Homeಮುಖಪುಟ’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್...

’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್ ಥಿಂಕರ್-2020 ಗೌರವ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ 3 ನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಪ್ರಾಸ್ಪೆಕ್ಟ್ ನಿಯತಕಾಲಿಕವು ತತ್ವಜ್ಞಾನಿಗಳು, ಬುದ್ಧಿಜೀವಿಗಳು, ಕಲಾವಿದರು, ವಿಜ್ಞಾನಿಗಳು ಮತ್ತು ಬರಹಗಾರರನ್ನು ಒಳಗೊಂಡಂತೆ ‘ಟಾಪ್ 50 ಚಿಂತಕರು-2020’ ಅನ್ನು ಓದುಗರ ಮತದಾನ, ತಜ್ಞರು ಮತ್ತು ಸಂಪಾದಕರ ಸಮಿತಿಯ ಅಭಿಪ್ರಾಯದ ಆಧಾರದ ಮೇಲೆ ಆಯ್ಕೆ ಮಾಡಿತ್ತು.

ಇದೀಗ ಸಚಿವೆ ಕೆ.ಕೆ. ಶೈಲಜ ಮೊದಲ ಸ್ಥಾನಿಯಾಗಿದ್ದು, ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ ಮೂರನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ವಿಶೇಷವೆಂದರೆ, ಇದರ ಅಗ್ರ 50 ರ ಪಟ್ಟಿಯಲ್ಲಿ ಒಟ್ಟು 26 ಮಹಿಳೆಯರು ಸ್ಥಾನ ಪಡೆದಿದ್ದಾರೆ, ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

“2018 ರ ಮಾರಣಾಂತಿಕ ನಿಪಾ ಕಾಯಿಲೆ ನಿಭಾಯಿಸಲು ತೋರಿದ ಚತುರತೆಯನ್ನು ’ವೈರಸ್’ ಸಿನಿಮಾದಲ್ಲಿ ಸ್ಮರಿಸಲಾಯಿತು” ಎಂದು ಪತ್ರಿಕೆ ಕೇರಳ ಆರೋಗ್ಯ ಸಚಿವರನ್ನು ಹೊಗಳಿದೆ.

ಕೇರಳ ಆರೋಗ್ಯ ಮಂತ್ರಿ ಕೆ.ಕೆ ಶೈಲಜಾ

ಪ್ರಾಸ್ಪೆಕ್ಟ್ ಪ್ರಕಾರ, “ಶೈಲಾಜಾ ಟೀಚರ್‌ 2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ, ಜನವರಿಯಲ್ಲಿ ಕೊರೊನಾ ಇನ್ನೂ ಚೀನಾದಲ್ಲಿದ್ದಾಗ ಅದರ ಅನಿವಾರ್ಯ ಆಗಮನವನ್ನು ನಿಖರವಾಗಿ ಮುನ್ಸೂಚನೆ ನೀಡಿದ್ದಲ್ಲದೆ, ಅದರ ಪರಿಣಾಮಗಳನ್ನು ಸಂಪೂರ್ಣವಾಗಿ ಗ್ರಹಿಸಿದ್ದರು. ಅವರು ಶೀಘ್ರವಾಗಿ ವಿಶ್ವ ಆರೋಗ್ಯ ಸಂಸ್ಥೆಯ “ಪರೀಕ್ಷೆ, ಜಾಡು ಮತ್ತು ಪ್ರತ್ಯೇಕಿಸುವ” ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತಂದರು. ಮತ್ತು ವಿಮಾನ ನಿಲ್ದಾಣಗಳಲ್ಲಿ ಹಿಡಿತ ಸಾಧಿಸುವ ಮೂಲಕ ನಿರ್ಣಾಯಕ ಸಮಯವನ್ನು ಪಡೆದರು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!

ಸಾಂಕ್ರಮಿಕವು ಆರಂಭಿಕ ಹಂತದಲ್ಲಿರುವಾಗ ಕೆ.ಕೆ.ಶೈಲಜಾ ರಾಜ್ಯದಲ್ಲಿ ಕೊರೊನಾ ವೈರಸನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಲ್ಲದೆ, ವೈರಸ್ ಹರಡುವ ರೇಖೆಯನ್ನು ಚಪ್ಪಟೆಗೊಳಿಸುವುದಕ್ಕೆ ಜಾಗತಿಕ ಮನ್ನಣೆ ಪಡೆದರು. ಯುಕೆ ಪತ್ರಿಕೆ ‘ದಿ ಗಾರ್ಡಿಯನ್’ ತನ್ನ ಲೇಖನದಲ್ಲಿ ಸಚಿವರನ್ನು ‘ಕೊರೊನಾ ವೈರಸ್ ಸ್ಲೇಯರ್’ ಮತ್ತು ’ರಾಕ್ ಸ್ಟಾರ್ ಆರೋಗ್ಯ ಮಂತ್ರಿ ’ಎಂದು ಶ್ಲಾಘಿಸಿದೆ.

ಕೊರೊನಾ ಸಾಂಕ್ರಾಮಿಕ ವಿರುದ್ದ ಹೋರಾಡುತ್ತಿರುವ ಸಾರ್ವಜನಿಕ ಸೇವಕರನ್ನು ಗೌರವಿಸಲು ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಲು ವಿಶ್ವಸಂಸ್ಥೆಯು ಶೈಲಾಜಾ ಅವರನ್ನು ಆಹ್ವಾನಿಸಿ ಗೌರವಿಸಿತ್ತು.

ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಬರಹಗಾರ ಮತ್ತು ಬುಕರ್ ಪ್ರಶಸ್ತಿ ವಿಜೇತ ಹಿಲರಿ ಮಾಂಟೆಲ್ ಮತ್ತು ಪರಿಸರವಾದಿ ಡೇವಿಡ್ ಅಟೆನ್‌ಬರೋ ಈ ಪಟ್ಟಿಯಲ್ಲಿರುವ ಇತರ ಕೆಲವು ಹೆಸರುಗಳು.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...