Homeಮುಖಪುಟಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಜಿಎಸ್‌ಟಿ ಪರಿಹಾರ ಸಾಲ ಪಡೆಯಲು ಸಿದ್ಧ ಎಂದು ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಈ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹ 2.35 ಲಕ್ಷ ಕೋಟಿ ಕೊರತೆ ಬೀಳುವ ಕಾರಣ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದರು.

ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಒಕ್ಕೂಟ ನೀತಿಗೆ ಅಸಹನೀಯ ಹೊಡೆತ ಎಂದು ತಮ್ಮ ಪತ್ರದಲ್ಲಿ ಅವರು ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜಿಎಸ್‌ಟಿ ಕೊರತೆಗೆ ರಾಜ್ಯಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯಲ್ಲ ಎಂದಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಅಭಿಪ್ರಾಯವನ್ನು ಪತ್ರದಲ್ಲಿ ಟೀಕಿಸಿದ್ದಾರೆ. ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದಿದ್ದ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಬೇಡಿಕೆಗೆ ಮಮತಾ ಬ್ಯಾನರ್ಜಿ ಕೂಡ ಸೇರಿಕೊಂಡಿದ್ದಾರೆ.

41 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೊರೊನಾದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ, ಕೊರೊನಾ ದೇವರ ಕಾರ್ಯ ಎನ್ನುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಸಹಾಯಕತೆ ಪ್ರದರ್ಶಿಸಿದ್ದರು. 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ. ಗೆ ಕುಸಿದಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದರು.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ

ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿರುವ ಆಯ್ಕೆಗಳು ಏಕಪಕ್ಷೀಯವಾದವು ಎಂದು ಮಮತ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಿದ್ದರು. ಆದರೆ ಕೇಂದ್ರ ಸರ್ಕಾರವೇ ರಾಜ್ಯಗಳ ಬಳಿ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

“ಸರಕು ಮತ್ತು ಸೇವಾ ತೆರಿಗೆ ಅಸ್ತವ್ಯಸ್ತವಾಗಿರುವುದು ನನಗೆ ತೀವ್ರ ದುಃಖವಾಗಿದೆ. ಇದು ರಾಜ್ಯ ಸರ್ಕಾರಗಳ ಬಗ್ಗೆ ಭಾರತ ಸರ್ಕಾರದ ನಂಬಿಕೆ ಮತ್ತು ನೈತಿಕ ಹೊಣೆಗಾರಿಕೆಯನ್ನು ದ್ರೋಹಕ್ಕೆ ಸಮನಾಗಿರುತ್ತದೆ, ಇದರಿಂದ ಒಕ್ಕೂಟ ವ್ಯವಸ್ಥೆಯ ನಂಬಿಕೆಯನ್ನು ಹೊಡೆದುಹಾಕಿದೆ” ಎಂದು ಮಮತ ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ರಾಜ್ಯಗಳು ಕೇಂದ್ರಕ್ಕೆ ಸಂಪೂರ್ಣ ವ್ಯಾಟ್ ವಿಧಿಸುವ ಅಧಿಕಾರವನ್ನು ಒಳಗೊಂಡಂತೆ ಶೇಕಡಾ 70 ರಷ್ಟು ಅಧಿಕಾರವನ್ನು ಬಿಟ್ಟುಕೊಟ್ಟಿವೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಅತ್ಯುತ್ತಮ ಉದಾಹರಣೆಯೆಂದು ಜಾಗತಿಕವಾಗಿ ಪ್ರಶಂಸಿಸಲ್ಪಟ್ಟ ಜಿಎಸ್ಟಿ ವಿಷಯಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರದ ನಡುವಿನ ನಂಬಿಕೆಯನ್ನು ನಂಬಬೇಡಿ ಎಂದು ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯಗಳಿಗೆ ಪರಿಹಾರ ನೀಡುವುದು ಕೇಂದ್ರವು ಕರ್ತವ್ಯವಾಗಿದೆ. ಹೀಗಾಗಿ ಕೊರತೆಯನ್ನು ಪೂರೈಸಲು ಕೇಂದ್ರ ಸಾಲ ಪಡೆಯಬೇಕು. ಇದಲ್ಲದೆ, ಭಾರತ ಸರ್ಕಾರವು ತನ್ನ ಸಾಲವನ್ನು ಪೂರೈಸಲು ಸಂಪನ್ಮೂಲಗಳನ್ನು ಸಂಗ್ರಹಿಸಬಹುದು, ಆದರೆ ರಾಜ್ಯಗಳು ತಮ್ಮ ಹಣಕಾಸು ಕುಸಿತದ ಅಂಚಿನಲ್ಲಿರುವಾಗ ಹೆಚ್ಚಿನ ಹೆಚ್ಚುವರಿ ಸಾಲಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ಇತ್ತ ಕೇರಳ ಮತ್ತು ಛತ್ತೀಸ್‌ಗಢ ಸರ್ಕಾರಗಳು ಕೇಂದ್ರ ಸರ್ಕಾರ ಸಾಲ ಪಡೆದು ಬಾಕಿ ನೀಡುವಂತೆ ಒತ್ತಾಯಿಸಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದಾರೆ.

ಸಾಲ ಪಡೆಯಲು ಕರ್ನಾಟಕ ಸಿದ್ಧ

ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ನೀಡಿರುವ ಎರಡು ಆಯ್ಕೆಗಳಲ್ಲಿ ಮೊದಲನೆಯದನ್ನು ಆಯ್ಕೆ ಮಾಡಿಕೊಂಡಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಪ್ರಕಾರ ಒಟ್ಟು 18,289 ಕೋಟಿ ರೂ. ಪರಿಹಾರ ಪಡೆಯಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆದಾಯ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ ಎಂದು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ತಮ್ಮ ಜಿಎಸ್‌ಟಿ ಹಕ್ಕುಗಳಿಗಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿ ಮೋದಿಗೆ ಪತ್ರ ಬರೆದು ಪ್ರತಿರೋಧ ತೋರಿಸುತ್ತಿವೆ. ಆದರೆ ಬಿಜೆಪಿ ಆಡಳಿತವಿರುವ ಸರ್ಕಾರಗಳು ಕೇಂದ್ರ ಸರ್ಕಾರದಿಂದ ಸಾಲ ಪಡೆಯಲು ನಿರ್ಧರಿಸುತ್ತಿದ್ದು, ಅದರಲ್ಲಿ ಕರ್ನಾಟಕ ಮೊದಲನೆಯದ್ದಾಗಿದೆ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...