Homeಮುಖಪುಟ’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್...

’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್ ಥಿಂಕರ್-2020 ಗೌರವ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ 3 ನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಪ್ರಾಸ್ಪೆಕ್ಟ್ ನಿಯತಕಾಲಿಕವು ತತ್ವಜ್ಞಾನಿಗಳು, ಬುದ್ಧಿಜೀವಿಗಳು, ಕಲಾವಿದರು, ವಿಜ್ಞಾನಿಗಳು ಮತ್ತು ಬರಹಗಾರರನ್ನು ಒಳಗೊಂಡಂತೆ ‘ಟಾಪ್ 50 ಚಿಂತಕರು-2020’ ಅನ್ನು ಓದುಗರ ಮತದಾನ, ತಜ್ಞರು ಮತ್ತು ಸಂಪಾದಕರ ಸಮಿತಿಯ ಅಭಿಪ್ರಾಯದ ಆಧಾರದ ಮೇಲೆ ಆಯ್ಕೆ ಮಾಡಿತ್ತು.

ಇದೀಗ ಸಚಿವೆ ಕೆ.ಕೆ. ಶೈಲಜ ಮೊದಲ ಸ್ಥಾನಿಯಾಗಿದ್ದು, ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ ಮೂರನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ವಿಶೇಷವೆಂದರೆ, ಇದರ ಅಗ್ರ 50 ರ ಪಟ್ಟಿಯಲ್ಲಿ ಒಟ್ಟು 26 ಮಹಿಳೆಯರು ಸ್ಥಾನ ಪಡೆದಿದ್ದಾರೆ, ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

“2018 ರ ಮಾರಣಾಂತಿಕ ನಿಪಾ ಕಾಯಿಲೆ ನಿಭಾಯಿಸಲು ತೋರಿದ ಚತುರತೆಯನ್ನು ’ವೈರಸ್’ ಸಿನಿಮಾದಲ್ಲಿ ಸ್ಮರಿಸಲಾಯಿತು” ಎಂದು ಪತ್ರಿಕೆ ಕೇರಳ ಆರೋಗ್ಯ ಸಚಿವರನ್ನು ಹೊಗಳಿದೆ.

ಕೇರಳ ಆರೋಗ್ಯ ಮಂತ್ರಿ ಕೆ.ಕೆ ಶೈಲಜಾ

ಪ್ರಾಸ್ಪೆಕ್ಟ್ ಪ್ರಕಾರ, “ಶೈಲಾಜಾ ಟೀಚರ್‌ 2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ, ಜನವರಿಯಲ್ಲಿ ಕೊರೊನಾ ಇನ್ನೂ ಚೀನಾದಲ್ಲಿದ್ದಾಗ ಅದರ ಅನಿವಾರ್ಯ ಆಗಮನವನ್ನು ನಿಖರವಾಗಿ ಮುನ್ಸೂಚನೆ ನೀಡಿದ್ದಲ್ಲದೆ, ಅದರ ಪರಿಣಾಮಗಳನ್ನು ಸಂಪೂರ್ಣವಾಗಿ ಗ್ರಹಿಸಿದ್ದರು. ಅವರು ಶೀಘ್ರವಾಗಿ ವಿಶ್ವ ಆರೋಗ್ಯ ಸಂಸ್ಥೆಯ “ಪರೀಕ್ಷೆ, ಜಾಡು ಮತ್ತು ಪ್ರತ್ಯೇಕಿಸುವ” ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತಂದರು. ಮತ್ತು ವಿಮಾನ ನಿಲ್ದಾಣಗಳಲ್ಲಿ ಹಿಡಿತ ಸಾಧಿಸುವ ಮೂಲಕ ನಿರ್ಣಾಯಕ ಸಮಯವನ್ನು ಪಡೆದರು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!

ಸಾಂಕ್ರಮಿಕವು ಆರಂಭಿಕ ಹಂತದಲ್ಲಿರುವಾಗ ಕೆ.ಕೆ.ಶೈಲಜಾ ರಾಜ್ಯದಲ್ಲಿ ಕೊರೊನಾ ವೈರಸನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಲ್ಲದೆ, ವೈರಸ್ ಹರಡುವ ರೇಖೆಯನ್ನು ಚಪ್ಪಟೆಗೊಳಿಸುವುದಕ್ಕೆ ಜಾಗತಿಕ ಮನ್ನಣೆ ಪಡೆದರು. ಯುಕೆ ಪತ್ರಿಕೆ ‘ದಿ ಗಾರ್ಡಿಯನ್’ ತನ್ನ ಲೇಖನದಲ್ಲಿ ಸಚಿವರನ್ನು ‘ಕೊರೊನಾ ವೈರಸ್ ಸ್ಲೇಯರ್’ ಮತ್ತು ’ರಾಕ್ ಸ್ಟಾರ್ ಆರೋಗ್ಯ ಮಂತ್ರಿ ’ಎಂದು ಶ್ಲಾಘಿಸಿದೆ.

ಕೊರೊನಾ ಸಾಂಕ್ರಾಮಿಕ ವಿರುದ್ದ ಹೋರಾಡುತ್ತಿರುವ ಸಾರ್ವಜನಿಕ ಸೇವಕರನ್ನು ಗೌರವಿಸಲು ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಲು ವಿಶ್ವಸಂಸ್ಥೆಯು ಶೈಲಾಜಾ ಅವರನ್ನು ಆಹ್ವಾನಿಸಿ ಗೌರವಿಸಿತ್ತು.

ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಬರಹಗಾರ ಮತ್ತು ಬುಕರ್ ಪ್ರಶಸ್ತಿ ವಿಜೇತ ಹಿಲರಿ ಮಾಂಟೆಲ್ ಮತ್ತು ಪರಿಸರವಾದಿ ಡೇವಿಡ್ ಅಟೆನ್‌ಬರೋ ಈ ಪಟ್ಟಿಯಲ್ಲಿರುವ ಇತರ ಕೆಲವು ಹೆಸರುಗಳು.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...