Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...