Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...