Homeಮುಖಪುಟ10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ 'ಮನ್-ಕಿ-ಬಾತ್'!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಹತ್ತುಲಕ್ಷ ಡಿಸ್‌ಲೈಕ್ ಗಳಿಸಿ, ಪ್ರಧಾನಿ ಮೋದಿಯ ‘ಮನ್-ಕಿ-ಬಾತ್’ ಕಾರ್ಯಕ್ರಮ ದಾಖಲೆ ಬರೆದಿದೆ. ಅದಾಗ್ಯೂ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿತ್ತು.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಒಂದೇ ದಿನದಲ್ಲಿ, ಆ ವಿಡಿಯೋಗೆ 3 ಲಕ್ಷ ಜನರು ಲೈಕ್ ಒತ್ತಿದರೆ 10 ಲಕ್ಷ ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಆದರೆ ಇಂದು ಈ ವರದಿ ಬರೆಯುವ ವೇಳೆಗೆ ಡಿಸ್ಲೈಕ್ ಗಳ ಸಂಖ್ಯೆ 1 ಮಿಲಿಯನ್ ದಾಟಿ ದಾಖಲೆ ಬರೆದಿದೆ. ಲೈಕ್ ಗಳ ಸಂಖ್ಯೆ ಕೇವಲ 3 ಲಕ್ಷ ದಾಟಿದೆ.

ಈ ನಡುವೆ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದರ ಕುರಿತು ಪ್ರಜಾವಾಣಿ ವರದಿ ಮಾಡಿದೆ.

“ಮಂಗಳವಾರ ಸಂಜೆ 6.30ರಲ್ಲಿ ಪರಿಶೀಲಿಸದಾಗ ಡಿಸ್‌ಲೈಕ್‌ಗಳ ಸಂಖ್ಯೆ 9.92 ಲಕ್ಷ ಇತ್ತು. 7 ಗಂಟೆಯಲ್ಲಿ 9.98 ಲಕ್ಷದಷ್ಟಿತ್ತು. ಆದರೆ ರಾತ್ರಿ 8.40 ರಲ್ಲಿ ಪರಿಶೀಲಿಸಿದಾಗ, ಡಿಸ್‌ಲೈಕ್‌ಗಳ ಸಂಖ್ಯೆ 9.3 ಲಕ್ಷಕ್ಕೆ ಕುಸಿದಿತ್ತು. ಅದು ಹೇಗೆ ಕುಸಿಯಲು ಸಾಧ್ಯ ಎಂದು ಪತ್ರಿಕೆ ಪ್ರಶ್ನಿಸಿದೆ.

ಬಿಜೆಪಿ ಐಟಿ ಸೆಲ್ ದೇಶದಲ್ಲಿ ಅತ್ಯಂತ ಪ್ರಭಾವಿ ಮತ್ತು ವಿಸ್ತೃತ ಜಾಲ ಹೊಂದಿದೆ ಎಂದು ಹೇಳಲಾಗುತ್ತದೆ. ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಒಂದೇ ಸಮನೇ ಡಿಸ್‌ಲೈಕ್‌ಗಳ ಸಂಖ್ಯೆ ಏರತೊಡಗಿದೆ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗಳು ಪ್ರಾರಂಭವಾಗಿವೆ. ಆದರೂ ಮನ್-ಕಿ-ಬಾತ್ ವೀಡಿಯೋಗೆ  ಡಿಸ್‌ಲೈಕ್‌ಗಳ ಸಂಖ್ಯೆ ಮಾತ್ರ ಒಂದೇ ಸಮನೆ ಏರುತ್ತಿದೆ (ಪ್ರಸ್ತುತ ಹತ್ತುಲಕ್ಷ). ಇದು ಮೋದಿ ಆಡಳಿತದ ವಿರುದ್ಧ ಜನಾಕ್ರೋಶ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...