Homeಅಂತರಾಷ್ಟ್ರೀಯನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

- Advertisement -
- Advertisement -

ಪಶ್ಚಿಮ ನ್ಯೂಯಾರ್ಕ್ ನಗರದಲ್ಲಿ ಬೆತ್ತಲೆಯಾಗಿ ಓಡಿಬರುತ್ತಿರುವ ಕಪ್ಪು ವ್ಯಕ್ತಿಯೊಬ್ಬನನ್ನು ಪೊಲೀಸರು ಉಸಿರುಗಟ್ಟುವಂತೆ ಮಾಡಿ ಹತ್ಯೆಗೈದಿದ್ದಾರೆ. ಈ ಕುರಿತು ಮೃತ ವ್ಯಕ್ತಿಯ ಕುಟುಂಬ ಬುಧವಾರ ವೀಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಮೃತ ವ್ಯಕ್ತಿಯ ಕುಟುಂಬ ಬಿಡುಗಡೆ ಮಾಡಿದ ದಾಖಲೆ ಮತ್ತು ವಿಡಿಯೋ ದೃಶ್ಯದಲ್ಲಿ, ಪೊಲೀಸ್ ಅಧಿಕಾರಿಗಳ ಗುಂಪೊಂದು ಆತನ ತಲೆಗೆ ಮುಂಗಡಿಯೊಂದನ್ನು (Hood) ಹಾಕಿ, ಮುಖವನ್ನು ಎರಡು ನಿಮಿಷಗಳ ಕಾಲ ರಸ್ತೆಗೆ ಒತ್ತಿ, ಉಸಿರುಗಟ್ಟುವಂತೆ ಮಾಡಿ ಹತ್ಯೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

ರೋಚೆಸ್ಟರ್‌ನಲ್ಲಿ ಪೊಲೀಸರಿಂದ ಎನ್ ಕೌಂಟರ್ ಆದ ಏಳು ದಿನಗಳ ನಂತರ, ಡೇನಿಯಲ್ ಪ್ರೂಡ್ ಕೃತಕ ಉಸಿರಾಟದಲ್ಲಿದ್ದರು. ನಂತರ ಮಾರ್ಚ್ 30 ರಂದು ಸಾವನ್ನಪ್ಪಿದ್ದರು.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಡೇನಿಯಲ್ ಪ್ರೂಡ್ ಅವರ ಸಹೋದರ ಜೋ ಪ್ರೂಡ್, “ನೀವು ಅವನನ್ನು  ಹೇಗೆ ನೋಡಿದಿರಿ. ರಕ್ಷಣೆಯಿಲ್ಲದ ಮನುಷ್ಯ ನೆಲೆದ ಮೇಲೆ ಬೆತ್ತಲೆಯಾಗಿ ಬಿದ್ದಿದ್ದಾನೆ. ಅವನ ಕೈಗೆ ಕೋಳ ತೊಡಿಸಲಾಗಿದೆ. ಈ ಸಮಾಜ ಇದನ್ನು ಅರ್ಥಮಾಡಿಕೊಳ್ಳಲು ಇನ್ನೂ ಎಷ್ಟು ಜನ ಸಹೋದರರು ಹೀಗೆ ಸಾಯಬೇಕು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತನ ಸಹೋದರ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಪೋಲಿಸರ ಕ್ರೂರತೆ ಮತ್ತು ಹತ್ಯೆ, ಪೊಲೀಸ್ ಮತ್ತು ಡೇನಿಯಲ್ ಫ್ರೂಡ್ ನ ಸಂಭಾಷಣೆಯ ಸಮೇತ ಸ್ಪಷ್ಟವಾಗಿ ದಾಖಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ, ಅಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿತ್ತು.

ಪ್ರೂಡ್ ಚಿಕಾಗೊ ಮೂಲದವನಾಗಿದ್ದು, ತನ್ನ ಕುಟುಂಬದ ಭೇಟಿಗಾಗಿ ನ್ಯೂಯಾರ್ಕ್ ನ ರೋಚೆಸ್ಟರ್‌ಗೆ ಬಂದಿದ್ದನು. ಜೋ ಪ್ರೂಡ್, “911 ಗೆ ಕರೆ ಮಾಡಿ, ಮನೆಯಿಂದ ಹೊರಹೋಗಿರುವ ತನ್ನ ಸಹೋದರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ ಎಂದು ಹೇಳಿದ ನಂತರ ಪೊಲೀಸರು ಪ್ರತಿಕ್ರಿಯಿಸಿದ್ದರು” ಎಂದು ಹೇಳಿದ್ದಾರೆ.

