ಕಿ-ಬಾತ್’ ಕಾರ್ಯಕ್ರಮ ದಾಖಲೆ ಬರೆದಿದೆ. ಅದಾಗ್ಯೂ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿತ್ತು.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಒಂದೇ ದಿನದಲ್ಲಿ, ಆ ವಿಡಿಯೋಗೆ 3 ಲಕ್ಷ ಜನರು ಲೈಕ್ ಒತ್ತಿದರೆ 10 ಲಕ್ಷ ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಆದರೆ ಇಂದು ಈ ವರದಿ ಬರೆಯುವ ವೇಳೆಗೆ ಡಿಸ್ಲೈಕ್ ಗಳ ಸಂಖ್ಯೆ 1 ಮಿಲಿಯನ್ ದಾಟಿ ದಾಖಲೆ ಬರೆದಿದೆ. ಲೈಕ್ ಗಳ ಸಂಖ್ಯೆ ಕೇವಲ 3 ಲಕ್ಷ ದಾಟಿದೆ.

ಈ ನಡುವೆ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದರ ಕುರಿತು ಪ್ರಜಾವಾಣಿ ವರದಿ ಮಾಡಿದೆ.

“ಮಂಗಳವಾರ ಸಂಜೆ 6.30ರಲ್ಲಿ ಪರಿಶೀಲಿಸದಾಗ ಡಿಸ್‌ಲೈಕ್‌ಗಳ ಸಂಖ್ಯೆ 9.92 ಲಕ್ಷ ಇತ್ತು. 7 ಗಂಟೆಯಲ್ಲಿ 9.98 ಲಕ್ಷದಷ್ಟಿತ್ತು. ಆದರೆ ರಾತ್ರಿ 8.40 ರಲ್ಲಿ ಪರಿಶೀಲಿಸಿದಾಗ, ಡಿಸ್‌ಲೈಕ್‌ಗಳ ಸಂಖ್ಯೆ 9.3 ಲಕ್ಷಕ್ಕೆ ಕುಸಿದಿತ್ತು. ಅದು ಹೇಗೆ ಕುಸಿಯಲು ಸಾಧ್ಯ ಎಂದು ಪತ್ರಿಕೆ ಪ್ರಶ್ನಿಸಿದೆ.

ಬಿಜೆಪಿ ಐಟಿ ಸೆಲ್ ದೇಶದಲ್ಲಿ ಅತ್ಯಂತ ಪ್ರಭಾವಿ ಮತ್ತು ವಿಸ್ತೃತ ಜಾಲ ಹೊಂದಿದೆ ಎಂದು ಹೇಳಲಾಗುತ್ತದೆ. ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಒಂದೇ ಸಮನೇ ಡಿಸ್‌ಲೈಕ್‌ಗಳ ಸಂಖ್ಯೆ ಏರತೊಡಗಿದೆ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗಳು ಪ್ರಾರಂಭವಾಗಿವೆ. ಆದರೂ ಮನ್-ಕಿ-ಬಾತ್ ವೀಡಿಯೋಗೆ  ಡಿಸ್‌ಲೈಕ್‌ಗಳ ಸಂಖ್ಯೆ ಮಾತ್ರ ಒಂದೇ ಸಮನೆ ಏರುತ್ತಿದೆ (ಪ್ರಸ್ತುತ ಹತ್ತುಲಕ್ಷ). ಇದು ಮೋದಿ ಆಡಳಿತದ ವಿರುದ್ಧ ಜನಾಕ್ರೋಶ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...