Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...