ಏಪ್ರಿಲ್ ನಲ್ಲಿ ರಾಜ್ಯ ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಕಚೇರಿ ಸ್ವಯಂ ತನಿಖೆಯನ್ನು ಪ್ರಾರಂಭಿಸಿದಾಗ, ನಗರವು ಪ್ರೂಡ್ ಸಾವಿನ ತನಿಖೆಯನ್ನು ನಿಲ್ಲಿಸಿತು. ನ್ಯೂಯಾರ್ಕ್ ಕಾನೂನಿನ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿರುವ ನಿರಾಯುಧ ಜನರ ಸಾವುಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ವಹಿಸುವ ಬದಲು ಅಟಾರ್ನಿ ಜನರಲ್ ಕಚೇರಿಗೆ ವರ್ಗಾಯಿಸಲಾಗುತ್ತದೆ. ತನಿಖೆ ಮುಂದುವರೆದಿದೆ ಎಂದು ಜೇಮ್ಸ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಇತ್ತೀಚಿನ ವರ್ಷಗಳಲ್ಲಿ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಹಲವಾರು ಕೈದಿಗಳ ಸಾವಿಗೆ ಸ್ಪಿಟ್ ಹುಡ್ ಗಳು ಪ್ರಮುಖ ಅಂಶವೆಂದು ಪರಿಶೀಲಿಸಲಾಗಿದೆ.

“ಆತ ನಿರಂತರವಾಗಿ ಉಗುಳುತ್ತಿದ್ದ. ಹಾಗಾಗಿ ಕೊರೊನಾ ಬಗ್ಗೆ ಕಾಳಜಿ ವಹಿಸುತ್ತಿರುವುದರಿಂದ ಅಧಿಕಾರಿಗಳ ನಿರ್ದೇಶನದಲ್ಲಿ ಅವರು ಪ್ರೂಡ್ ಮೇಲೆ ಹುಡ್ ಹಾಕಿದ್ದಾರೆ” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಇನ್ನೂ, ಹಲವು ಹೋರಾಟಗಾರರು ಮತ್ತು ಕಾರ್ಯಕರ್ತರು “ಪ್ರೂಡ್ ಅವರ ಸಾವಿಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕೊಲೆ ಆರೋಪದಲ್ಲಿ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಇಲಾಖೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೊಂದಿರುವ ವ್ಯಕ್ತಿಗಳನ್ನು ನಿಭಾಯಿಸಲು ಅವರು ಸಜ್ಜುಗೊಂಡಿಲ್ಲ ಎಂದು ಪೊಲೀಸರು ಮತ್ತೆ ಮತ್ತೆ ನಮಗೆ ತೋರಿಸಿದ್ದಾರೆ. ಈ ಅಧಿಕಾರಿಗಳಿಗೆ ಕೊಲ್ಲಲು ತರಬೇತಿ ನೀಡಲಾಗುತ್ತದೆ. ಡೇನಿಯಲ್ ಪ್ರೂಡ್ ಅವರನ್ನು ರಕ್ಷಿಸುವ ಬದಲು ಅಪಹಾಸ್ಯ ಮಾಡಲು ಈ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ” ಎಂದು ಸುದ್ದಿಗೋಷ್ಠಿಯಲ್ಲಿ ಫ್ರೀ ದಿ ಪೀಪಲ್ ಆರ್ ಒ ಸಿಯ ಆಶ್ಲೇ ಗ್ಯಾಂಟ್ ಹೇಳಿದರು.

ಪೊಲೀಸ್ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುವ ರೋಚೆಸ್ಟರ್‌ನ ಸಾರ್ವಜನಿಕ ಸುರಕ್ಷತಾ ಕಟ್ಟಡದ ಹೊರಗೆ ಹಲವು ಪ್ರತಿಭಟನಾಕಾರರು ಬುಧವಾರ ಜಮಾಯಿಸಿದರು. “ವಾರೆನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕಟ್ಟಡವನ್ನು ಪ್ರವೇಶಿಸಿದ ನಂತರ ಹಲವಾರು ಸಂಘಟಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಫ್ರೀ ದಿ ಪೀಪಲ್ ಆರ್ ಒ ಸಿ ಹೇಳಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...