Homeಮುಖಪುಟಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ನಿರ್ಧಾರದ ನಂತರ  ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಲೆಕ್ಕಪರಿಶೋಧನೆಯನ್ನು ಇನ್ನು ಮುಂದೆ ಸಿಎಜಿ ಮಾಡಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತಿಳಿಸಿದೆ. ಇಷ್ಟು ದಿನ ಆಂಧ್ರಪ್ರದೇಶ ರಾಜ್ಯ ಲೆಕ್ಕಪರಿಶೋಧನಾ ವಿಭಾಗವು ಲೆಕ್ಕಪರಿಶೋಧನಾ ವರದಿಗಳನ್ನು ನೋಡಿಕೊಳ್ಳುತ್ತಿತ್ತು.

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ದೇವಸ್ಥಾನದ ಲೆಕ್ಕಪರಿಶೋಧನಾ ವರದಿಗಳನ್ನು ಈಗ ಭಾರತದ ಕಂಟ್ರೋಲರ್ ಮತ್ತು ಲೆಕ್ಕಪರಿಶೋಧಕ ಜನರಲ್ (ಸಿಎಜಿ) ಮಾಡಲಿದ್ದಾರೆ ಎಂದು ಟಿಟಿಡಿ ಮಂಡಳಿ ಬುಧವಾರ ತಿಳಿಸಿದೆ.

ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಕಳೆದ ಐದು ವರ್ಷಗಳಿಂದ ಟಿಟಿಡಿ ಖಾತೆಗಳ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಇನ್ನು ಬಾಕಿ ಇರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ.

ಟಿಟಿಡಿ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ನಾನು ಮತ್ತು ನನ್ನ ಸಹವರ್ತಿ ಸತ್ಯಪಾಲ್ ಸಭರ್ವಾಲ್ ಕಳೆದ 5 ವರ್ಷಗಳಿಂದ ತಿರುಪತಿ ದೇವಾಲಯದ ನಿಧಿಯ ಸಿಎಜಿ ಲೆಕ್ಕಪರಿಶೋಧನೆಗೆ ಕೋರಿ ಆಂಧ್ರ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದೆವು. ಆಂಧ್ರ ಪ್ರದೇಶ ಸಿಎಂ ಜಗನ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಟಿಟಿಡಿ ಅಧ್ಯಕ್ಷರಾದ ಸುಬ್ಬಾ ರೆಡ್ಡಿ ಮತ್ತು ಸದಸ್ಯ ಮತ್ತು ವಿಎಚ್‌ಎಸ್‌ ಎಪಿ ನಾಯಕ ಗೋವಿಂದ್ ಹರಿ ಇದನ್ನು ಟಿಟಿಡಿ ಮಂಡಳಿಯ ಮೂಲಕ ಪ್ರಾಯೋಗಿಕವಾಗಿ ನಡೆಸಿದರು. ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

ಈ ಕುರಿತು ವಕೀಲ ಸತ್ಯಪಾಲ್ ಸಭರ್ವಾಲ್ ಕೂಡ ಟ್ವೀಟ್ ಮಾಡಿದ್ದು, 5 ವರ್ಷಗಳಿಂದ ಸಿಎಜಿಯಿಂದ ಬಾಹ್ಯ ಲೆಕ್ಕಪರಿಶೋಧನೆಗೆ ನಾನು ಪ್ರಾರ್ಥಿಸುತ್ತಿದ್ದೇನೆ. ಇದೊಂದು ಬೃಹತ್ ಗೆಲುವು ಎಂದಿದ್ದಾರೆ.

ಟಿಟಿಡಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅಂಗೀಕರಿಸಿದ 202 ಪುಟಗಳ ನಿರ್ಣಯದಲ್ಲಿ 2020-2021 ರಿಂದ ಟಿಟಿಡಿಯ ಲೆಕ್ಕಪರಿಶೋಧನೆಯನ್ನು ಸಿಎಜಿಗೆ ವಹಿಸಲು ಮಂಡಳಿ ನಿರ್ಧರಿಸಿದೆ.

ಜೊತೆಗೆ 2014-2015 ರಿಂದ 2019-2020 ರವರೆಗಿನ ಲೆಕ್ಕಪರಿಶೋಧನಾ ವರದಿಯನ್ನು ಈಗಾಗಲೇ ರಾಜ್ಯ ಲೆಕ್ಕಪರಿಶೋಧನಾ ಇಲಾಖೆ ಪೂರ್ಣಗೊಳಿಸಿರುವುದರಿಂದ, ಅದೇ ಅವಧಿಯ ವಿಶೇಷ ಲೆಕ್ಕಪರಿಶೋಧನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಆರು ತಿಂಗಳೊಳಗೆ ತನ್ನ ವರದಿಯನ್ನು ನೀಡುವಂತೆ ಸಿಎಜಿಗೆ ಮನವಿ ಮಾಡಲು ಮಂಡಳಿ ರಾಜ್ಯ ಸರ್ಕಾರವನ್ನು ಕೋರಿದೆ.

ಟಿಟಿಡಿ ದೇವಸ್ಥಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಷಯದಲ್ಲಿ ಏನೂ ಮಾಡಿಲ್ಲ. ಈಗ ನಮಗೆ ಹೊಸ ಮುಖ್ಯಮಂತ್ರಿ ಇದ್ದಾರೆ. ಕಳೆದ ಐದು ವರ್ಷಗಳಿಂದ ತಿರುಮಲ ದೇವಸ್ಥಾನದ ಖಾತೆಗಳನ್ನು ಲೆಕ್ಕಪರಿಶೋಧಿಸಲು ಸಿಎಜಿ ಅಥವಾ ಇನ್ನಿತರ ಸ್ವತಂತ್ರ ಸಂಸ್ಥೆಗೆ ಅವಕಾಶ ನೀಡುವಂತೆ ನಾನು ಕೇಳುತ್ತಿದ್ದೇನೆ ಮತ್ತು ಭಕ್ತರು ಠೇವಣಿ ಇಟ್ಟ ಹಣಕ್ಕೆ ಏನಾಯಿತು ಎಂದು ನಮಗೆ ತಿಳಿಯಬೇಕಿದೆ ಎಂದಿದ್ದಾರೆ ಸುಬ್ಬಾ ರೆಡ್ಡಿ.

ಸದ್ಯ ಟಿಟಿಡಿ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿ ಹೈಕೋರ್ಟ್‌ಗೆ ಅಫಿಡವಿಟ್ ಕಳುಹಿಸುತ್ತದೆ. ಲೆಕ್ಕಪರಿಶೋಧನಾ ವರದಿಯಲ್ಲಿ ಸಾಮಾನ್ಯವಾಗಿ ದೇವಾಲಯದ ಎಲ್ಲಾ ಖಾತೆಗಳು, ಹಣದ ಬಳಕೆ ಮತ್ತು ಆಭರಣಗಳು ಸೇರಿದಂತೆ ಸಮಗ್ರ ವಿವರಗಳಿರುತ್ತವೆ.


ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...